ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಹಾನಗರ ಪಾಲಿಕೆ ಫಲಿತಾಂಶದ ಬಳಿಕ ಮೈಸೂರಿನಲ್ಲಿ ಮಾರಾಮಾರಿ

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಸೆಪ್ಟೆಂಬರ್.3: ಮೈಸೂರು ಮಹಾನಗರ ಪಾಲಿಕೆಯ ಫಲಿತಾಂಶವೇನೋ ಹೊರಬಿದ್ದಿದೆ. ಆದರೆ ಫಲಿತಾಂಶ ಬಂದ ನಂತರ ನಗರದಲ್ಲಿ ಮಾರಾಮಾರಿ ನಡೆದಿದೆ. ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದನೆಂದು ಆರೋಪಿಸಿ ಎಸ್‍ಡಿಪಿಐ ಕಾರ್ಯಕರ್ತನ ಮೇಲೆ ಕೈ ಕಾರ್ಯಕರ್ತರು ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಇಂದು ಸೋಮವಾರ ನಡೆದಿದೆ.

 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಸಿಡ್‌ ದಾಳಿ, 25 ಜನ ಗಾಯಾಳು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಆಸಿಡ್‌ ದಾಳಿ, 25 ಜನ ಗಾಯಾಳು

ಮೈಸೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ನೂತನ ಪಾಲಿಕೆ ಸದಸ್ಯರೊಬ್ಬರ ಕಡೆಯಿಂದ ಎಸ್ ಡಿಪಿಐ ಕಾರ್ಯಕರ್ತರ ಮೇಲೆ ಹಲ್ಲೆ ನಡೆದಿದೆ.

ಮೈಸೂರು ಮಹಾನಗರ ಪಾಲಿಕೆ ಚುನಾವಣೆ : ಪ್ರತಾಪ್ ಸಿಂಹ ಹೇಳಿದ್ದೇನು ?ಮೈಸೂರು ಮಹಾನಗರ ಪಾಲಿಕೆ ಚುನಾವಣೆ : ಪ್ರತಾಪ್ ಸಿಂಹ ಹೇಳಿದ್ದೇನು ?

ಮೈಸೂರಿನ ಶಾಂತಿನಗರದ ರಮ್ಜಾ ಮಸೀದಿ ಬಳಿ ಈ ಘಟನೆ ನಡೆದಿದ್ದು, ನಾಲ್ವರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಹಲ್ಲೆಯ ಆರೋಪ ಮಾಡಲಾಗುತ್ತಿದೆ. ತನ್ನ ವಿರುದ್ಧ ಮತ ಚಲಾಯಿಸಿದ್ದರು ಎಂದು ಎಂದು ಆರೋಪಿಸಿ ಪಡ್ಡು ಎಂಬುವವರು ಜೀಪ್ ನಿಂದ ಇಳಿದು ಎಸ್ ಡಿಪಿಐನ ಹಕೀಬ್ ಸೈದು , ಜೆಡಿಎಸ್ ನ ರಶೀದ್ , ಯಾಸೀನ್ ಎಂಬುವವರಿಗೆ ಥಳಿಸಿದ್ದಾರೆ.

 ಮೈಸೂರು ಅತಂತ್ರ ಫಲಿತಾಂಶ: ಲೋಕಲ್ ಫೈಟ್ ನಲ್ಲೂ ಕೈ -ತೆನೆ ಮೈತ್ರಿ ಸಾಧ್ಯತೆ ಮೈಸೂರು ಅತಂತ್ರ ಫಲಿತಾಂಶ: ಲೋಕಲ್ ಫೈಟ್ ನಲ್ಲೂ ಕೈ -ತೆನೆ ಮೈತ್ರಿ ಸಾಧ್ಯತೆ

Congress activists attacked the SDPI activist in Mysuru

ಹಲ್ಲೆಯಿಂದ ಗಾಯಗೊಂಡಿರುವ ಗಾಯಾಳುಗಳನ್ನ ಕೆ ಆರ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ನೂತನ ಪಾಲಿಕೆ ಸದಸ್ಯ ಅಯಾಜ್ ಪಾಷಾ ಬೆಂಬಲಿಗರಿಂದ ಹಲ್ಲೆ ಆರೋಪ ಕೇಳಿಬಂದಿದೆ. ಉದಯಗಿರಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

English summary
Mysuru Mahanagara Palike Election result announced. But after the result congress activists attacked the SDPI activist. Read this article for more information.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X