ICAR Award: ಬಂಡೂರು ಕುರಿಗಳ ಸಂರಕ್ಷಣೆ: ಮೈಸೂರಿನ ರೈತನಿಗೆ ಒಲಿದ ರಾಷ್ಟ್ರೀಯ ಪುರಸ್ಕಾರ
ಮೈಸೂರು, ಜನವರಿ, 03: ಹರಿಯಾಣದ ಕರ್ನಾಲ್ನಲ್ಲಿ ಭಾರತೀಯ ಕೃಷಿ ಸಂಶೋಧನಾ ಮಂಡಳಿ- ನ್ಯಾಷನಲ್ ಬ್ಯೂರೋ ಆಫ್ ಅನಿಮಲ್ ಜೆನೆಟಿಕ್ ರಿಸೋರ್ಸಸ್ ರಾಷ್ಟ್ರೀಯ ಮಟ್ಟದ ತಳಿ ಸಂರಕ್ಷಣೆ ಪ್ರಶಸ್ತಿ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮದಲ್ಲಿ ಮೈಸೂರು ರೈತನಿಗೆ ಪ್ರಶಸ್ತಿ ಒಲಿದು ಬಂದಿದೆ. ಇದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಯಡಹಳ್ಳಿಯ ಶ್ರೀನಿವಾಸ್ ಆಚಾರ್ಯ ಅವರ ಯಶೋಗಾಥೆಯಾಗಿದೆ. ಇವರು ಮಾಲೀಕತ್ವದ ಯಶೋಧವನ ಮೇಕೆ, ಬಂಡೂರು ಕುರಿ ತಳಿಯ ಸಂರಕ್ಷಣೆಗಾಗಿ ರಾಷ್ಟ್ರಮಟ್ಟದ ಐಎಸಿಆರ್ ತಳಿ ಸಂರಕ್ಷಣಾ ಪ್ರಶಸ್ತಿ ಪಡೆದುಕೊಂಡು ಗಮನ ಸೆಳೆದಿದ್ದಾರೆ.
50 ಹೆಕ್ಟೇರ್ನಲ್ಲಿ ಆರಂಭಿಸಿದ್ದ ಫಾರಂ
ಈ ಫಾರಂ ಅನ್ನು 2012ರಲ್ಲಿ 50 ಹೆಕ್ಟೇರ್ನಲ್ಲಿ ಆರಂಭಿಸಲಾಗಿತ್ತು. ಇಲ್ಲಿ ಪ್ರತಿಷ್ಠಿತ ಬಂಡೂರು ಕುರಿ ತಳಿಯನ್ನು ಸಾಕಾಣಿಕೆ ಮಾಡುತ್ತಿದ್ದು, ಇಲ್ಲಿಯೇ ತಳಿ ಅಭಿವೃದ್ಧಿ ವ್ಯವಸ್ಥೆ, ಸುಧಾರಿತ ನಿರ್ವಹಣಾ ಕ್ರಮಗಳ ಮೂಲಕ ರಾಜ್ಯದ ಗಮನ ಸೆಳೆಯಲಾಗಿದೆ. ಸುಮಾರು 80 ತಳಿಗಳಿಂದ 400 ಬಂಡೂರು ಕುರಿಗಳನ್ನು ಅಭಿವೃದ್ಧಿಪಡಿಸಲಾಗಿದೆ. ಅವುಗಳನ್ನು ಸುತ್ತಮುತ್ತಲಿನ ಆಸಕ್ತ ರೈತರಿಗೆ ವೈಜ್ಞಾನಿಕ ಬೆಲೆಯಲ್ಲಿ ವಿತರಣೆ ಮಾಡಿ ತಳಿ ಸಂರಕ್ಷಣೆ ಮಾಡಲಾಗುತ್ತಿದೆ. ಆದ್ದರಿಂದ ಕೇಂದ್ರ ಸರ್ಕಾರದ ಅಂಗಸಂಸ್ಥೆಯಾದ ಹರಿಯಾಣದ ಭಾರತೀಯ ಕೃಷಿ ಸಂಶೋಧನಾ ಪರಿಷತ್ 2022ನೇ ಸಾಲಿನ ಪ್ರಶಸ್ತಿಯನ್ನು ಶ್ರೀನಿವಾಸ್ ಆಚಾರ್ಯಗೆ ನೀಡಿದೆ.

ಬಂಡೂರು ಕುರಿಯ ವಿಶೇಷತೆ ಏನು?
''ಈ ಕುರಿಯನ್ನು ಜನರು ಹೆಚ್ಚಾಗಿ ತಿನ್ನಲು ಸಾಕುತ್ತಾರೆ. ಇದರ ರುಚಿ ಜಾಗತಿಕ ಮಟ್ಟದಲ್ಲೂ ಹೆಸರು ಮಾಡಿದ್ದು, ಬೇಡಿಕೆ ಹೆಚ್ಚಿದೆ. ಆದರೆ, ಪೂರೈಕೆ ಮಾತ್ರ ಇಲ್ಲ. ಅಳಿವಿನ ಹಂಚಿನಲ್ಲಿರುವ ಈ ಕುರಿಯನ್ನು ಸಾಕಲು ರೈತರು ಮುಂದಾಗಬೇಕು,'' ಎಂದು ಶ್ರೀನಿವಾಸ್ ಆಚಾರ್ಯ ಸಲಹೆ ನೀಡಿದ್ದಾರೆ. ನಂತರ ಪಶುಪಾಲನಾ ಮತ್ತು ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಬಿ.ಎನ್.ಷಡಕ್ಷರಿಮೂರ್ತಿ ಮಾತನಾಡಿ, ಬಂಡೂರು ಕುರಿ ಅವಸಾನದ ಅಂಚಿಗೆ ಬಂದಿತ್ತು. 2012ರಲ್ಲಿ ಕೇವಲ 3 ಸಾವಿರ ಕುರಿಗಳಿದ್ದವು. ಕೇಂದ್ರ, ರಾಜ್ಯ ಸರ್ಕಾರದ ಪ್ರಯತ್ನದ ಫಲವಾಗಿ ಇದೀಗ 25 ಸಾವಿರ ಕುರಿಗಳು ಇವೆ ಎಂದು ಮಾಹಿತಿ ನೀಡಿದರು.

''ಮಂಡ್ಯ ಜಿಲ್ಲೆಯ ಮಳವಳ್ಳಿ ಕಿರುಗಾವಲು ಬಳಿ ಈ ಕುರಿಗಳ ಸಂಖ್ಯೆ ಹೆಚ್ಚಿದೆ. ಈ ಕುರಿ ರೈತ ಮಿತ್ರವಾಗಿರುವುದರಿಂದ ಪ್ರತಿ ಮನೆಯಲ್ಲಿ 8-10 ಕುರಿಗಳನ್ನು ಸಾಕಲಾಗುತ್ತಿದೆ. ಈ ಕುರಿಯ ಮಾಂಸ ಬಹಳ ರುಚಿಕರವಾಗಿರುತ್ತದೆ. ಆದ್ದರಿಂದ ಈ ತಳಿ ಸಂತತಿ ಕಡಿಮೆಯಾಗಿತ್ತು. ಇದನ್ನು ಮನಗಂಡು ರಾಜ್ಯ ಸರ್ಕಾರವು ಮಳವಳ್ಳಿಯಲ್ಲಿ ಸರ್ಕಾರಿ ಬಂಡೂರಿ ಕುರಿ ಸಂರಕ್ಷಣಾ ಕೇಂದ್ರವನ್ನು ತೆರೆದಿದೆ. ತಳಿಗಳನ್ನು ಉನ್ನತೀಕರಣ ಮಾಡಿದ್ದು, ಟಗರನ್ನು ರೈತರಿಗೆ ನೀಡಲಾಗುತ್ತಿದೆ. ಇದರ ಸಂರಕ್ಷಣೆ ಕುರಿತು ವೈಜ್ಞಾನಿಕ ತರಬೇತಿಯನ್ನೂ ನೀಡಲಾಗುತ್ತಿದೆ,'' ಎಂದರು.
-
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ












Click it and Unblock the Notifications