ಕಾಂಗ್ರೆಸ್ ವಿರುದ್ಧ ಗುಟುರು ಹಾಕಿದ ಹಳ್ಳಿಹಕ್ಕಿ ವಿಶ್ವನಾಥ್

ಮೈಸೂರು, ಮೇ 08: ಮೈಸೂರಿನಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಎಚ್. ವಿಶ್ವನಾಥ್ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. "ಈ ರಾಜ್ಯದ ಹಣಕಾಸು ಸ್ಥಿತಿಯನ್ನು ಹಾಳು ಮಾಡಿದ್ದು ಯಾರು? ರಾಜ್ಯದ ಬೊಕ್ಕಸದಲ್ಲಿ ದುಡ್ಡೆಲ್ಲಿದೆ?. ನೀವು ಏನ್ ಮಾಡಿ ಹೋದ್ರಿ ಗೊತ್ತಾ?, ಹಣಕಾಸು ವ್ಯವಸ್ಥೆಯನ್ನು ಹಾಳು ಮಾಡಿದವರೇ ಇವತ್ತು ಹಣಕಾಸಿನ ಬಗ್ಗೆ ಮಾತನಾಡುತ್ತಾರೆ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Recommended Video

      ನಮ್ಮ ರಾಜ್ಯದಲ್ಲಿ 26 ಜನ ಅವ್ರೆ ಅವರೆಲ್ಲರೂ ವೇಸ್ಟ್ ಎಂದ ಡಿ ಕೆ ಶಿವಕುಮಾರ್

      "ರಾಜ್ಯಕ್ಕೆ ಹಣಕಾಸಿ ಮೂಲ ಹಾಳು ಮಾಡಿದ್ದೇ ಕಾಂಗ್ರೆಸ್. ಆರ್ಥಿಕ ಶಿಸ್ತು ಕೆಟ್ಟಿರುವ ಬಗ್ಗೆ ದೊಡ್ಡ ಚರ್ಚೆಯಾಗಲಿ. ಕಾಂಗ್ರೆಸ್ ಕಾಲದಲ್ಲಿ 1 ಲಕ್ಷದ 68 ಸಾವಿರ ಕೋಟಿ ಸಾಲ ಮಾಡಿದ್ದಿರಿ. ಈಗ ಅದು 4 ಲಕ್ಷ ಕೋಟಿಗೆ ಬಂದಿದೆ. ನಾವು 31 ಸಾವಿರ ಕೋಟಿಯನ್ನು ಬರೀ ಬಡ್ಡಿ ಕಟ್ಟುತ್ತಿದ್ದೇವೆ. 55 ಸಾವಿರ ಕೋಟಿ ಸಂಬಳ ಹಾಗೂ ಪೆನ್ಷನ್ ಗೆ ಬೇಕಾಗಿದೆ" ಎಂದು ದೂರಿದ್ದಾರೆ.

      ವಿಜಯೇಂದ್ರ ಮೇಲೆ ಅಸಮಾಧಾನ: ಇದೇ ಸಂದರ್ಭ ಮುಡಾ ಆಯುಕ್ತರ ಜಾಗಕ್ಕೆ ವಿಶ್ವನಾಥ್ ಶಿಫಾರಸ್ಸಿಗೆ ಮಣೆ ಹಾಕದ್ದಕ್ಕೆ ಸಿಎಂ ಪುತ್ರ ವಿಜಯೇಂದ್ರ ಅವರ ಮೇಲೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಶ್ವನಾಥ್ ಶಿಫಾರಸ್ಸಿಗೆ ಕಿಮ್ಮತ್ತು ಕೊಡದೆ ಮುಡಾ ಆಯುಕ್ತರಾಗಿ ಕಿರಿಯ ಶ್ರೇಣಿ ಕೆಎಎಸ್ ಅಧಿಕಾರಿ ನೇಮಕ ಮಾಡಿದ್ದು, ಸಿಎಂ ಸೋದರಳಿಯ ಅಶೋಕ್ ಶಿಫಾರಸ್ಸಿಗೆ ಮಣೆ ಹಾಕಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

      H Vishwanath Speak Against Congress Today In Mysuru

      ಸುತ್ತೂರು ಮಠದ ಕಾರ್ಯಕ್ರಮದಲ್ಲಿ ಸ್ವಪಕ್ಷೀಯ ಸಚಿವರ ಜೊತೆ ಬೆರೆಯದೆ ದೂರ ಉಳಿದು ತಮ್ಮ ಅಸಮಾಧಾನವನ್ನು ಹೊರಹಾಕಿದರು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+