ಯದುವೀರರಿಗೆ ಮಂಗಳಸ್ನಾನ, ರಾಜಮಾತೆಗೆ ಪಾದಪೂಜೆ
ಮೈಸೂರು, ಮೇ 27 : ಮೈಸೂರು ಅರಮನೆಯಲ್ಲಿ ಹಬ್ಬದ ಸಂಭ್ರಮ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕದ ವಿಧಿವಿಧಾನಗಳು ಬುಧವಾರ ಬೆಳಗ್ಗೆಯಿಂದಲೇ ಅಂಬಾವಿಲಾಸ ಅರಮನೆಯಲ್ಲಿ ಆರಂಭವಾಗಿದೆ. ಗುರುವಾರ ಬೆಳಗ್ಗೆ ಕರ್ಕಾಟಕ ಲಗ್ನದಲ್ಲಿ ಪಟ್ಟಾಭಿಷೇಕ ನಡೆಯಲಿದೆ.
ಬುಧವಾರ ಮುಂಜಾನೆ 5 ಗಂಟೆಗೆ ಯದುವೀರ ಒಡೆಯರ್ ಅವರಿಗೆ ಮಂಗಳಸ್ನಾನ ಮಾಡಿಸುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಮಂಗಳಸ್ನಾನದ ನಂತರ ಮೆರವಣಿಗೆಯಲ್ಲಿ ಅರಮನೆ ಆವರಣದಲ್ಲಿನ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯದುವೀರ ಒಡೆಯರ್ ಅಂಬಾ ವಿಲಾಸ ಅರಮನೆಗೆ ಆಗಮಿಸಿದರು. [ಯದುವೀರರಿಗೆ ಪಟ್ಟಾಭಿಷೇಕ ಹೀಗೆ ನಡೆಯುತ್ತದೆ]
ಧಾರ್ಮಿಕ ಪೂಜಾ ಕಾರ್ಯದ ವೇಳೆ ಸಂಪ್ರದಾಯದಂತೆ ರಾಜಮಾತಾ ಪ್ರಮೋದಾ ದೇವಿ ಒಡೆಯರ್ ಅವರಿಗೆ ಯುವರಾಜ ಯದುವೀರ ಒಡೆಯರ್ ಪಾದಪೂಜೆ ನೆರವೇರಿಸಿದರು. ಈ ವೇಳೆ ಶ್ರೀಕಂಠದತ್ತ ಒಡೆಯರ್ ಅವರನ್ನು ನೆನೆದು ರಾಣಿ ಪ್ರಮೋದಾ ದೇವಿಯವರು ಕಣ್ಣೀರಿಟ್ಟಿರು. [ಮೈಸೂರು ಮಹಾರಾಜರ 550 ವರ್ಷಗಳ ಭವ್ಯ ಇತಿಹಾಸ]
ಗುರುವಾರ ಯದುವೀರ ಅರಸ್ ಅವರ ಪಟ್ಟಾಭಿಷೇಕ ನಡೆಯಲಿದೆ. ಬೆಳಗ್ಗೆ 9.30 ರಿಂದ 10.30ರವರೆಗೆ ಸಲ್ಲುವ ಶುಭ ಕರ್ಕಾಟಕ ಲಗ್ನದಲ್ಲಿ ನಡೆಯಲಿದೆ. ಆದರೆ, ಈ ಕಾರ್ಯಕ್ರಮ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶವಿಲ್ಲ. ಸಂಜೆ 6.30ಕ್ಕೆ ದರ್ಬಾರ್ ಸಭಾಂಗಣದಲ್ಲಿ ಆರತಕ್ಷತೆ ಏರ್ಪಡಿಸಲಾಗಿದ್ದು ಇದನ್ನು ಸಾರ್ವಜನಿಕರು ವೀಕ್ಷಿಸಬಹುದಾಗಿದೆ. [ಚಿತ್ರಕೃಪೆ : ಯದುವೀರ ಒಡೆಯರ್ ಫೇಸ್ ಬುಕ್ ಪುಟ]

ಮೈಸೂರು ಅರಮನೆಯಲ್ಲಿ ಹಬ್ಬದ ಸಂಭ್ರಮ
ಮೈಸೂರು ಅರಮನೆಯಲ್ಲಿ ಹಬ್ಬದ ಸಂಭ್ರಮ. ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕದ ವಿಧಿವಿಧಾನಗಳು ಬುಧವಾರ ಬೆಳಗ್ಗೆಯಿಂದಲೇ ಅಂಬಾವಿಲಾಸ ಅರಮನೆಯಲ್ಲಿ ಆರಂಭವಾಗಿದೆ.

ಮಂಗಳಸ್ನಾನದೊಂದಿಗೆ ಕಾರ್ಯಕ್ರಮ ಆರಂಭ
ಮುಂಜಾನೆ 5 ಗಂಟೆಗೆ ಯದುವೀರ ಒಡೆಯರ್ ಅವರಿಗೆ ಮಂಗಳಸ್ನಾನ ಮಾಡಿಸುವ ಮೂಲಕ ಧಾರ್ಮಿಕ ಕಾರ್ಯಗಳಿಗೆ ಚಾಲನೆ ನೀಡಲಾಯಿತು. ಮಂಗಳಸ್ನಾನದ ನಂತರ ಅರಮನೆ ಆವರಣದಲ್ಲಿನ ವೆಂಕಟೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಯದುವೀರ ಒಡೆಯರ್ ಅಂಬಾ ವಿಲಾಸ ಅರಮನೆಗೆ ಆಗಮಿಸಿದರು.

ಪರಕಾಲ ಶ್ರೀಗಳ ಪಾದಪೂಜೆ
ಅಂಬಾವಿಲಾಸ ಅರಮನೆಯಲ್ಲಿ ಪರಕಾಲ ಮಠದ ಶ್ರೀಗಳಿಗೆ ಯದುವೀರ ಒಡೆಯರ್ ಅವರು ಪಾದಪೂಜೆ ನೆರವೇರಿಸಿದರು.

ಅರಮನೆಯಲ್ಲಿ ಗಣಪತಿ ಹೋಮ
ಅಂಬಾ ವಿಲಾಸ ಅರಮನೆ ಒಳಭಾಗದಲ್ಲಿ ಗಣಪತಿ ಪೂಜೆ, ಪುಣ್ಯಾಹ ಸೇರಿದಂತೆ ವಿವಿಧ ಪೂಜಾ ವಿಧಿವಿಧಾನಗಳು ನಡೆದವು. ಸಂಜೆ ಕಂಕಣಧಾರಣ ಕಾರ್ಯಕ್ರಮ ನಡೆಯಿತು.

ಕಣ್ಣೀರಿಟ್ಟ ಪ್ರಮೋದಾ ದೇವಿ ಒಡೆಯರ್
ಧಾರ್ಮಿಕ ಪೂಜಾ ಕಾರ್ಯದ ವೇಳೆ ಸಂಪ್ರದಾಯದಂತೆ ರಾಜಮಾತಾ ಪ್ರಮೋದಾ ದೇವಿ ಒಡೆಯರ್ ಅವರಿಗೆ ಯುವರಾಜ ಯದುವೀರ ಒಡೆಯರ್ ಪಾದಪೂಜೆ ನೆರವೇರಿಸಿದರು. ಈ ವೇಳೆ ಶ್ರೀಕಂಠದತ್ತ ಒಡೆಯರ್ ಅವರನ್ನು ನೆನೆದು ರಾಣಿ ಪ್ರಮೋದಾ ದೇವಿಯವರು ಕಣ್ಣೀರಿಟ್ಟಿರು. [ಪಂಚಭೂತಗಳಲ್ಲಿ ಶ್ರೀಕಂಠದತ್ತ ಒಡೆಯರ್ ಲೀನ]

ಭಾವಿ ಪತ್ನಿ ತ್ರಿಶಿಕಾ ಕುಮಾರಿ ಆಗಮನ
ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾವಿ ಪತ್ನಿ ತ್ರಿಶಿಕಾ ಕುಮಾರಿ ಅವರು ಮೈಸೂರಿಗೆ ಆಗಮಿಸಿದ್ದಾರೆ.
-
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ











Click it and Unblock the Notifications