ಲಾಕ್ಡೌನ್ ನಿಯಮ ಉಲ್ಲಂಘಿಸಿದ ಸಿಎಂ ಪುತ್ರ ವಿಜಯೇಂದ್ರ!
ಮೈಸೂರು, ಮೇ 18: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ರಾಜ್ಯದಲ್ಲಿ ಲಾಕ್ಡೌನ್ ಘೋಷಿಸಿ ದೇವಾಲಯಗಳ ದರ್ಶನಕ್ಕೂ ನಿರ್ಬಂಧ ಹೇರಲಾಗಿದೆ.
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ ವಿಜಯೇಂದ್ರ ಅವರು ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದಿದ್ದಲ್ಲದೆ, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿರುವುದಕ್ಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಗಳು ವ್ಯಕ್ತವಾಗಿವೆ.
ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಸಿಎಂ ಪುತ್ರ ಬಿ.ವೈ ವಿಜಯೇಂದ್ರ ಅವರು ಪತ್ನಿ ಸಹಿತ ದೇವಾಲಯಕ್ಕೆ ಭೇಟಿ ನೀಡಿದ್ದೆಷ್ಟು ಸರಿ? ಇದು ಕೋವಿಡ್ ನಿಯಮದ ಉಲ್ಲಂಘನೆ ಅಲ್ಲವೆ ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಮಂಗಳವಾರ ಪತ್ನಿ ಸಹಿತ ದೇವಾಲಯಕ್ಕೆ ಭೇಟಿ ನೀಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ರವೀಂದ್ರ ಅವರು ಬರಮಾಡಿಕೊಂಡು ದೇಗುಲದ ಬಾಗಿಲು ತೆರೆದು ದೇವಾಲಯದೊಳಗೆ ಪೂಜೆ ಸಲ್ಲಿಸಲು ಅವಕಾಶ ಮಾಡಿಕೊಟ್ಟರು. ಸುಮಾರು ಅರ್ಧಗಂಟೆ ಶ್ರೀಕಂಠೇಶ್ವರನಿಗೆ ಪೂಜೆ ಸಲ್ಲಿಸಿ ಪ್ರಾರ್ಥನೆ ಗೈದ ದಂಪತಿ ಬಳಿಕ ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಆ ನಂತರ ನದಿಗೆ ಬಾಗಿನ ಅರ್ಪಿಸಿದ್ದಾರೆ. ಸುಮಾರು ಎಂಟು ಮಂದಿ ಗನ್ ಮ್ಯಾನ್ ಗಳೊಂದಿಗೆ ಆಗಮಿಸಿದ ವಿಜಯೇಂದ್ರ ದಂಪತಿ ಬಳಿ ಸಾರ್ವಜನಿಕರು ಸುಳಿಯದಂತೆ ನೋಡಿಕೊಳ್ಳಲಾಯಿತಲ್ಲದೆ, ಮಾಧ್ಯಮದವರಿಗೆ ಚಿತ್ರೀಕರಣ ಮಾಡದಂತೆ ಎಚ್ಚರಿಕೆ ನೀಡಲಾಗಿತ್ತು.

ಕಾನೂನು ಜಾರಿ ಮಾಡುವವರೇ ಕಾನೂನು ಪಾಲನೆ ಮಾಡದೆ ಹೋದರೆ ಲಾಕ್ಡೌನ್ ಮಾಡಬೇಕಾದ ಅಗತ್ಯವೇನಿತ್ತು? ಕಳೆದ ಒಂದು ತಿಂಗಳಿನಿಂದ ಪುರೋಹಿತರು ಹೊರತುಪಡಿಸಿ ಸಾರ್ವಜನಿಕರು ದೇವಸ್ಥಾನಕ್ಕೆ ಭೇಟಿ ನೀಡದೆ ಹೊರಗಿನಿಂದಲೇ ದೇವರಿಗೆ ಕೈಮುಗಿದು ಹೋಗುತ್ತಿದ್ದರು. ಆದರೆ ಲಾಕ್ಡೌನ್ ಹೇರಿರುವ ಕಾಲದಲ್ಲಿ ದೇವರ ದರ್ಶನ ಮಾಡುವ ಜರೂರು ಏನಿತ್ತು ಎಂದು ಜನ ಕೇಳುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಿಎಂ ಪುತ್ರನಿಗೊಂದು ನ್ಯಾಯ..? ಸಾಮಾನ್ಯರಿಗೊಂದು ನ್ಯಾಯವೇ? ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications