ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ ಎಣಿಕೆಗೂ ಮುನ್ನ ಚಾಮುಂಡಿ ದೇವಿಯ ದರ್ಶನ ಪಡೆದ ನಿಖಿಲ್

|
Google Oneindia Kannada News

ಮೈಸೂರು, ಮೇ 23 : ಮಂಡ್ಯ ಗೆಲುವಿಗಾಗಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಚಾಮುಂಡಿದೇವಿಗೆ ಮೊರೆಹೋದರು. ಇಂದು ಬೆಳಗಿನ ಜಾವ 5ಕ್ಕೆ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ ನಿಖಿಲ್ ನಾಡ ಅಧಿದೇವತೆ ತಾಯಿ ಚಾಮುಂಡೇಶ್ವರಿ ಆಶೀರ್ವಾದ ಪಡೆದರು. ವಿಶೇಷ ಪೂಜೆಯನ್ನು ಇದೇ ವೇಳೆ ಸಲ್ಲಿಸಿದರು.

ನಿಖಿಲ್ ಕುಮಾರಸ್ವಾಮಿ ಜೊತೆಗೆ ಮೈಸೂರು ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ಶಾಸಕ ಸುರೇಶ್ ಗೌಡ, ಎಂ.ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷ ಜಿ.ಡಿ. ಹರೀಶ್ ಗೌಡ, ಸಚಿವರಾದ ಸಿ.ಎಸ್. ಪುಟ್ಟರಾಜು ಪುತ್ರ ಶಿವರಾಜು, ಡಿ.ಸಿ. ತಮ್ಮಣ್ಣ ಪುತ್ರ ಸಂತೋಷ್ ಸಹ ಸಾಥ್ ನೀಡಿದರು.

ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್ಕರ್ನಾಟಕ ಲೋಕಸಭೆ ಚುನಾವಣಾ ಫಲಿತಾಂಶ LIVE: ಚಾಮುಂಡೇಶ್ವರಿ ಮೊರೆ ಹೋದ ನಿಖಿಲ್

ಇದೇ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ಗೆಲ್ಲೋದು ನಾನೇ. ನನಗೆ ಚುನಾವಣೋತ್ತರ ಸಮೀಕ್ಷೆ ಬಗ್ಗೆ ಚಿಂತೆಯಿಲ್ಲ. ಗೆಲುವು ನಮ್ಮದೇ ಎಂದು ಮತ್ತೊಮ್ಮೆ ವಿಶ್ವಾಸ ವ್ಯಕ್ತಪಡಿಸಿದರು.

Coalition candidate Nikhil Kumarswamy visited Chamundi Hills

ತಾಯಿ ಚಾಮುಂಡೇಶ್ವರಿ ಭೇಟಿಗೆ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಸಹ ಭಾಗಿಯಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆಂಬ ಮಾಹಿತಿ ಸಹ ಲಭ್ಯವಾಗಿದೆ.

English summary
Lok Sabha election results 2019: Coalition candidate of Mandya Nikhil Kumarswamy visited Chamundi Hills, Seeking victory in Mandya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X