ಬಹುರೂಪಿ ಬೆನ್ನಲ್ಲೇ ರಂಗಾಯಣದ ಹಾಲಿ-ಮಾಜಿ ನಿರ್ದೇಶಕರ ತಿಕ್ಕಾಟ
ಮೈಸೂರು, ಫೆಬ್ರವರಿ 13: ಪ್ರತಿಷ್ಠಿತ ರೆಪರ್ಟರಿ ರಂಗಾಯಣದ ಪ್ರಮುಖ ಕಾರ್ಯಕ್ರಮ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವದ ಬೆನ್ನಲ್ಲೇ ಟಿಪ್ಪು ವಿವಾದಕ್ಕೆ ಸಂಬಂಧಿಸಿದಂತೆ ರಂಗಾಯಣದ ಹಾಲಿ ಹಾಗೂ ಮಾಜಿ ನಿರ್ದೇಶಕರ ನಡುವೆ ತಿಕ್ಕಾಟ ಏರ್ಪಟ್ಟಿದೆ.
ಇತ್ತೀಚೆಗೆ ನಡೆದಿದ್ದ ಕಾರ್ಯಕ್ರಮದಲ್ಲಿ ರಂಗಾಯಣದ ಹಾಲಿ ನಿರ್ದೇಶಕ ಅಡ್ಡಂಡ ಕಾರ್ಯಪ್ಪ, ಟಿಪ್ಪು ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಆದರೆ ಈ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದ ರಂಗಾಯಣದ ಮಾಜಿ ನಿರ್ದೇಶಕ ಜನಾರ್ಧನ್ (ಜನ್ನಿ), ಅಡ್ಡಂಡ ಕಾರ್ಯಪ್ಪ ಅವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿದ್ದರು.
ನನ್ನ ಹೇಳಿಕೆಗೆ ಈಗಲೂ ಬದ್ಧ: ರಂಗಾಯಣದ ಮಾಜಿ ನಿರ್ದೇಶಕರ ಹೇಳಿಕೆಗೆ ಸಂಬಂಧಿಸಿದಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅಡ್ಡಂಡ ಕಾರ್ಯಪ್ಪ, "ಟಿಪ್ಪು ಬಗ್ಗೆ ನಾನು ನೀಡಿದ ಹೇಳಿಕೆಗೆ ಈಗಲೂ ಬದ್ಧನಾಗಿದ್ದೇನೆ. ಟಿಪ್ಪು ಕೊಡಗಿಗೆ ಅಸಹ್ಯ, ಮೈಸೂರಿಗೆ ಹೆಮ್ಮೆ. ನಾನು ರಂಗಾಯಣ ಎಂಬ ಸುಂದರ ಅರಣ್ಯ ಕಾಂಡದಲ್ಲಿರುವ ಆನೆ. ಯಾರೋ ಬೊಗಳುವುದಕ್ಕೆ ಉತ್ತರ ಕೊಡಬೇಕಾಗಿಲ್ಲ. ನಾಯಿ ಬೊಗಳಿದ ತಕ್ಷಣ ಆನೆ ಓಡಿಹೋಗಲ್ಲ. ಟಿಪ್ಪುವಿನಿಂದ ಕಷ್ಟ ಅನುಭವಿಸಿರುವುದು ನನ್ನ ಕುಟುಂಬ. ಇದು ನನ್ನ ಅಭಿವ್ಯಕ್ತಿ ಸ್ವಾತಂತ್ರದ ಮಾತೇ ಹೊರತು, ರಂಗಾಯಣದ ನಿರ್ದೇಶಕನ ಮಾತಲ್ಲ. ಯಾವುದೋ ಕಾರ್ಯಕ್ರಮದಲ್ಲಿ ಮಾತನಾಡಿದ್ದನ್ನು ರಂಗಾಯಣದ ಒಳಗೆ ತರುತ್ತಿದ್ದಾರೆ ಇದು ಸರಿಯಲ್ಲ. ಇಲ್ಲಿ ಯಾವುದೇ ಬಲಪಂಕ್ತೀಯ, ಬಿಜೆಪಿಯ ವಿಚಾರಗಳನ್ನು ಕಂಡೀದ್ದೀರಾ?" ಎಂದು ಪ್ರಶ್ನಿಸಿದ ಅವರು, ಬಹುರೂಪಿಗೆ ವಿವಾದ ಎಳೆದು ತರುತ್ತಿರುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

ಈತ ಡೊಂಗಿ ಗಾಂಧಿ ವಾದಿ: "ಜನಾರ್ಧನ್ ಒಬ್ಬ ಕುಡುಕ, ಕುಡುಕರಾಗಿ ಕುಳಿತು ಕಾಲ ಕಳೆದವ. ರಂಗಾಯಣದಲ್ಲಿ ಮಜಾ ಮಾಡಿದವ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ ಸತ್ತಾಗ ರಂಗಾಯಣದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮ ಮಾಡಿ, ರಂಗಾಯಣ ವೇದಿಕೆ ದುರ್ಬಳಕೆ ಮಾಡಿಕೊಂಡವ. ನಾನು ಕೊಡಗಿನಿಂದ ಬಂದವನು. ನಾನೊಬ್ಬ ದೇಶ ಭಕ್ತ. ಅವರಿಗೆ ದೇಶ ಬೇಡ. ಮಜಾ ಮಾಡುವವರು ಬೇಕು. ಈತ ಡೊಂಗಿ ಗಾಂಧಿ ವಾದಿ" ಎಂದು ಜನ್ನಿ ವಿರುದ್ಧ ಹರಿಹಾಯ್ದಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications