ಮೈಸೂರಿನ ದೊಡ್ಡ ಗಡಿಯಾರದ ಕಾಪರ್ ರಾಡ್ ಕಳವು
ಮೈಸೂರು, ಜನವರಿ 30: ಮೈಸೂರು ನಗರದ ಸ್ಮಾರಕ, 75 ಅಡಿ ಎತ್ತರದ, 96 ವರ್ಷದ ಇತಿಹಾಸ ಹೊಂದಿರುವ ದೊಡ್ಡ ಗಡಿಯಾರದ ಕಾಪರ್ ಗ್ರೌಂಡಿಂಗ್ ರಾಡ್ ನಾಪತ್ತೆಯಾಗಿರುವುದು ಶುಕ್ರವಾರ (ಜ.29) ಬೆಳಕಿಗೆ ಬಂದಿದೆ.
ಮೈಸೂರಿನ ಪುರಭವನದ ಎದುರಿರುವ ಈ ಗಡಿಯಾರ ಕಂಬದ ಕೆಳಭಾಗದಲ್ಲಿ ಸುಮಾರು 15 ಅಡಿ ಎತ್ತರದ ತಾಮ್ರದ ಲೈಟ್ನಿಂಗ್ ರಾಡ್ ಅನ್ನು ಅಳವಡಿಸಲಾಗಿತ್ತು. ಭಾರೀ ಮಿಂಚು, ಸಿಡಿಲು ಬಡಿದಾಗ ಕಟ್ಟಡಕ್ಕೆ ಅಪಾಯ ಬಾರದಿರಲಿ ಎಂಬ ಕಾರಣಕ್ಕೆ ಈ ರಾಡ್ ಅನ್ನು ಎಲ್ಲ ಪಾರಂಪರಿಕ ಕಟ್ಟಡಗಳಿಗೂ ಅಳವಡಿಸಿರಲಾಗುತ್ತದೆ.
ಆದರೆ ಈಗ ಈ ರಾಡ್ಗಳು ಕಳುವಾಗಿರುವುದು ಆತಂಕ ಮೂಡಿಸಿದೆ. ಅಲ್ಲದೆ ದೊಡ್ಡ ಗಡಿಯಾರದ ಕೆಳಭಾಗದಲ್ಲಿ ಇಲಿ, ಹೆಗ್ಗಣಗಳು ಭೂಮಿಯನ್ನು ಕೊರೆದು ದೊಡ್ಡ ಬಿಲ ಸೃಷ್ಟಿಸಿದ್ದು, ಕಟ್ಟಡದ ಸುರಕ್ಷತೆಗೂ ಅತಂಕ ಎದುರಾಗಿದೆ. ಈ ಕಾಪರ್ ರಾಡ್ನ್ನು ದುಷ್ಕರ್ಮಿಗಳು ಹಣದ ಆಸೆಗೆ ಕದ್ದಿದ್ದಾರೆ ಎಂದು ಹೇಳಲಾಗುತ್ತಿದೆ.

ಈಗಾಗಲೇ ದೊಡ್ಡ ಗಡಿಯಾರದ ಕೆಲವು ಭಾಗಗಳು ಶಿಥಿಲವಾಗಿವೆ. ಮಳೆಗಾಲದಲ್ಲಿ ಜೋರು ಗುಡುಗು ಅಥವಾ ಸಿಡಿಲು ಬಡಿದಾಗ ಕಟ್ಟಡಕ್ಕೆ ಅಪಾಯ ಆಗುವ ಸಾಧ್ಯತೆ ಹೆಚ್ಚಾಗಿದೆ. ಆದಷ್ಟು ಶೀಘ್ರವಾಗಿ ಮತ್ತೆ ರಾಡ್ ಅಳವಡಿಸಿ ಕಟ್ಟಡದ ಕೆಳಭಾಗದಲ್ಲಿ ಇಲಿ, ಹೆಗ್ಗಣಗಳು ಕೊರೆದಿರುವ ಸ್ಥಳವನ್ನು ಮುಚ್ಚಿಸದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ ಎಂಬುದರಲ್ಲಿ ಅನುಮಾನವಿಲ್ಲ.
ಮಹಾನಗರ ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಅವರು ಈ ರಾಡ್ ೨ ವರ್ಷಗಳ ಹಿಂದೆಯೇ ಕಳುವಾಗಿದ್ದು, ಮುಂದಿನ ಎರಡು-ಮೂರು ದಿನದಲ್ಲಿ ಬೇರೆ ರಾಡ್ ಅಳವಡಿಸಲಾಗುದಲ್ಲದೆ, ದುರಸ್ಥಿ ಮಾಡಲಾಗುವುದು ಎಂದು ಹೇಳಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications