ಧ್ರುವನಾರಾಯಣ ಅವರ ಹಿರಿಯ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡಿ: ಎಚ್.ವಿಶ್ವನಾಥ್ ಆಗ್ರಹ
ನಂಜನಗೂಡು ಕ್ಷೇತ್ರದಲ್ಲಿ ಆರ್.ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕೆಂದು ಎಚ್.ವಿಶ್ವನಾಥ್ ಮೈಸೂರಿನಲ್ಲಿ ಆಗ್ರಹಿಸಿದ್ದಾರೆ.
ಮೈಸೂರು, ಮಾರ್ಚ್, 15: ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಲ್ಲಿ ಆರ್.ಧ್ರುವನಾರಾಯಣ್ ಅವರ ಪುತ್ರ ದರ್ಶನ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಮೈಸೂರಿನಲ್ಲಿ ಹೇಳಿದರು.
ಮೈಸೂರಿನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಧ್ರುವನಾರಾಯಣ ಅವರು ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ತುಂಬಾ ಶ್ರಮಿಸಿದ್ದಾರೆ. ಅವರ ಸಾವಿನ ಸಮಯದಲ್ಲಿ ಅವರ ಮೇಲೆ ಜನರಿಗೆ ಎಷ್ಟು ಪ್ರೀತಿ, ಅಭಿಮಾನವಿತ್ತು ಎಂಬುದು ವ್ಯಕ್ತವಾಗಿದೆ. ಅವರ ಪತ್ನಿ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲಿ ನಂಜನಗೂಡು ಕ್ಷೇತ್ರದ ಟಿಕೆಟ್ ಅನ್ನು ಧ್ರುವನಾರಾಯಣ್ ಪುತ್ರ ದರ್ಶನ್ಗೆ ನೀಡಬೇಕು. ಆ ಮೂಲಕ ಧ್ರುವನಾರಾಯಣ್ ಕುಟುಂಬದ ಜೊತೆ ಕಾಂಗ್ರೆಸ್ ಪಕ್ಷ ಇದೆ ಎಂಬ ಸಂದೇಶವನ್ನು ರವಾನಿಸಬೇಕೆಂದರು.

ದರ್ಶನ್ಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು
ಪ್ರಸ್ತುತ ರಾಜಕಾರಣದಲ್ಲಿ ರಿಯಲ್ ಎಸ್ಟೇಟ್ನವರು, ರೌಡಿಶೀಟರ್ ಹಿನ್ನೆಲೆಯುಳ್ಳವರು ಹೆಚ್ಚಿದ್ದಾರೆ. ವಕೀಲರು ರಾಜಕೀಯದಲ್ಲಿರುವುದು ತುಂಬಾ ಕಡಿಮೆಯಾಗಿದೆ. ಹಾಗಾಗಿ, ವಕೀಲರಾಗಿರುವ ದರ್ಶನ್ಗೆ ನಂಜನಗೂಡು ಟಿಕೆಟ್ ನೀಡಬೇಕು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಹಾಗೂ ಹಿರಿಯ ನಾಯಕರು ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಮತಬೇಟೆ ಕೆಲಸ ಮಾಡುತ್ತಿದ್ದಾರೆ
ಬಿಜೆಪಿ ರಾಜ್ಯ ನಾಯಕರು ನರೇಂದ್ರ ಮೋದಿ ಅವರು ಮಂಡ್ಯಕ್ಕೆ ಬಂದಾಗ ಮಾಜಿ ಸಂಸದ ಧ್ರುವನಾರಾಯಣ್ ಮೃತಪಟ್ಟ ಬಗ್ಗೆ ಸೌಜನ್ಯಕ್ಕಾದರೂ ಪ್ರಸ್ತಾಪ ಮಾಡುವಂತೆ ತಿಳಿಸಬಹುದಿತ್ತು. ಆದರೆ, ಅದ್ಯಾವುದೋ ಉರಿಗೌಡ, ನಂಜೇಗೌಡರ ಹೆಸರು ಹೇಳಿಕೊಂಡು ಭಾವನಾತ್ಮಕ ವಿಚಾರ ತಂದು ಮತಬೇಟೆ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ಧ್ರುವನಾರಾಯಣ ಅಕಾಲಿಕ ಮರಣ, "ಕೈ"ಗೆ ಸಂಕಷ್ಟ
ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಂಜನಗೂಡು ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದ ಕಾಂಗ್ರೆಸ್ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅವರ ಅಕಾಲಿಕ ಮರಣದಿಂದ ಕಾಂಗ್ರೆಸ್ ಸಂಕಷ್ಟಕ್ಕೆ ಸಿಲುಕಿದೆ.
ಚಾಮರಾಜನಗರದ ಮಾಜಿ ಸಂಸದರೂ ಆಗಿದ್ದ ಆರ್. ಧ್ರುವನಾರಾಯಣ್ ಅವರ ನಿಧನದ ನಂತರ ಅವರ ಪುತ್ರ ದರ್ಶನ್ಗೆ ನಂಜನಗೂಡು ಟಿಕೆಟ್ ನೀಡುವಂತೆ ಅವರ ಬೆಂಬಲಿಗರು ಕಾಂಗ್ರೆಸ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಸಚಿವ ಹೆಚ್ ಸಿ ಮಹದೇವಪ್ಪ ಕೂಡ ನಂಜನಗೂಡು ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಹಾಗೆಯೇ ಹಲವಾರು ನಾಯಕರು ದರ್ಶನ್ಗೆ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ. ಒಟ್ಟಾರೆಯಾಗಿ ಕಾಂಗ್ರೆಸ್ನ ಮುಂದಿನ ನಿಲುವು ಏನೆಂದು ಕಾದುನೋಡಬೇಕಿದೆ.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications