ಕಾಂಗ್ರೆಸ್ ನಲ್ಲಿ ಆಂತರಿಕ ಮನಸ್ತಾಪದ ಸುಳಿವು ಕೊಟ್ಟ ಗೆದ್ದ ಕೈ ಶಾಸಕ
ಮೈಸೂರು, ಡಿಸೆಂಬರ್ 10: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಭಂಗ ಅನುಭವಿಸಿದ ಬೆನ್ನಲ್ಲೇ, ಕೈ ಪಾಳಯದಲ್ಲಿ ಆಂತರಿಕ ಮನಸ್ತಾಪವಿರುವ ಸಣ್ಣ ಸುಳಿವನ್ನು ನೂತನ ಶಾಸಕ ಎಚ್.ಪಿ. ಮಂಜುನಾಥ್ ಬಿಟ್ಟುಕೊಟ್ಟಿದ್ದಾರೆ.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಮೈಸೂರಿನಲ್ಲಿ ಮಂಗಳವಾರ ಅರ್ಜುನ್ ಗುರೂಜಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷ ಜಂಬೂ ಸವಾರಿ ಇದ್ದ ಹಾಗೆ. ಒಬ್ಬೊಬ್ಬರು ಒಂದೊಂದು ರೀತಿಯ ಕೆಲಸ ಮಾಡಬೇಕು. ನಾನೇ ಅಂಬಾರಿ ಹೊರಬೇಕು ಅನ್ನೋದು ಸರಿಯಲ್ಲ. ಒಬ್ಬರು ಅಂಬಾರಿ ಹೊತ್ತ ನಂತರ ಮತ್ತೊಬ್ಬರಿಗೆ ಸಮಯ ಬರುವವರೆಗೂ ಕಾಯಬೇಕು" ಎಂದಿದ್ದಾರೆ.
ಹಿತ ಶತ್ರುಗಳಿಂದ ರಾಜೀನಾಮೆ ನೀಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, "ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ನಾನು ಎಲ್ಲಾ ಮುಖಂಡರ ಜೊತೆ ಮಾತಾಡಿದ್ದೇನೆ. ಕಾಂಗ್ರೆಸ್ ನಲ್ಲಿ ಟೀಂ ಇಲ್ಲ, ಟೀಂ ಇರಲು ಬಿಡಬಾರದು. ನಾನು ಕೂಡ ಎಲ್ಲಾ ಮುಖಂಡರನ್ನು ಹುಣಸೂರಿಗೆ ಕರೆಸಿ ಪ್ರಚಾರ ಮಾಡಿಸಿದ್ದೇನೆ. ನಾವುಗಳು ಟೀಂ ಆಗದಂತೆ ಮಾಡಬೇಕು" ಎಂದರು.

"ಕಾಂಗ್ರೆಸ್ನಲ್ಲಿ ಹಿತ ಶತ್ರುಗಳಿಲ್ಲ, ನಾವು ಸೆಕೆಂಡ್ ಬೆಂಚ್ ಲೀಡರ್ ಮೊದಲ ಸಾಲಿನವರಿಗೆ ಸೇತುವೆ ಆಗಬೇಕು. ಒಬ್ಬರಿಗೊಬ್ಬರಿಗೆ ಸೇತುವೆ ಆಗಬೇಕೆ ಹೊರತು ಗೋಡೆಯಾಗಬಾರದು. ಈ ಗೋಡೆಗಳು ಯಾರಾಗ್ತಿದ್ದಾರೆ ಅನ್ನೋದನ್ನು ನೋಡಿ ತಡೆಯಬೇಕು. ಕೆಲವು ಘಟನೆಗಳಿಂದ ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿರೋದು ಸತ್ಯ. ಅದನ್ನ ಕಾಂಗ್ರೆಸ್ ಮುಖಂಡರು ಇಂದು ಸರಿ ಮಾಡುತ್ತಾರೆ" ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
-
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications