ಕಾಂಗ್ರೆಸ್ ನಲ್ಲಿ ಆಂತರಿಕ ಮನಸ್ತಾಪದ ಸುಳಿವು ಕೊಟ್ಟ ಗೆದ್ದ ಕೈ ಶಾಸಕ
ಮೈಸೂರು, ಡಿಸೆಂಬರ್ 10: ರಾಜ್ಯ ರಾಜಕೀಯದಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಭಂಗ ಅನುಭವಿಸಿದ ಬೆನ್ನಲ್ಲೇ, ಕೈ ಪಾಳಯದಲ್ಲಿ ಆಂತರಿಕ ಮನಸ್ತಾಪವಿರುವ ಸಣ್ಣ ಸುಳಿವನ್ನು ನೂತನ ಶಾಸಕ ಎಚ್.ಪಿ. ಮಂಜುನಾಥ್ ಬಿಟ್ಟುಕೊಟ್ಟಿದ್ದಾರೆ.
ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಬೆನ್ನಲ್ಲೇ ಮೈಸೂರಿನಲ್ಲಿ ಮಂಗಳವಾರ ಅರ್ಜುನ್ ಗುರೂಜಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕಾಂಗ್ರೆಸ್ ಪಕ್ಷ ಜಂಬೂ ಸವಾರಿ ಇದ್ದ ಹಾಗೆ. ಒಬ್ಬೊಬ್ಬರು ಒಂದೊಂದು ರೀತಿಯ ಕೆಲಸ ಮಾಡಬೇಕು. ನಾನೇ ಅಂಬಾರಿ ಹೊರಬೇಕು ಅನ್ನೋದು ಸರಿಯಲ್ಲ. ಒಬ್ಬರು ಅಂಬಾರಿ ಹೊತ್ತ ನಂತರ ಮತ್ತೊಬ್ಬರಿಗೆ ಸಮಯ ಬರುವವರೆಗೂ ಕಾಯಬೇಕು" ಎಂದಿದ್ದಾರೆ.
ಹಿತ ಶತ್ರುಗಳಿಂದ ರಾಜೀನಾಮೆ ನೀಡಿದೆ ಎಂಬ ಸಿದ್ದರಾಮಯ್ಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, "ರಾಜಕೀಯದಲ್ಲಿ ಯಾರೂ ಶತ್ರುಗಳಲ್ಲ, ಯಾರೂ ಮಿತ್ರರಲ್ಲ. ನಾನು ಎಲ್ಲಾ ಮುಖಂಡರ ಜೊತೆ ಮಾತಾಡಿದ್ದೇನೆ. ಕಾಂಗ್ರೆಸ್ ನಲ್ಲಿ ಟೀಂ ಇಲ್ಲ, ಟೀಂ ಇರಲು ಬಿಡಬಾರದು. ನಾನು ಕೂಡ ಎಲ್ಲಾ ಮುಖಂಡರನ್ನು ಹುಣಸೂರಿಗೆ ಕರೆಸಿ ಪ್ರಚಾರ ಮಾಡಿಸಿದ್ದೇನೆ. ನಾವುಗಳು ಟೀಂ ಆಗದಂತೆ ಮಾಡಬೇಕು" ಎಂದರು.

"ಕಾಂಗ್ರೆಸ್ನಲ್ಲಿ ಹಿತ ಶತ್ರುಗಳಿಲ್ಲ, ನಾವು ಸೆಕೆಂಡ್ ಬೆಂಚ್ ಲೀಡರ್ ಮೊದಲ ಸಾಲಿನವರಿಗೆ ಸೇತುವೆ ಆಗಬೇಕು. ಒಬ್ಬರಿಗೊಬ್ಬರಿಗೆ ಸೇತುವೆ ಆಗಬೇಕೆ ಹೊರತು ಗೋಡೆಯಾಗಬಾರದು. ಈ ಗೋಡೆಗಳು ಯಾರಾಗ್ತಿದ್ದಾರೆ ಅನ್ನೋದನ್ನು ನೋಡಿ ತಡೆಯಬೇಕು. ಕೆಲವು ಘಟನೆಗಳಿಂದ ಸಿದ್ದರಾಮಯ್ಯ ಅವರ ಮನಸ್ಸಿಗೆ ನೋವಾಗಿರೋದು ಸತ್ಯ. ಅದನ್ನ ಕಾಂಗ್ರೆಸ್ ಮುಖಂಡರು ಇಂದು ಸರಿ ಮಾಡುತ್ತಾರೆ" ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications