ಅಹಿಂದ ವರ್ಗಗಳು ಇನ್ನಾದರೂ ಈ ಬಗ್ಗೆ ಗಂಭೀರವಾಗಿ ಯೋಚಿಸುವುದು ಒಳ್ಳೆಯದು
ಮೈಸೂರು, ಜುಲೈ 20: ಇಂದಿನ ರಾಜಕಾರಣ ಜಾತಿ ಮತ್ತು ವ್ಯಾಪಾರಕ್ಕೆ ಸೀಮಿತವಾಗಿದೆ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಬೇಸರ ವ್ಯಕ್ತ ಪಡಿಸಿದ್ದಾರೆ.
"ರಾಜಕಾರಣ ಬರಬರುತ್ತಾ ಜಾತಿ ಮತ್ತು ವ್ಯಾಪಾರದ ಗೋಡೆಗಳಿಗೆ ಮೊಳೆ ಹೊಡೆದುಕೊಂಡು ಜಾತಿ ಪ್ರೇಮದ ಆಚೆಗೂ ಇರುವಂತಹ ಸರ್ವ ಜನಾಂಗದ ಹಿತಾಸಕ್ತಿ ಎಂಬ ಜನಸೇವಾ ವಲಯದ ಗಂಭೀರ ಸಂಗತಿಯನ್ನು ಮರೆಯುತ್ತಿರುವುದು ದುರಂತದ ವಿದ್ಯಮಾನ"ಎಂದು ಮಹದೇವಪ್ಪ ಹೇಳಿದರು.
"ಕೆಲ ಮಿತಿಗಳ ನಡುವೆಯೂ ಕೂಡಾ ಜಾತ್ಯಾತೀತ ನಿಲುವುಗಳನ್ನೇ ಇಟ್ಟುಕೊಂಡು 5 ವರ್ಷಗಳ ಕಾಲ ಸುಭದ್ರ ಆಡಳಿತ ನೀಡಿ ಎಲ್ಲಾ ವರ್ಗದ ಜನರ ಹಿತಾಸಕ್ತಿಯನ್ನು ಕಾಂಗ್ರೆಸ್ ಕಾಪಾಡಿತು".

"ಕಾಂಗ್ರೆಸ್ ಸರ್ಕಾರವು ಅಧಿಕಾರದಿಂದ ಕೆಳಗಿಳಿದು ನಮ್ಮ ಸುತ್ತಲ ಜಾತಿವಾದಿ ಮತ್ತು ವ್ಯಾಪಾರಿ ಮನಸ್ಥಿತಿಯ ಜನರ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದರಿಂದಲೇ ಜನ ಸಾಮಾನ್ಯರು ಬದುಕಲು ಸಾಧ್ಯವೇ ಇಲ್ಲದಂತಹ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ" ಎಂದು ಮಹದೇವಪ್ಪ ಬೇಸರ ವ್ಯಕ್ತ ಪಡಿಸಿದರು.
"ಬಹುಶಃ ಇಷ್ಟೊಂದು ಸಂಕಷ್ಟ ಅನುಭವಿಸಿದ ಮೇಲೆ ಈಗ ಎಲ್ಲರಿಗೂ ಪರಿಸ್ಥಿತಿಯ ಗಂಭೀರತೆಯು ಅರಿವಾಗಿದೆಯಾದರೂ ಕೂಡಾ ಜಾತಿಶ್ರೇಷ್ಠತೆಯ ಪ್ರಜ್ಞೆಯು ಅವರಲ್ಲಿ ತಮಗೆ ಒದಗಿದ ಪರಿಸ್ಥಿತಿಗಿಂತಲೂ ನಮ್ಮ ಜಾತಿಯಿದ್ದರೆ ಸಾಕು ಜನ ಬದುಕು ಯಾರಿಗೆ ಬೇಕು ಎಂಬ ಧೋರಣೆಯೇ ಮುನ್ನಲೆಗೆ ಬರುವುದು ಅಪಾಯಕಾರಿ ಸಂಗತಿಯೇ ಹೌದು" ಎಂದು ಮಹದೇವಪ್ಪ ಹೇಳಿದರು.
"ಒಂದು ವೇಳೆ ಇಂತಹ ಅತಿ ಜಾತಿ ಪ್ರಜ್ಞೆಯು ನಮ್ಮ ಅಹಿಂದ ವರ್ಗಗಳಲ್ಲಿ ಏನಾದರೂ ಜಾಗೃತವಾಗಿದ್ದಿದ್ದರೆ ನಿಜಕ್ಕೂ ರಾಜಕೀಯವಾಗಿ ಮತ್ತು ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಶಾಶ್ವತವಾದ ರಾಜಕೀಯ ಶಕ್ತಿಯೇ ಇಲ್ಲಿ ನಿರ್ಮಾಣವಾಗುತ್ತಿತ್ತು. ಅಹಿಂದ ವರ್ಗಗಳು ಇನ್ನಾದರೂ ಈ ಬಗ್ಗೆ ಗಂಭೀರವಾಗಿ ಯೋಚಿಸುವುದು ಒಳ್ಳೆಯದು"ಎಂದು ಹೆಚ್.ಸಿ.ಮಹದೇವಪ್ಪ ಮನವಿ ಮಾಡಿದ್ದಾರೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications