ಫೇಸ್ ಬುಕ್ ನಲ್ಲಿ ದಿನೇಶ್ ಗುಂಡೂರಾವ್ ಗೆ ಸಿಂಹ ಹಿಗ್ಗಾ – ಮುಗ್ಗಾ ಕ್ಲಾಸ್!
ಮೈಸೂರು, ಏಪ್ರಿಲ್ 15 : ದಿನೇಶ್ ಗುಂಡುರಾವ್ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಅವರು ತಮ್ಮ ಟ್ವಿಟ್ಟರ್ ಲೈವ್ ನಲ್ಲಿ ಬಂದು ಗುಂಡೂರಾವ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಬೇಕಿತ್ತು. ಆಗ ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು. ನಾಲಗೆ ಮೇಲೆ ನಿಗಾ ಇರಲಿ ಎಂದು ಎಚ್ಚರಿಕೆ ನೀಡಿದ್ದಾರೆ.
ಯೋಗಿ ಆದಿತ್ಯನಾಥರಿಗೆ ಚಪ್ಪಲಿಯಲ್ಲಿ ಹೊಡಿಬೇಕು ಅಂದಿದ್ದೀರಲ್ಲ ದಿನೇಶ್ ಗುಂಡೂರಾವ್, ಇದೇ ಮಾತನ್ನು ಯೋಗಿ ಬದಲು ಒಬ್ಬ ಮುಲ್ಲಾನೋ, ಮೌಲ್ವಿ ಬಗ್ಗೆನೋ ಆಡಿದ್ರೆ, ನಿಮ್ಮ ಹೆಂಡತಿ ಬೇಗಂ ತಬ್ಬು ಅವರೇ ಆ ಕೆಲಸ ನಿಮಗೆ ಮಾಡಿರುತ್ತಿದ್ದರು, ನಾಲಗೆ ಮೇಲೆ ನಿಗಾ ಇರಲಿ. pic.twitter.com/IQPaRZnbMQ
— Pratap Simha (@mepratap) April 15, 2018
ಉತ್ತರ ಪ್ರದೇಶದ ಉನ್ನಾವೊ ಹಾಗೂ ಕಥುವಾ ಘಟನೆ ವಿರುದ್ಧ ನಡೆಸಿದ ಪ್ರತಿಭಟನೆ ವೇಳೆ ದಿನೇಶ್ ಗುಂಡೂರಾವ್ ಆದಿತ್ಯನಾಥ್ ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಲು ನಾಲಾಯಕ್. ಅವರು ಕರ್ನಾಟಕಕ್ಕೆ ಬಂದರೆ ಕಳಂಕ ಅವರು ಇಲ್ಲಿಗೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದಿದ್ದರು. ಈ ಹಿನ್ನೆಲೆ ಪ್ರತಾಪ್ ಸಿಂಹ ಹೇಳಿಕೆ ನೀಡಿದ್ದಾರೆ.
ಈ ವೇಳೆ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಇರಲು ಅರ್ಹರಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಅವರು ಯೋಗಿ ಅವರನ್ನು ಸಿಎಂ ಸ್ಥಾನದಿಂದ ಕಿತ್ತೊಗೆಯಬೇಕು. ಅವರು ಕರ್ನಾಟಕಕ್ಕೆ ಬಂದು ಭಾಷಣ ಮಾಡುತ್ತಾರೆ. ಈ ಬಾರಿ ಯೋಗಿ ಆದಿತ್ಯನಾಥ್ ಕರ್ನಾಟಕಕ್ಕೆ ಬಂದರೆ ಚಪ್ಪಲಿಯಲ್ಲಿ ಹೊಡೆಯಿರಿ ಎಂದು ಹೇಳಿಕೆ ನಿಡಿದ್ದರು.












Click it and Unblock the Notifications