ಸೂಯೆಜ್ ಫಾರಂ ಪ್ರಾಜೆಕ್ಟ್ ಬಗ್ಗೆ ಮೊದಲು ಮಾಹಿತಿ ಕೊಡಿ; ಶಾಸಕ ರಾಮದಾಸ್ ತಿರುಗೇಟು
ಮೈಸೂರು, ಮೇ 08: ಸೂಯೆಜ್ ಫಾರಂ ಪ್ರಾಜೆಕ್ಟ್ ಅಂದರೆ ಏನು ಅಂತ ಶಾಸಕನಾದ ನನಗೇ ಇನ್ನೂ ಗೊತ್ತಿಲ್ಲ. ಮೊದಲು ಈ ಯೋಜನೆಯನ್ನು ಜನರ ಮುಂದೆ ತನ್ನಿ, ನಂತರ ಜಾರಿಗೊಳಿಸಿ ಎಂದು ಶಾಸಕ ರಾಮದಾಸ್ ಅವರು ಸಂಸದ ಪ್ರತಾಪ್ ಸಿಂಹ ಅವರಿಗೆ ತಿರುಗೇಟು ನೀಡಿದ್ದಾರೆ.
Recommended Video
ನಗರದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕರು, ಪಾಲಿಕೆ ಮೇಯರ್ ಹಾಗೂ ಅಧಿಕಾರಿಗಳು ನಾಗಪುರಕ್ಕೆ ಹೋಗಿದ್ದೇ ನನಗೆ ಗೊತ್ತಿಲ್ಲ. ನಾನು ಕೆ.ಆರ್.ಕ್ಷೇತ್ರದ ಶಾಸಕನಾಗಿದ್ದೇನೆ. ಆದರೂ ಈ ವಿಚಾರವೇ ಗೊತ್ತಿಲ್ಲ. ನಿಮ್ಮ ಯೋಜನೆ ಏನು? ಇದರಿಂದ ಜನರಿಗೇನು ಅನುಕೂಲ? ಇದನ್ನು ಮೊದಲು ಜನರ ಮುಂದೆ ತರುವ ಕೆಲಸ ಮಾಡಿ. ಯಾವಾಗ ಮಾಡಿದ್ದಾರೆ ಎಂಬುದು ಕೂಡ ನನಗೆ ಗೊತ್ತಿಲ್ಲ ಎಂದರು.
ಮೂರು ದಿನಗಳ ಹಿಂದೆ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಎದುರೇ ಅಧಿಕಾರಿಗಳ ಸಭೆಯಲ್ಲಿ ಸಂಸದ ಸಿಂಹ ಮತ್ತು ರಾಮದಾಸ್ ನಡುವೆ ಈ ಕುರಿತು ಮಾತಿನ ಚಕಮಕಿ ನಡೆದಿತ್ತು.

ಇದೇ ವೇಳೆ ಸಂಸದರು ಮತ್ತು ಶಾಸಕರ ವಾಕ್ ಸಮರ ವಿಚಾರಕ್ಕೆ ಪ್ರತಿಕ್ರಿಯಿಸಿದ ಸಂಸದ ಪ್ರತಾಪ್ ಸಿಂಹ, "ಅದು ಮಾತಿನ ಸಮರ ಅಲ್ಲ, ಒಂದು ಚರ್ಚೆ ಅಷ್ಟೇ. ಸೂಯೆಜ್ ಫಾರಂ ಕಸದ ಸಮಸ್ಯೆ ಬಗ್ಗೆ ಎಲ್ಲರಿಗೂ ಗೊತ್ತಿದೆ. ಆದರೆ ಅಲ್ಲಿನ ರಾಶಿ ರಾಶಿ ಕಸಕ್ಕೆ ಮುಕ್ತಿಯೇ ಸಿಕ್ಕಿರಲಿಲ್ಲ. ಇಲ್ಲಿಯವರೆಗೆ ಸಚಿವರು ಆಗಿದ್ದರೂ ಅದಕ್ಕೆ ಮುಕ್ತಿ ಕೊಟ್ಟಿರಲಿಲ್ಲ. ಸಚಿವರಾಗಿ ಸೋಮಣ್ಣ ಅವರು ಬಂದಾಗ ಈ ಬಗ್ಗೆ ಹೇಳಿದ್ದೆ. ಪ್ಲಾಂಟ್ ಅಕ್ಕಪಕ್ಕದಲ್ಲಿ ಶಾಲೆಗಳು, ವಸತಿ ಬಡಾವಣೆ ಇದೆ.
ಎಲ್ಲರಿಗೂ ಸಮಸ್ಯೆ ಆಗೋ ದೃಷ್ಟಿಯಿಂದ ಕೇಂದ್ರದಿಂದ ಈ ಬಗ್ಗೆ ಯೋಜನೆ ಸಿದ್ಧಪಡಿಸಿದ್ದೇವೆ. ಇದೀಗ ಟೆಂಡರ್ ಕರೆಯೋದೊಂದೇ ಬಾಕಿ. ಆದರೆ ಈ ವೇಳೆ ಹೊಸದಾಗಿ ಟೆಂಡರ್ ಕರೆಯಬೇಕು ಅಂದರೆ ಅರ್ಥ ಇಲ್ಲ. ಯಾರು ಏನೇ ಹೇಳಿದರು ಈ ಪ್ರಾಜೆಕ್ಟ್ ಮಾಡಿಯೇ ತಿರುತ್ತೇನೆ. ಈ ಯೋಜನೆಯಿಂದ ಹಿಂದೆ ಸರಿಯೋ ಪ್ರಶ್ನೆಯೇ ಇಲ್ಲ" ಎಂದು ಶಾಸಕ ರಾಮದಾಸ್ಗೆ ಖಾರವಾಗಿ ತಿರುಗೇಟು ನೀಡಿದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications