ಮೈಸೂರು: ಕೋವಿಡ್ ಸಂಕಷ್ಟದಲ್ಲಿ ವಿದ್ಯಾರ್ಥಿನಿಯರ 'ಮನ ಮೆಚ್ಚುವ' ಕಾರ್ಯ
ಮೈಸೂರು, ಮೇ 12: ಕೋವಿಡ್ ಸಂಕಷ್ಟಕ್ಕೆ ಇಡೀ ಕರುನಾಡು ಕಂಗೆಟ್ಟಿದ್ದು, ಮೈಸೂರು ಜಿಲ್ಲೆಯಲ್ಲಿ ಪರಿಸ್ಥಿತಿ ದಿನೇ ದಿನೇ ಬಿಗುಡಾಯಿಸುತ್ತಿದೆ. ಬಡವರು ಹಾಗೂ ಅಸಹಾಯಕರು ದಿಕ್ಕು ತೋಚದಂತಾಗಿದ್ದಾರೆ.
ಇಂತಹ ಸಂದರ್ಭದಲ್ಲಿ ಮೈಸೂರಿನ ವಿದ್ಯಾರ್ಥಿನಿಯರು ವಿನೂತನ ಪ್ರಯತ್ನ ನಡೆಸ್ತಿದ್ದಾರೆ. ಲಾಕ್ಡೌನ್ ಸಂಕಷ್ಟದಲ್ಲಿ ಬಡವರಿಗೆ ನೆರವಾಗುವ ಮೂಲಕ ಮೈಸೂರಿನ ಕಾಲೇಜು ವಿದ್ಯಾರ್ಥಿನಿಯರು ಮಾದರಿಯಾಗಿದ್ದಾರೆ.

ಹೌದು, ಯುವತಿಯರು ಕೋವಿಡ್ ವಿರುದ್ಧ ಟೊಂಕಕಟ್ಟಿ ನಿಂತಿದ್ದು, ಸಮಾಜ ಸೇವೆಗೆ ಇಳಿದಿದ್ದಾರೆ. ಧೈರ್ಯದಿಂದ ಮನೆಯಿಂದ ಹೊರ ಬಂದು ಜನಸೇವೆ ಮಾಡುತ್ತಿರುವ ವಿದ್ಯಾರ್ಥಿನಿಯರು, ರಸ್ತೆ ಬದಿ, ಸ್ಲಂ ನಿವಾಸಿಗಳಿಗೆ ಸ್ವಂತ ಹಣದಿಂದ ಅಗತ್ಯ ವಸ್ತುಗಳು, ಉಪಾಹಾರ, ಮಾಸ್ಕ್, ಸ್ಯಾನಿಟೈಜರ್ ಅನ್ನು ಉಚಿತವಾಗಿ ನೀಡುತ್ತಿದ್ದಾರೆ. ಕೋವಿಡ್ ಸಂಕಷ್ಟದ ಸ್ಥಿತಿಯಲ್ಲಿ ಈ ರೀತಿಯ ಸಾಮಾಜಿಕ ಕಳಕಳಿಗೆ ಜನರು ಶಹಬ್ಬಾಸ್ ಅಂತಿದ್ದಾರೆ.

ಸ್ವಂತ ಹಣದಿಂದ ಖರ್ಚು
ಇನ್ನು, ಸಮಾಜಕ್ಕೆ ಏನನ್ನಾದರೂ ಕೊಡ್ಬೇಕು ಅನ್ನೋ ಉದ್ದೇಶದಿಂದ ವಿದ್ಯಾರ್ಥಿನಿಯರು ಈ ಕೆಲಸ ಮಾಡ್ತಿದ್ದಾರೆ. ಮೈಸೂರಿನಲ್ಲಿ ಈ ಕೆಲಸಕ್ಕೆ ಪ್ರಶಂಸೆ ಕೂಡ ಸಿಕ್ಕಿದೆ. ಈ ಕಾರ್ಯಕ್ಕೆ ಸ್ವಂತ ಹಣ ಖರ್ಚು ಮಾಡುತ್ತಿದ್ದು, ಓದುವ ವಯಸ್ಸಿಗೆ ಈ ರೀತಿಯ ಸಮಾಜಮುಖಿ ಕೆಲಸಕ್ಕೆ ಕೈ ಹಾಕಿರುವುದು ಶ್ಲಾಘನೀಯವಾಗಿದೆ.

ಇನ್ನು ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಅಂತಿಮ ಬಿ.ಎ ವಿದ್ಯಾರ್ಥಿಗಳ ಈ ಕಾರ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಕೂಡ ವ್ಯಕ್ತವಾಗಿದೆ. ಯುವತಿಯರ ಕಾರ್ಯಕ್ಕೆ ಎಲ್ಲರೂ ಸಲಾಂ ಅಂದಿದ್ದು, ಇದನ್ನೇ ಮುಂದುವರೆಸಿ ಹೋಗುವಂತೆ ಸಲಹೆ ಕೊಟ್ಟಿದ್ದಾರೆ.
-
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ -
ಇನ್ಮುಂದೆ ಗ್ರಾಮೀಣ ವಿದ್ಯಾರ್ಥಿಗಳಿಗೆ ಸರ್ಕಾರದಿಂದಲೇ ಸಿಗಲಿದೆ ಉಚಿತ 'NEET' ತರಬೇತಿ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
CBSE 12ನೇ ತರಗತಿಯ ಹಿಂದಿ ಪರೀಕ್ಷೆ: ಪ್ರಶ್ನೆಪತ್ರಿಕೆ ಸುಲಭ, ನಿಗದಿತ ಸಮಯದಲ್ಲೇ ಪರೀಕ್ಷೆ ಬರೆದು ನಿರಾಳರಾದ ವಿದ್ಯಾರ್ಥಿಗಳು -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ












Click it and Unblock the Notifications