ಶ್ರೀಲಂಕಾ ದಾಳಿ:ಮೈಸೂರಿನ ಸಂತ ಫಿಲೋಮಿನಾ ಚರ್ಚ್ ನಲ್ಲಿ ಶ್ರದ್ಧಾಂಜಲಿ
ಮೈಸೂರು, ಏಪ್ರಿಲ್ 24:ಕಳೆದೆರಡು ದಿನಗಳ ಕೆಳಗೆ ಶ್ರೀಲಂಕಾದ ಕೊಲೊಂಬೊದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟದಲ್ಲಿ ನೂರಾರು ಮಂದಿ ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಸಂತ ಫಿಲೋಮಿನಾ ಚರ್ಚ್ ನಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.
ಚರ್ಚ್ ನಲ್ಲಿ ನಡೆದ ಶ್ರದ್ಧಾಂಜಲಿ ಸಲ್ಲಿಸುವ ಕಾರ್ಯಕ್ರಮದಲ್ಲಿ ಬಿಷಪ್ ಹಾಗೂ ಮೈಸೂರು ಪ್ರಾಂತ್ಯದ ಎಲ್ಲ ಕ್ರೈಸ್ತ ಧರ್ಮ ಗುರುಗಳು ಭಾಗಿಯಾಗಿದ್ದರು. ಬಾಂಬ್ ಸ್ಫೋಟದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲೆಂದು ಧರ್ಮ ಗುರುಗಳು, ಮಕ್ಕಳು ಹಾಗೂ ಕ್ರೈಸ್ತ ಬಂಧುಗಳು ಪ್ರಾರ್ಥಿಸಿದರು.
ಸೆಂಟ್ ಫಿಲೋಮಿನಾಸ್ ಚರ್ಚ್ ನ ಬಿಷಪ್ ಕೆ. ಎ ವಿಲಿಯಂ ಮಾತನಾಡಿ, ಶ್ರೀಲಂಕಾದಲ್ಲಿ ಹೀನ ಕೃತ್ಯ ನಡೆಸಿದವರನ್ನ ದೇವರು ಕ್ಷಮಿಸಲಿ. ಇಂತಹ ಹೀನ ಕೃತ್ಯ ಮಾಡಿದವರನ್ನ ಆ ದೇವರು ಕ್ಷಮಿಸಲಿ. ಮಾನವೀಯತೆಯುಳ್ಳ ಮನಸ್ಸು ಅವರಿಗೆ ಬರಲಿ. ಇನ್ನೊಂದು ಬಾರಿ ಈ ರೀತಿಯ ಕೃತ್ಯವನ್ನು ಎಸಗದಂತೆ ಅವರ ಮನಸ್ಸು ಪರಿವರ್ತನೆಯಾಗಲಿ. ಹಾಗೆಯೇ ಮೃತರ ಕುಟುಂಬಕ್ಕೆ ದೇವರು ಶಕ್ತಿ ನೀಡಲಿ ಎಂದು ಪ್ರಾರ್ಥನೆ ಸಲ್ಲಿಸಿದರು.

2013ನೇ ಇಸ್ಟರ್ ಸಂಡೇಯಲ್ಲೂ ಇದೆ ರೀತಿ ಘಟನೆ ನಡೆದಿತ್ತು. ಈಸ್ಟರ್ ಸಂಡೆ ಕ್ರೈಸ್ತ ಬಂಧುಗಳಿಗೆ ಶುಭ ದಿನ, ಇಂತಹ ದಿನದಲ್ಲಿ ಈ ರೀತಿಯ ಕೃತ್ಯ ನಡೆದಿರುವುದು ನೋವಾಗುತ್ತದೆ. ಶ್ರೀಲಂಕಾದಲ್ಲಿ ಪ್ರಾರ್ಥನೆಯಲ್ಲಿ ಮಗ್ನರಾಗಿದ್ದವರ ಮೇಲೆ ಈ ರೀತಿ ಕೃತ್ಯ ನಡೆದಿರುವುದು ಬೇಸರದ ಸಂಗತಿ ಎಂದರು. ಇನ್ನು ಮೈಸೂರಿನ ಸಂತ ಫಿಲೋಮಿನಾಚರ್ಚ್ ಗೂ ಹೈ ಅಲರ್ಟ್ ಭದ್ರತೆ ನೀಡಲಾಗಿದೆ.
-
Aditya: ನಿನ್ನೆ ಮೊನ್ನೆ ಬಂದೋರೆಲ್ಲ ದರ್ಶನ್ಗೆ ಕ್ಲೋಸ್ ಅಂತಿದ್ದಾರೆ, ಅವನು ಎಂದಿಗೂ ನನ್ನ ದೋಸ್ತ್: ನಟ ಆದಿತ್ಯ -
ಮುಂಬೈ ವಿರುದ್ಧದ ಹೈವೋಲ್ಟೇಜ್ ಕದನಕ್ಕೆ ಆರ್ಸಿಬಿ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆ ಸಾಧ್ಯತೆ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
ಗಂಡ-ಹೆಂಡತಿ ಜಗಳ ಇಡೀ ದಿನ ತೋರಿಸಿದರೆ ಸಮಾಜಕ್ಕೆ ಏನು ಪ್ರಯೋಜನ: ಮಾಧ್ಯಮಗಳಿಗೆ ಸಿಎಂ ಪ್ರಶ್ನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
'ಕೋಟಿಗೊಬ್ಬ' ರೀರಿಲೀಸ್: ವಿಷ್ಣುದಾದಾ ಅಭಿಮಾನಿಗಳಿಂದ ಸಂಭ್ರಮ, ಪ್ರಸನ್ನ ಥಿಯೇಟರ್ನಲ್ಲಿ ನಾಳೆ 10,000 ಮಂದಿಗೆ ನಾನ್ವೆಜ್ ಊಟ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Smriti Mandhana: ಸ್ಮೃತಿ ಮಂಧಾನ-ಪಲಾಶ್ ಮುಚ್ಚಲ್ ಮತ್ತೆ ಒಂದಾಗ್ತಾರಾ? ಇಬ್ಬರ ಕುಟುಂಬಗಳ ಸೀಕ್ರೆಟ್ ಮೀಟಿಂಗ್ ವಿಡಿಯೋ ವೈರಲ್ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Government Schools: ಈ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ನೀತಿ: ಎಲ್ಲ ಶಿಕ್ಷಕರಿಗೆ ಇಂಗ್ಲಿಷ್ ಟ್ರೈನಿಂಗ್












Click it and Unblock the Notifications