ಮೈಸೂರಿನಲ್ಲಿ ಗ್ರಾಪಂ ಅಧ್ಯಕ್ಷೆ ಮೇಲೆ ಅತ್ಯಾಚಾರಕ್ಕೆ ಯತ್ನ
ಮೈಸೂರು, ಜುಲೈ.27: ಗ್ರಾಮ ಪಂಚಾಯತ್ ಅಧ್ಯಕ್ಷೆಯ ಮೇಲೆಯೇ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಈ ಸಂಬಂಧ ಗ್ರಾಪಂ ಅಧ್ಯಕ್ಷೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿ ಕಂಪ್ಯೂಟರ್ ಆಪರೇಟರ್ ತಲೆತಪ್ಪಿಸಿಕೊಂಡಿದ್ದಾನೆ. "ಶೌಚಾಲಯ ನಿರ್ಮಾಣ ಯೋಜನೆಯ ಬಿಲ್ ಗೆ ಹೆಬ್ಬೆಟ್ಟು' ಗುರುತು ಪಡೆಯಬೇಕೆಂಬ ನೆಪ ಮಾಡಿಕೊಂಡು ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬುಧವಾರ ಬೆಳಗ್ಗೆ ಅಧ್ಯಕ್ಷೆಯ ಮನೆಗೆ ಬಂದಿದ್ದ.
ಆಗ ನನ್ನ ಪತಿ ಮನೆಯಲ್ಲಿರಲಿಲ್ಲ. ಒಬ್ಬಳೇ ಇರುವುದನ್ನು ತಿಳಿದ ಆತ ಅತ್ಯಾಚಾರಕ್ಕೆ ಯತ್ನಿಸಿದ. ನನಗೆ ಆತನ ತಾಯಿಯಷ್ಟೇ ವಯಸ್ಸಾಗಿದೆ. ಹಾಗಿದ್ದರೂ ನನ್ನನ್ನು ತಬ್ಬಿ ಬಲಾತ್ಕಾರಕ್ಕೆ ಯತ್ನಿಸಿದ. ನನ್ನ ಕಿರುಚಾಟ ಕೇಳಿ ನೆರೆಹೊರೆಯವರು ಬಂದು ನನ್ನನ್ನು ರಕ್ಷಿಸಿದರು" ಎಂದು ಅಧ್ಯಕ್ಷೆ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆಯ ಪಿಎಸ್ಐ ಪುನೀತ್, ಆರೋಪಿ ಕಂಪ್ಯೂಟರ್ ಆಪರೇಟರ್ ಬಂಧನಕ್ಕಾಗಿ ಶೋಧ ಆರಂಭಿಸಿದ್ದಾರೆ. ಆದರೆ, ಆರೋಪಿ ಪ್ರಭಾವಿಗಳ ಆಶ್ರಯ ಪಡೆಯಲು ಯತ್ನಿಸುತ್ತಿದ್ದಾನೆ ಎಂದು ಹೇಳಲಾಗಿದೆ.
ಇನ್ನೊಂದೆಡೆ, ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಅಧ್ಯಕ್ಷೆ ಆಸಕ್ತಿ ತೋರುತ್ತಿಲ್ಲ ಎಂದು ಸಿಟ್ಟಾಗಿರುವ ಸದಸ್ಯರು ಅಧ್ಯಕ್ಷೆಯ ವಿರುದ್ಧ ತಿರುಗಿಬಿದ್ದಿದ್ದಾರೆ.
ಅಧ್ಯಕ್ಷೆ ವಿರುದ್ಧ ಅವಿಶ್ವಾಸ: ಅಧ್ಯಕ್ಷೆ ಗ್ರಾಮ ಪಂಚಾಯಿತಿ ಹತ್ತಿರ ತಲೆಹಾಕದೇ ತಿಂಗಳುಗಳೇ ಕಳೆದಿವೆ. ಅವರ ಈ ಬೇಜವಾಬ್ದಾರಿ ನಡವಳಿಕೆಯಿಂದ ಅಸಮಾಧಾನಗೊಂಡಿರುವ ಪಂಚಾಯಿತಿಯ 20 ಸದಸ್ಯರಲ್ಲಿ 16 ಜನರು ಅವಿಶ್ವಾಸ ಮಂಡನೆಗೆ ನಿರ್ಧರಿಸಿದ್ದಾರೆ.
ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಮಂಡಿಸುವ ಪ್ರಸ್ತಾವನೆಗೆ 16 ಸದಸ್ಯರು ಸಹಿ ಹಾಕಿದ್ದು, ತುರ್ತು ಸಭೆ ಕರೆಯುವಂತೆ ಉಪ ವಿಭಾಗಾಧಿಕಾರಿಗೆ ಈ ಮೊದಲೇ ಮನವಿ ಮಾಡಿದ್ದಾರೆ. ಉಪ ವಿಭಾಗಾಧಿಕಾರಿಗಳ ಆದೇಶ ನಿರೀಕ್ಷಿಸುತ್ತಿರುವಾಗಲೇ ಶುಕ್ರವಾರ ಗ್ರಾಪಂ ಅಧ್ಯಕ್ಷರ ಮೇಲೆ ಅತ್ಯಾಚಾರ ಯತ್ನ ನಡೆದಿದೆ ಎಂದು ಉಪಾಧ್ಯಕ್ಷರು ವಿರೋಧ ವ್ಯಕ್ತಪಡಿಸಿದ್ದಾರೆ.
-
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
ಡಿವೋರ್ಸ್ವರೆಗೆ ಪತಿಯ ನಿವಾಸದಲ್ಲೇ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಿ: ನಟ ವಿಜಯ್ ಪತ್ನಿ ಕೋರ್ಟ್ಗೆ ಮನವಿ -
Yash: ಪತ್ನಿ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ಹೊಸ ಲುಕ್ನಲ್ಲಿ ಯಶ್ ಪ್ರತ್ಯಕ್ಷ -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
ಟಿ20 ವಿಶ್ವಕಪ್ 2026 ಫೈನಲ್ ನಂತರ ಎಲ್ಲಾ ಮಾದರಿಯ ಕ್ರಿಕೆಟ್ಗೆ ಸೂರ್ಯಕುಮಾರ್ ಯಾದವ್ ನಿವೃತ್ತಿ ಘೋಷಣೆ ವದಂತಿ -
Vijay Divorce: ಡಿವೋರ್ಸ್ ವದಂತಿ ನಡುವೆಯೇ ನಟಿ ತ್ರಿಶಾ ಜೊತೆ ಕಾಣಿಸಿಕೊಂಡ ದಳಪತಿ ವಿಜಯ್; ವಿಡಿಯೋ ವೈರಲ್ -
UPSC Results: ಯಾದಗಿರಿ ಜಿಲ್ಲೆ ಒಂದರಲ್ಲೇ 4 ಮಂದಿ ಯುಪಿಎಸ್ಸಿ ಪಾಸ್, ಯಾರವರು? ಹಿನ್ನೆಲೆ ಏನು -
Karnataka Weather: ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲ ಬೇಗೆ -
ದುಬೈ ವಿಮಾನ ನಿಲ್ದಾಣಕ್ಕೆ ನುಗ್ಗಿದ ಡ್ರೋನ್, ಎಲ್ಲಾ ವಿಮಾನ ಹಾರಾಟ ದಿಢೀರ್ ಸ್ಥಗಿತ | Operation Roaring Lion -
LPG Price Hike: ಗೃಹಬಳಕೆ ಎಲ್ಪಿಜಿ ಸಿಲಿಂಡರ್ ಬೆಲೆ 60 ರೂಪಾಯಿ ಏರಿಕೆ, ವಾಣಿಜ್ಯ ಸಿಲಿಂಡರ್ ದರ 115 ರೂಪಾಯಿ ಹೆಚ್ಚಳ












Click it and Unblock the Notifications