ಉಪಚುನಾವಣೆ ಗೆಲ್ಲುವ ಭ್ರಮೆಯಲ್ಲಿ ಕಾಂಗ್ರೆಸ್ - ಬಿಎಸ್ವೈ
ನಂಜನಗೂಡು ಹಾಗೂ ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣ ಬಲ ಹಾಗೂ ಜಾತಿಬಲದಿಂದ ಗೆಲ್ಲುವ ಭ್ರಮೆಯಲ್ಲಿದೆ. ಆದರೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ - ಬಿ ಎಸ್ ಯಡಿಯೂರಪ್ಪ
ಮೈಸೂರು, ಮಾರ್ಚ್ 17: ನಂಜನಗೂಡು ಹಾಗೂ ಗುಂಡ್ಲುಪೇಟೆ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣ ಬಲ ಹಾಗೂ ಜಾತಿಬಲದಿಂದ ಗೆಲ್ಲುವ ಭ್ರಮೆಯಲ್ಲಿದೆ. ಆದರೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ. [ನಂಜನಗೂಡು ಉಪಚುನಾವಣೆ: ಪಕ್ಷೇತರರಿಂದ ನಾಮಪತ್ರ ಸಲ್ಲಿಕೆ]
ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಯಡಿಯೂರಪ್ಪ ಶುಕ್ರವಾರ ಭೇಟಿ ನೀಡಿದರು. ಈ ಸಂದರ್ಭ ಸುತ್ತೂರು ಶ್ರೀಗಳೊಂದಿಗೆ ಕುಶಲೋಪರಿ ಮಾತುಕತೆ ನಡೆಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು. [ನಂಜನಗೂಡು ಉಪಚುನಾವಣೆ: ಕದನ ಕಲಿಗಳಿಗೆ ಪ್ರತಿಷ್ಠೆಯ ಕಣ]

ಸಿಬಿಐ ತನಿಖೆಗೆ ಕೊಟ್ಟರೆ ಬಣ್ಣ ಬಯಲು
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದ ಯಡಿಯೂರಪ್ಪ, ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪ ಕಾಣಿಕೆ ವಿಚಾರವನ್ನು ಸಿಬಿಐ ತನಿಖೆಗೆ ವಹಿಸಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಣ್ಣ ಬಯಲಾಗಲಿದೆ. ಡೈರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಮಾಡಿರುವ ಆರೋಪ ಸತ್ಯಾಂಶದಿಂದ ಕೂಡಿದೆ ಎಂದು ಹೇಳಿದರು.

ಕಲಾಪಕ್ಕೆ ಅಡ್ಡಿ
"ಇದೇ ಕಾರಣಕ್ಕಾಗಿ ಡೈರಿಯಲ್ಲಿದ್ದ ಮಾಹಿತಿ ಯಡಿಯೂರಪ್ಪಗೆ ಹೇಗೆ ಗೊತ್ತಾಯಿತು ಎಂದು ಪ್ರಶ್ನೆ ಮಾಡುತ್ತಿದ್ದಾರೆ," ಎಂದರು.
ಇನ್ನು ವಿಧಾನಮಂಡಲದ ಅಧಿವೇಶನದಲ್ಲಿ ಪ್ರತಿಪಕ್ಷ ಬಿಜೆಪಿ ಕಲಾಪಕ್ಕೆ ಅಡ್ಡಿ ಪಡಿಸುತ್ತಿದೆ ಎಂಬ ಪ್ರಶ್ನೆಗೆ "ಲೋಕಸಭೆಯ ಅಧಿವೇಶನದ ವೇಳೆ ಕಾಂಗ್ರೆಸ್ ನ ಸದಸ್ಯರು ಮಾಡುತ್ತಿರುವುದೇನು ?" ಎಂದು ಪತ್ರಕರ್ತರಿಗೇ ಮರು ಪ್ರಶ್ನೆ ಹಾಕಿದರು.

ನಿರಂಜನ್ ಮೇಲೆ ಅನುಕಂಪವಿರಲಿ
ಉಪಚುನಾವಣೆ ಹಿನ್ನೆಲೆಯಲ್ಲಿ ಮಾತನಾಡಿದ ಅವರು ಗುಂಡ್ಲುಪೇಟೆ ಕ್ಷೇತ್ರದ ಮತದಾರರು ಅನುಕಂಪ ತೋರಬೇಕಿರುವುದು ಬಿಜೆಪಿ ಅಭ್ಯರ್ಥಿ ನಿರಂಜನ್ ಮೇಲೆ. ದಿವಂಗತ ಎಚ್.ಎಸ್. ಮಹದೇವ ಪ್ರಸಾದ್ ಅವರಿಗೆ 22 ವರ್ಷಗಳ ಕಾಲ ಅಧಿಕಾರ ನೀಡಿದ್ದೀರಿ. ನಿರಂಜನ್ ಎರಡು ಬಾರಿ ಸೋತಿದ್ದು, ಅವರ ತಂದೆ ಕೂಡ ಎರಡು ಬಾರಿ ಸೋತಿದ್ದಾರೆ. ಹೀಗಾಗಿ ನಿರಂಜನ್ ಮೇಲೆ ಅನುಕಂಪ ತೋರಿಸಿ ಮತ ಹಾಕಬೇಕಿದೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

ಗೆಲ್ಲುವ ಭ್ರಮೆ
ಕಾಂಗ್ರೆಸ್ ಹೆಚ್ಚು ಸಚಿವರು, ಶಾಸಕರನ್ನು ಪ್ರಚಾರಕ್ಕೆ ಕಳುಹಿಸಿದರೆ ಬಿಜೆಪಿಗೆ ಹೆಚ್ಚಿನ ಲಾಭವಾಗಲಿದೆ. ಕಾಂಗ್ರೆಸ್ ಎರಡೂ ಕ್ಷೇತ್ರದಲ್ಲಿ ಹಣ ಬಲ ಹಾಗೂ ಜಾತಿಬಲದಿಂದ ಗೆಲ್ಲುವ ಭ್ರಮೆಯಲ್ಲಿದೆ. ಆದರೆ ಎರಡು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ದ್ವೇಷದ ರಾಜಕಾರಣ
ಸರ್ಕಾರ ನಂಜನಗೂಡಿಗೆ 500 ಕೋಟಿಯಷ್ಟು ಅನುದಾನ ನೀಡಿದೆ. ಆದರೆ ಗುಂಡ್ಲುಪೇಟೆಗೆ ಯಾವುದೇ ಅನುದಾನ ನೀಡಿಲ್ಲ. ಕಾಂಗ್ರೆಸ್ ದ್ವೇಷದ ರಾಜಕಾರಣ ಮಾಡುತ್ತಿದೆ ಅಂತ ಇದರಲ್ಲೇ ತಿಳಿಯುತ್ತದೆ. ಸರ್ಕಾರದ ವೈಫಲ್ಯಗಳನ್ನು ಇಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತೇವೆ ಎಂದು ಅವರು ತಿಳಿಸಿದರು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications