ಅರಮನೆ ಮುಂದೆ ಯೋಗ ಮಾಡಿದ್ದಕ್ಕೆ ಕಾಂಗ್ರೆಸ್ ಕಿಡಿ
ಮೈಸೂರು, ಜೂ22. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಅರಮನೆ ಮುಂದೆ ಬಿಜೆಪಿಯವರು ಯೋಗಾಭ್ಯಾಸ ಮಾಡಿದ್ದಕ್ಕೆ ಕಾಂಗ್ರೆಸ್ ಖಂಡಿಸಿದೆ.
ರಾಜ್ಯ ಸರ್ಕಾರ ಶಾಲಾ ಮಕ್ಕಳ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಸಾಕಷ್ಟು ವಿವಾದ ಸೃಷ್ಟಿಸಿದ್ದಲ್ಲದೆ ಹಲವಾರು ಸಾಹಿತಿಗಳು ಲೇಖಕರು ತಮ್ಮ ಕವಿತೆ ಲೇಖನಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿದ್ದರು. ಅಲ್ಲದೆ ಹಲವಾರು ಸಂಘಟನೆಗಳು ಬೃಹತ್ ಪ್ರತಿಭಟನೆಯನ್ನು ಮಾಡಿದ್ದವು. ಮೈಸೂರಿನ ಅರಸರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪಠ್ಯವನ್ನು ಕೈಬಿಟ್ಟು ಈಗ ಅವರು ರಾಜ್ಯಭಾರ ಮಾಡಿದ ಅರಮನೆ ಮುಂದೆ ಯೋಗಾಭ್ಯಾಸ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದೆ.
ಈ ಬಗ್ಗೆ ಟ್ವಿಟ್ ಮಾಡಿ ಕರ್ನಾಟಕ ಕಾಂಗ್ರೆಸ್ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ನೆಲದಲ್ಲಿ ನಿಂತು ಯೋಗ ಮಾಡುವ ಬಿಜೆಪಿಗರೇ, ಅದೇ ರಾಜರ್ಷಿ ನಾಲ್ವಡಿಯವರ ಪಠ್ಯವನ್ನು ಕಿತ್ತು ಹಾಕಿ ವಿಕೃತಿ ಮೆರೆದಿದ್ದೀರಲ್ಲ ನಾಚಿಕೆಯಾಗುವುದಿಲ್ಲವೇ ನಿಮಗೆ? ಎಂದಿರುವ ಕಾಂಗ್ರೆಸ್ ಸಂವಿಧಾನಕ್ಕೂ ಮೊದಲೇ ತಳಸಮುದಾಯಕ್ಕೆ ಮೀಸಲಾತಿ ಕಲ್ಪಿಸಿದ ಮಹಾಪುರಷನಿಗೆ ಮಾತ್ರವಲ್ಲ ಇದು ಇಡೀ ಕರುನಾಡಿಗೆ ಎಸಗಿದ ದ್ರೋಹ ನೆನಪಿರಲಿ ಎಂದು ಬರೆದುಕೊಂಡಿದೆ.

ಇದಕ್ಕೂ ಮೊದಲು ಅರಮನೆ ಮುಂದೆ ಯೋಗಭ್ಯಾಸ ಮಾಡಿದ ಪೋಟೋವನ್ನು ಬಿಜೆಪಿ ಹಂಚಿಕೊಂಡಿದ್ದು, ರಾಜರ್ಷಿ ನಾಲ್ವಡಿಯವರ ರಾಜನಗರಿಯಲ್ಲಿ ಮೋದಿ ಜೀ ಅವರ ಉಪಸ್ಥಿತಿ ಮೈಸೂರಿನಿಂದ ಯೋಗ ಕಹಳೆ ಮೊಳಗಿದ ಯೋಗಾಯೋಗದ ಉದ್ದೇಶ ಸಂದೇಶ ಸ್ಪಷ್ಟವಿದೆ. ನಮ್ಮ ನಾಡಿನ ಸಂಸ್ಕೃತಿ, ಆಚಾರ ವಿಚಾರಗಳೇ ನಮ್ಮನ್ನು ಕೈಹಿಡಿದು ನಡೆಸುವ ನಂದಾದೀಪಗಳು ಎಂದು ಬಿಜೆಪಿ ಟ್ವಿಟ್ ಮಾಡಿತ್ತು.
ಬುಧವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾಗವಹಿಸಿದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿದ ಹಿನ್ನೆಲೆಯಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಧನ್ಯವಾದಗಳನ್ನು ತಿಳಿಸಿದ್ದಾರೆ.

ಈ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಪೂರ್ಣಗೊಂಡಿದೆ. ಮೈಸೂರಿನ ಅರಮನೆ ಆವರಣದಲ್ಲಿ ನಡೆದ ಯೋಗ ಕಾರ್ಯಕ್ರಮ ಅತ್ಯಂತ ಅವಿಸ್ಮರಣೀಯವಾದುದು. ಈ ಯಶಸ್ಸಿಗೆ ಕಾರಣೀಭೂತರಾದ ಯೋಗಪಟುಗಳು, ನಾಗರಿಕರು, ಅಧಿಕಾರಿಗಳು, ಜನಪ್ರತಿನಿಧಿಗಳು, ಮಾಧ್ಯಮ ಮಿತ್ರರು, ಸೇರಿದಂತೆ ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ತಿಳಿಸಿದ್ದರು. ಮೈಸೂರಿನಲ್ಲಿ ನಡೆದ ಯೋಗಾ ದಿನಾಚರಣೆಯಲ್ಲಿ 1 ಗಂಟೆ 15 ನಿಮಿಷಗಳ ಯೋಗ ಕಾರ್ಯಕ್ರಮದಲ್ಲಿ 15 ಸಾವಿರ ಜನ ಪಾಲ್ಗೊಂಡಿದ್ದರು.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications