ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ರಿಂದ ಸಮಾಜ ಒಡೆಯುವ ಹುನ್ನಾರ : ಸಿ.ಟಿ.ರವಿ ಆರೋಪ
ಕೆಂಪು ಉಗ್ರರು ಕಾಂಗ್ರೆಸ್ ಹಾಗೂ ಇತರರ ಪಕ್ಷವನ್ನು ಆಶ್ರಯಿಸಿ ಅಧಿಕಾರಕ್ಕೆ ಬಂದಿದ್ದು, ಸೈನ್ಯ ಹಾಗೂ ಸಮಾಜದ ಜನರನ್ನು ದುರ್ಬಲ ಗೊಳಿಸಲು ಮುಂದಾಗಿದ್ದಾರೆ ಎಂದು ಚಿಕ್ಕಮಗಳೂರು ಬಿಜೆಪಿ ಶಾಸಕ ಸಿ ಟಿ ರವಿ ಹೇಳಿದು.
ಮೈಸೂರು, ಮಾರ್ಚ್ 1 : ಕಾಂಗ್ರೆಸ್ ಮತ್ತು ಕಮ್ಯುನಿಷ್ಟ್ ರು ಒಂದಾಗಿದ್ದು, ಹೊಸ ರೂಪದಲ್ಲಿ ಸಮಾಜ ಒಡೆಯಲು ಹುನ್ನಾರ ನಡೆಸುತ್ತಿದ್ದಾರೆ ಎಂದು ಚಿಕ್ಕಮಗಳೂರು ಶಾಸಕ ಸಿ.ಟಿ.ರವಿ ಆರೋಪಿಸಿದರು.
ಮೈಸೂರಿನಲ್ಲಿ ಜಿಲ್ಲಾಧಿಕಾರಿ ಕಚೇರಿಗಳ ಮುಂಭಾಗ ಸಿಟಿಜನ್ಸ್ ಫಾರ್ ಡೆಮಾರ್ಕಸಿ ಸಂಘಟನೆ ವತಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಿ.ಟಿ.ರವಿ ಮಾತನಾಡಿ ಕಮ್ಯುನಿಷ್ಟರ ಮುಖವಾಡ ಬಯಲು ಮಾಡಲು ಈ ಪ್ರತಿಭಟನೆ ನಡೆಸುತ್ತಿದ್ದೇವೆ ಎಂದರು.
ಬಂದೂಕು ಹಾಗೂ ಭಯೋತ್ಪಾದನೆ ಮೂಲಕ ಅಧಿಕಾರ ಹಿಡಿಯುತ್ತಿದ್ದಾರೆ. ಕೇರಳದಲ್ಲಿ 35 ವರ್ಷದಲ್ಲಿ 300ಕ್ಕೂ ಹೆಚ್ಚು ಕಾರ್ಯಕರ್ತರು ಬಲಿಯಾಗಿದ್ದಾರೆ. ಮನೆ, ಮಠ ಕಳೆದುಕೊಂಡಿದ್ದಾರೆ.. 1969 ರಲ್ಲಿ ದಲಿತ ಕಾರ್ಯಕರ್ತರನ್ನು ವಣಿಕಲ್ ರಾಮಕೃಷ್ಣ ಹತ್ಯೆ ಮಾಡಿದರು. ಆದರೆ, ಇವತ್ತು ಕೇರಳದಲ್ಲಿ ಓರ್ವ ಕೊಲೆಗಡುಕ ಮುಖ್ಯಮಂತ್ರಿಯಾಗಿ ಅಧಿಕಾರ ಹಿಡಿದಿದ್ದಾರೆ. ಕೆಂಪು ಉಗ್ರರು ಕಾಂಗ್ರೆಸ್ ಹಾಗೂ ಇತರರ ಪಕ್ಷವನ್ನು ಆಶ್ರಯಿಸಿ ಅಧಿಕಾರಕ್ಕೆ ಬಂದಿದ್ದು, ಸೈನ್ಯ ಹಾಗೂ ಸಮಾಜದ ಜನರನ್ನು ದುರ್ಬಲ ಗೊಳಿಸಲು ಮುಂದಾಗಿದ್ದಾರೆ ಎಂದು ಹರಿಹಾಯ್ದರು.

ಜಗತ್ತಿನಲ್ಲಿ ಇವರ ಸಿದ್ದಾಂತಕ್ಕೆ ಬೆಲೆ ಇಲ್ಲದಂತಾಗಿದೆ. ಹೊಸ ರೂಪದಲ್ಲಿ ಸಮಾಜ ಒಡೆಯಲು ಚಿಂತನೆ ನಡೆಯುತ್ತಿದೆ. ಭೂತದ ಬಾಯಲ್ಲಿ ಭಗವದ್ಗೀತೆ ಬರುತ್ತಿದೆ. ಸುಳ್ಳು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ. ಆದರೂ ದೇಶ ಶಕ್ತಿಯಾಗಿ ಬಿಜೆಪಿ ಮುಂದುವರಿದಿದೆ. ಪ್ರಜಾಪ್ರಭುತ್ವದ ಜನರು ನಿಮಗೆ ಉತ್ತರ ಕೊಡುತ್ತಾರೆ. ಹತ್ಯೆಗೆ ಹೆದರಿ ಓಡುವವರು ಇಲ್ಲಿ ಯಾರೂ ಇಲ್ಲ. ಕೇರಳದಲ್ಲಿ ಒಬ್ಬಬ್ಬನೂ ಕೂಡ ಬಿಜೆಪಿ ಸೇರಿ ಸಂಘಟಿತರಾಗುತ್ತಾರೆ ಎಂದರು.
ಇದಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಕೇರಳದಲ್ಲಿ ಅವ್ಯಾಹತವಾಗಿ ದಾಳಿ ನಡೆಯುತ್ತಿದೆ. ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಿರಂತರವಾಗಿದೆ. ಕಮ್ಯೂನಿಸ್ಟ್ ರ ಕೇರಳ ಸರ್ಕಾರ ಕಣ್ಣು ಕಿವಿ ಮುಚ್ಚಿಕೊಂಡಿದೆ. ಮಾತನಾಡಿದವರ ಧ್ವನಿ ಹತ್ತಿಕುವ ಕೆಲಸ ನಡೆಯುತ್ತಿದೆ. 1969 ರಲ್ಲಿ ಮೊದಲ ಬಲಿಯಾಗಿದೆ. 300ಕ್ಕೂ ಹೆಚ್ಚು ಕೊಲೆ, ಎರಡು ಸಾವಿರಕ್ಕೂ ಹೆಚ್ಚು ಅತ್ಯಾಚಾರವಾಗಿದೆ. ಬಿಜೆಪಿ ಹಾಗೂ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ನಡೆಸಲಾಗಿದೆ. ಇದಕ್ಕೆಲ್ಲಾ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇರ ಹೊಣೆಗಾರರಾಗಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಮಾಜಿ ಸಚಿವ ರಾಮದಾಸ್, ನಗರಾಧ್ಯಕ್ಷ ಡಾ.ಮಂಜುನಾಥ್, ಮಾ.ವೆಂಕಟರಾಮು, ಸಿ.ಹೆಚ್. ವಿಜಯಶಂಕರ್ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications