ಮಹಾರಾಜರ ಪಟ್ಟಾಭಿಷೇಕಕ್ಕೆ ಬಂದಿದ್ದ ಗಣ್ಯರು ಹೇಳಿದ್ದೇನು?
ಮೈಸೂರು, ಮೇ 28 : ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಹಬ್ಬದ ಸಂಭ್ರಮ. ಶುಭ ಕರ್ಕಾಟಕ ಲಗ್ನದಲ್ಲಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಪಟ್ಟಾಭಿಷೇಕ ಗುರುವಾರ ನಡೆದಿದೆ. ಸಾವಿರಾರು ಗಣ್ಯರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು. [ಪಟ್ಟಾಭಿಷೇಕದ ಚಿತ್ರಗಳು]
ಯದುವೀರ ಒಡೆಯರ್ ಪಟ್ಟಾಭಿಷೇಕಕ್ಕೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಸಚಿವರಾದ ಡಿಕೆ.ಶಿವಕುಮಾರ್, ರೋಷನ್ ಬೇಗ್, ದೇಶಪಾಂಡೆ, ಶ್ರೀನಿವಾಸ್ ಪ್ರಸಾದ್, ಕೆ.ಜೆ ಜಾರ್ಜ್ ಮುಂತಾದವರು ಆಗಮಿಸಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭಕ್ಕೆ ಆಗಮಿಸಲು ಸಾಧ್ಯವಿಲ್ಲ ಎಂದು ಅರಮನೆಗೆ ಮೊದಲೇ ಮಾಹಿತಿ ನೀಡಿದ್ದರು. [ಪಟ್ಟಾಭಿಷೇಕದ ಕ್ಷಣ-ಕ್ಷಣದ ಮಾಹಿತಿ]

ಸಮಾರಂಭಕ್ಕೆ ಬಂದವರು ಹೇಳಿದ್ದೇನು?
ಎಚ್.ಡಿ. ದೇವೇಗೌಡ : 'ಜಯಚಾಮರಾಜೇಂದ್ರ ಒಡೆಯರ್ ಕಾಲದಿಂದಲೇ ರಾಜ ಪರಂಪರೆಯನ್ನು ನೋಡಿಕೊಂಡು ಬರುತ್ತಿದ್ದೇವೆ. ರಾಜ ಪರಂಪರೆ ಮೇಲೆ ನಮಗೆ ಸಾಕಷ್ಟು ಗೌರವವಿದೆ. ರಾಣಿ ಪ್ರಮೋದಾ ದೇವಿ ಅವರು ಆಹ್ವಾನ ನೀಡಿದ್ದರು. ಆದ್ದರಿಂದ ಯುವರಾಜನಿಗೆ ಶುಭಾಶಯ ಹೇಳಲು ಬಂದಿದ್ದೆ' ಎಂದು ದೇವೇಗೌಡರು ಹೇಳಿದರು. [ಯದು ವಂಶದ ಉತ್ತರಾಧಿಕಾರಿ ವಿವಾದದ ನೆನೆಪುಗಳು]
ಡಿ.ಕೆ.ಶಿವಕುಮಾರ್ : 'ರಾಜಮನೆತನದಿಂದ ರಾಜ್ಯಕ್ಕೆ ದೊಡ್ಡ ಸೇವೆ ಸಿಕ್ಕಿದೆ. ಅವರು ಜನರಿಗಾಗಿ, ಸಂಸ್ಕೃತಿ ಉಳಿವಿಗಾಗಿ ತಮ್ಮ ಆಸ್ತಿ-ಪಾಸ್ತಿ ದಾನ ಮಾಡಿದ್ದಾರೆ. ನಮ್ಮಿಂದ ರಾಜ ಮನೆತನಕ್ಕೆ ಎಲ್ಲಾ ರೀತಿಯ ಪ್ರೋತ್ಸಾಹ, ಸಹಕಾರ ಸಿಗುತ್ತದೆ. ಯದುವೀರ್ ಪಟ್ಟಾಭಿಷೇಕದಿಂದ ಅರಮನೆಗೆ ಹೊಸ ಚಿಗುರು ಬಂದಂತಾಗಿದೆ'. ಎಂದು ತಿಳಿಸಿದರು.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]
ವಿ. ಶ್ರೀನಿವಾಸ್ ಪ್ರಸಾದ್ : 'ರಾಜ ಮಹಾರಾಜರು ರಾಜ್ಯದಲ್ಲಿ ಶೈಕ್ಷಣಿಕ, ನೀರಾವರಿ, ಆರ್ಥಿಕ, ಆಹಾರ ಕ್ಷೇತ್ರ ಸೇರಿ ಎಲ್ಲಾ ಕ್ಷೇತ್ರಗಳಿಗೂ ಒತ್ತು ಕೊಟ್ಟಿದ್ದರು. ಪ್ರಜಾಪ್ರಭುತ್ರ ಬಂದ ಮೇಲೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಪಟ್ಟಕ್ಕೇರಿದ್ದರು. ಈಗ ಯದುವೀರ್ ಪಟ್ಟ ಅಲಂಕರಿಸಿದ್ದಾರೆ. ರಾಜ ಪರಂಪರೆಯನ್ನು ಉಳಿಸಿಕೊಂಡು ಹೋಗುವಂತಹ ಕಾರ್ಯ ಮಾಡಲಿ'.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications