ಮೈಸೂರಿನಲ್ಲಿ ಗ್ರಾಪಂ ಅಧ್ಯಕ್ಷೆ ಮೇಲೆ ಅತ್ಯಾಚಾರಕ್ಕೆ ಯತ್ನ
ಮೈಸೂರು, ಜುಲೈ.27: ಗ್ರಾಮ ಪಂಚಾಯತ್ ಅಧ್ಯಕ್ಷೆಯ ಮೇಲೆಯೇ ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಈ ಸಂಬಂಧ ಗ್ರಾಪಂ ಅಧ್ಯಕ್ಷೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಆರೋಪಿ ಕಂಪ್ಯೂಟರ್ ಆಪರೇಟರ್ ತಲೆತಪ್ಪಿಸಿಕೊಂಡಿದ್ದಾನೆ. "ಶೌಚಾಲಯ ನಿರ್ಮಾಣ ಯೋಜನೆಯ ಬಿಲ್ ಗೆ ಹೆಬ್ಬೆಟ್ಟು' ಗುರುತು ಪಡೆಯಬೇಕೆಂಬ ನೆಪ ಮಾಡಿಕೊಂಡು ಪಂಚಾಯಿತಿಯ ಕಂಪ್ಯೂಟರ್ ಆಪರೇಟರ್ ಬುಧವಾರ ಬೆಳಗ್ಗೆ ಅಧ್ಯಕ್ಷೆಯ ಮನೆಗೆ ಬಂದಿದ್ದ.
ಆಗ ನನ್ನ ಪತಿ ಮನೆಯಲ್ಲಿರಲಿಲ್ಲ. ಒಬ್ಬಳೇ ಇರುವುದನ್ನು ತಿಳಿದ ಆತ ಅತ್ಯಾಚಾರಕ್ಕೆ ಯತ್ನಿಸಿದ. ನನಗೆ ಆತನ ತಾಯಿಯಷ್ಟೇ ವಯಸ್ಸಾಗಿದೆ. ಹಾಗಿದ್ದರೂ ನನ್ನನ್ನು ತಬ್ಬಿ ಬಲಾತ್ಕಾರಕ್ಕೆ ಯತ್ನಿಸಿದ. ನನ್ನ ಕಿರುಚಾಟ ಕೇಳಿ ನೆರೆಹೊರೆಯವರು ಬಂದು ನನ್ನನ್ನು ರಕ್ಷಿಸಿದರು" ಎಂದು ಅಧ್ಯಕ್ಷೆ ದೂರಿನಲ್ಲಿ ವಿವರಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಗ್ರಾಮಾಂತರ ಠಾಣೆಯ ಪಿಎಸ್ಐ ಪುನೀತ್, ಆರೋಪಿ ಕಂಪ್ಯೂಟರ್ ಆಪರೇಟರ್ ಬಂಧನಕ್ಕಾಗಿ ಶೋಧ ಆರಂಭಿಸಿದ್ದಾರೆ. ಆದರೆ, ಆರೋಪಿ ಪ್ರಭಾವಿಗಳ ಆಶ್ರಯ ಪಡೆಯಲು ಯತ್ನಿಸುತ್ತಿದ್ದಾನೆ ಎಂದು ಹೇಳಲಾಗಿದೆ.
ಇನ್ನೊಂದೆಡೆ, ಗ್ರಾಮ ಪಂಚಾಯಿತಿ ಆಡಳಿತದಲ್ಲಿ ಅಧ್ಯಕ್ಷೆ ಆಸಕ್ತಿ ತೋರುತ್ತಿಲ್ಲ ಎಂದು ಸಿಟ್ಟಾಗಿರುವ ಸದಸ್ಯರು ಅಧ್ಯಕ್ಷೆಯ ವಿರುದ್ಧ ತಿರುಗಿಬಿದ್ದಿದ್ದಾರೆ.
ಅಧ್ಯಕ್ಷೆ ವಿರುದ್ಧ ಅವಿಶ್ವಾಸ: ಅಧ್ಯಕ್ಷೆ ಗ್ರಾಮ ಪಂಚಾಯಿತಿ ಹತ್ತಿರ ತಲೆಹಾಕದೇ ತಿಂಗಳುಗಳೇ ಕಳೆದಿವೆ. ಅವರ ಈ ಬೇಜವಾಬ್ದಾರಿ ನಡವಳಿಕೆಯಿಂದ ಅಸಮಾಧಾನಗೊಂಡಿರುವ ಪಂಚಾಯಿತಿಯ 20 ಸದಸ್ಯರಲ್ಲಿ 16 ಜನರು ಅವಿಶ್ವಾಸ ಮಂಡನೆಗೆ ನಿರ್ಧರಿಸಿದ್ದಾರೆ.
ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಮಂಡಿಸುವ ಪ್ರಸ್ತಾವನೆಗೆ 16 ಸದಸ್ಯರು ಸಹಿ ಹಾಕಿದ್ದು, ತುರ್ತು ಸಭೆ ಕರೆಯುವಂತೆ ಉಪ ವಿಭಾಗಾಧಿಕಾರಿಗೆ ಈ ಮೊದಲೇ ಮನವಿ ಮಾಡಿದ್ದಾರೆ. ಉಪ ವಿಭಾಗಾಧಿಕಾರಿಗಳ ಆದೇಶ ನಿರೀಕ್ಷಿಸುತ್ತಿರುವಾಗಲೇ ಶುಕ್ರವಾರ ಗ್ರಾಪಂ ಅಧ್ಯಕ್ಷರ ಮೇಲೆ ಅತ್ಯಾಚಾರ ಯತ್ನ ನಡೆದಿದೆ ಎಂದು ಉಪಾಧ್ಯಕ್ಷರು ವಿರೋಧ ವ್ಯಕ್ತಪಡಿಸಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications