ಬಹುರೂಪಿ ಬೆನ್ನಲ್ಲೇ ರಂಗಾಯಣದ ಹಾಲಿ-ಮಾಜಿ ನಿರ್ದೇಶಕರ ತಿಕ್ಕಾಟ
ಮೈಸೂರು, ಫೆಬ್ರವರಿ 13: ಪ್ರತಿಷ್ಠಿತ ರೆಪರ್ಟರಿ ರಂಗಾಯಣದ ಪ್ರಮುಖ ಕಾರ್ಯಕ್ರಮ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಬೆನ್ನಲ್ಲೇ ಟಿಪ್ಪು ವಿವಾದಕ್ಕೆ ಸಂಬಂಧಿಸಿದಂತೆ ರಂಗಾಯಣದ ಹಾಲಿ ಹಾಗೂ ಮಾಜಿ ನಿರ್ದೇಶಕರ ನಡುವೆ ತಿಕ್ಕಾಟ ಏರ್ಪಟ್ಟಿದೆ.
ಇತ್ತೀಚೆಗೆ ನಡೆದಿದ್ದ ಕಾರ್ಯಕ್ರಮದಲ್ಲಿ ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಟಿಪ್ಪು ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ), ಅಡ್ಡಂಡ ಕಾರ್ಯಪ್ಪ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದರು.
ನನ್ನ ಹೇಳಿಕೆಗೆ ಈಗಲೂ ಬದ್ಧ: ರಂಗಾಯಣದ ಮಾಜಿ ನಿರ್ದೇಶಕರ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, "ಟಿಪ್ಪು ಬಗ್ಗೆ ನಾನು ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಟಿಪ್ಪು ಕೊಡಗಿಗೆ ಅಸಹ್ಯ, ಮೈಸೂರಿಗೆ ಹೆಮ್ಮೆ. ನಾನು ರಂಗಾಯಣ ಎಂಬ ಸುಂದರ ಅರಣ್ಯ ಕಾಂಡದಲ್ಲಿರುವ ಆನೆ. ಯಾರೋ ಬೊಗಳುವುದಕ್ಕೆ ಉತ್ತರ ಕೊಡಬೇಕಾಗಿಲ್ಲ. ನಾಯಿ ಬೊಗಳಿದ ತಕ್ಷಣ ಆನೆ ಓಡಿಹೋಗಲ್ಲ. ಟಿಪ್ಪುವಿನಿಂದ ಕಷ್ಟ ಅನುಭವಿಸಿರುವುದು ನನ್ನ ಕುಟುಂಬ. ಇದು ನನ್ನ ಅಭಿವ್ಯಕ್ತಿ ಸ್ವಾತಂತ್ರದ ಮಾತೇ ಹೊರತು, ರಂಗಾಯಣದ ನಿರ್ದೇಶಕನ ಮಾತಲ್ಲ. ಯಾವುದೋ ಕಾರ್ಯಕ್ರಮದಲ್ಲಿ ಮಾತನಾಡಿದ್ದನ್ನು ರಂಗಾಯಣದ ಒಳಗೆ ತರುತ್ತಿದ್ದಾರೆ ಇದು ಸರಿಯಲ್ಲ. ಇಲ್ಲಿ ಯಾವುದೇ ಬಲಪಂಕ್ತೀಯ, ಬಿಜೆಪಿಯ ವಿಚಾರಗಳನ್ನು ಕಂಡೀದ್ದೀರಾ?" ಎಂದು ಪ್ರಶ್ನಿಸಿದ ಅವರು, ಬಹುರೂಪಿಗೆ ವಿವಾದ ಎಳೆದು ತರುತ್ತಿರುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಈತ ಡೊಂಗಿ ಗಾಂಧಿ ವಾದಿ: "ಜನಾರ್ಧನ್ ಒಬ್ಬ ಕುಡುಕ, ಕುಡುಕರಾಗಿ ಕುಳಿತು ಕಾಲ ಕಳೆದವ. ರಂಗಾಯಣದಲ್ಲಿ ಮಜಾ ಮಾಡಿದವ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಸತ್ತಾಗ ರಂಗಾಯಣದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮಾಡಿ, ರಂಗಾಯಣ ವೇದಿಕೆ ದುರ್ಬಳಕೆ ಮಾಡಿಕೊಂಡವ. ನಾನು ಕೊಡಗಿನಿಂದ ಬಂದವನು. ನಾನೊಬ್ಬ ದೇಶ ಭಕ್ತ. ಅವರಿಗೆ ದೇಶ ಬೇಡ. ಮಜಾ ಮಾಡುವವರು ಬೇಕು. ಈತ ಡೊಂಗಿ ಗಾಂಧಿ ವಾದಿ" ಎಂದು ಜನ್ನಿ ವಿರುದ್ಧ ಹರಿಹಾಯ್ದಿದ್ದಾರೆ.
-
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ












Click it and Unblock the Notifications