ಶಿವಲಿಂಗಕ್ಕೆ ಬಿಜೆಪಿ ಶಾಲು ಹೊದಿಸಿ ಪೂಜೆ : ಸಂಸದ ಪ್ರತಾಪ್ ಸಿಂಹ ವಿರುದ್ಧ ದೂರು
Recommended Video

ಮೈಸೂರು, ಮಾರ್ಚ್ 29 : ಚುನಾವಣಾ ಪ್ರಚಾರದ ವೇಳೆ ಸಂಸದ ಪ್ರತಾಪ್ ಸಿಂಹ ಅವರು ದೇವರ ವಿಗ್ರಹಕ್ಕೆ ಬಿಜೆಪಿ ಶಾಲು ಹೊದಿಸಿದ್ದಾರೆ. ಹಾಗಾಗಿ ಅವರು ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಮೈಸೂರು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.
ದೇವರ ಮೇಲೆ ಬಿಜೆಪಿ ಶಾಲು ಹಾಕಿ ಪೂಜೆ ಮಾಡಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೈಸೂರಿನ ಸಿದ್ದಲಿಂಗಪುರದಲ್ಲಿ ಈ ಘಟನೆ ನಡೆದಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಒಳಪಡುವ ಸಿದ್ದಲಿಂಗಪುರದ ಚಂದ್ರಮೌಳೇಶ್ವರ ಸ್ವಾಮಿ ದೇವರ ಮೇಲೆ ಶಾಲು ಹಾಕಿ ಪ್ರತಾಪ್ ಸಿಂಹ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ ತಮ್ಮ ಐದು ವರ್ಷದ ಸಾಧನೆ ಕೈಪಿಡಿ ದೇವರ ಮುಂದಿಟ್ಟು ಪೂಜೆ ಮಾಡಿಸಿದ್ದಾರೆ.

ಶಿವಲಿಂಗದ ನಾಗರ ಹೆಡೆಗೆ ಬಿಜೆಪಿ ಶಾಲು ಧಾರಣೆ ಮಾಡಿಸಿ, ಶಿವಲಿಂಗದ ಮೇಲೆ ಸಂಸದರ ಸಾಧನೆ ಕೈಪಿಡಿ ಇಟ್ಟು ಪೂಜೆ ಸಲ್ಲಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಕಾಂಗ್ರೆಸ್ ನಾಯಕರು, ಪ್ರತಾಪ್ ಸಿಂಹ ಪ್ರಚಾರದ ವೇಳೆ ಧಾರ್ಮಿಕ ಭಾವನೆ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರೋಪಿಸಿದ್ದಾರೆ.

ಸಂಸದ ಪ್ರತಾಪ್ ಸಿಂಹ ಅವರು ದೇವಸ್ಥಾನದಲ್ಲೂ ರಾಜಕೀಯ ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ.












Click it and Unblock the Notifications