ಮೈಸೂರಿನ ದೊಡ್ಡ ಗಡಿಯಾರದ ಕಾಪರ್ ರಾಡ್ ಕಳವು
ಮೈಸೂರು, ಜನವರಿ 30: ಮೈಸೂರು ನಗರದ ಸ್ಮಾರಕ, 75 ಅಡಿ ಎತ್ತರದ, 96 ವರ್ಷದ ಇತಿಹಾಸ ಹೊಂದಿರುವ ದೊಡ್ಡ ಗಡಿಯಾರದ ಕಾಪರ್ ಗ್ರೌಂಡಿಂಗ್ ರಾಡ್ ನಾಪತ್ತೆಯಾಗಿರುವುದು ಶುಕ್ರವಾರ (ಜ.29) ಬೆಳಕಿಗೆ ಬಂದಿದೆ.
ಮೈಸೂರಿನ ಪುರಭವನದ ಎದುರಿರುವ ಈ ಗಡಿಯಾರ ಕಂಬದ ಕೆಳಭಾಗದಲ್ಲಿ ಸುಮಾರು 15 ಅಡಿ ಎತ್ತರದ ತಾಮ್ರದ ಲೈಟ್ನಿಂಗ್ ರಾಡ್ ಅನ್ನು ಅಳವಡಿಸಲಾಗಿತ್ತು. ಭಾರೀ ಮಿಂಚು, ಸಿಡಿಲು ಬಡಿದಾಗ ಕಟ್ಟಡಕ್ಕೆ ಅಪಾಯ ಬಾರದಿರಲಿ ಎಂಬ ಕಾರಣಕ್ಕೆ ಈ ರಾಡ್ ಅನ್ನು ಎಲ್ಲ ಪಾರಂಪರಿಕ ಕಟ್ಟಡಗಳಿಗೂ ಅಳವಡಿಸಿರಲಾಗುತ್ತದೆ.
ಆದರೆ ಈಗ ಈ ರಾಡ್ಗಳು ಕಳುವಾಗಿರುವುದು ಆತಂಕ ಮೂಡಿಸಿದೆ. ಅಲ್ಲದೆ ದೊಡ್ಡ ಗಡಿಯಾರದ ಕೆಳಭಾಗದಲ್ಲಿ ಇಲಿ, ಹೆಗ್ಗಣಗಳು ಭೂಮಿಯನ್ನು ಕೊರೆದು ದೊಡ್ಡ ಬಿಲ ಸೃಷ್ಟಿಸಿದ್ದು, ಕಟ್ಟಡದ ಸುರಕ್ಷತೆಗೂ ಅತಂಕ ಎದುರಾಗಿದೆ. ಈ ಕಾಪರ್ ರಾಡ್ನ್ನು ದುಷ್ಕರ್ಮಿಗಳು ಹಣದ ಆಸೆಗೆ ಕದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ದೊಡ್ಡ ಗಡಿಯಾರದ ಕೆಲವು ಭಾಗಗಳು ಶಿಥಿಲವಾಗಿವೆ. ಮಳೆಗಾಲದಲ್ಲಿ ಜೋರು ಗುಡುಗು ಅಥವಾ ಸಿಡಿಲು ಬಡಿದಾಗ ಕಟ್ಟಡಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಾಗಿದೆ. ಆದಷ್ಟು ಶೀಘ್ರವಾಗಿ ಮತ್ತೆ ರಾಡ್ ಅಳವಡಿಸಿ ಕಟ್ಟಡದ ಕೆಳಭಾಗದಲ್ಲಿ ಇಲಿ, ಹೆಗ್ಗಣಗಳು ಕೊರೆದಿರುವ ಸ್ಥಳವನ್ನು ಮುಚ್ಚಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದರಲ್ಲಿ ಅನುಮಾನವಿಲ್ಲ.
ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಅವರು ಈ ರಾಡ್ ೨ ವರ್ಷಗಳ ಹಿಂದೆಯೇ ಕಳುವಾಗಿದ್ದು, ಮುಂದಿನ ಎರಡು-ಮೂರು ದಿನದಲ್ಲಿ ಬೇರೆ ರಾಡ್ ಅಳವಡಿಸಲಾಗುದಲ್ಲದೆ, ದುರಸ್ಥಿ ಮಾಡಲಾಗುವುದು ಎಂದು ಹೇಳಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications