ಮೈಸೂರಿನಲ್ಲಿ ಕೊರೊನಾ ಸೋಂಕು ಭೀತಿ: ಸಾರ್ವಜನಿಕರಿಗೆ ಮುಡಾ ಕಚೇರಿ ಪ್ರವೇಶ ನಿರ್ಬಂಧ
ಮೈಸೂರು, ಏಪ್ರಿಲ್ 21: ಸರ್ಕಾರಿ ಕಚೇರಿಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರದ ಮುಡಾ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ಕೆಲವು ಸರ್ಕಾರಿ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಡಾ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕಚೇರಿಗೆ ಭೇಟಿ ನೀಡುವುದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ. ಹೀಗಾಗಿ ಜನರು ಕಚೇರಿಗೆ ಆಗಮಿಸದಂತೆ ಮುಡಾ ಆಯುಕ್ತ ನಟೇಶ್ ಮನವಿ ಮಾಡಿದ್ದಾರೆ.
ಇನ್ನು ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಪರಿಣಾಮ, ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಮಹಾನಗರ ಪಾಲಿಕೆಯಲ್ಲಿ ಜನರ ಓಡಾಟ, ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇದರ ಪರಿಣಾಮ ಮೈಸೂರಿನ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 2.30ರಿಂದ 4.30ರವರೆಗೆ ಇದ್ದ ಸಾರ್ವಜನಿಕ ಭೇಟಿ ವ್ಯವಸ್ಥೆ ತಾತ್ಕಾಲಿಕ ರದ್ದುಪಡಿಸಲಾಗಿದೆ.

ಪಾಲಿಕೆಗೆ ಮತ್ತೆ ಶಾಕ್
ಮೈಸೂರಿನಲ್ಲಿ ದೊಡ್ಡಮಟ್ಟದ ಕೊರೊನಾ ಸೋಂಕಿನ ಆಘಾತ ನೀಡಿದ್ದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮಹಾಮಾರಿ ಅಬ್ಬರ ಮುಂದುವರಿದಿದೆ. ಮಂಗಳವಾರ ನಗರ ಪಾಲಿಕೆಯ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಾಲಿಕೆಯ ತೆರಿಗೆ ವಿಭಾಗದ ಕಟ್ಟಡದ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆ ತೆರಿಗೆ ವಿಭಾಗದ ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಪಾಲಿಕೆಯ ಅಭಯ ಟೀಮ್ ನ ಸಿಬ್ಬಂದಿ ಕಟ್ಟಡ ಸಂಪೂರ್ಣ ಸ್ಯಾನಿಟೈಜ್ ಮಾಡಿದ್ದಾರೆ. ಕಳೆದ ಎರಡು ವಾರಗಳಿಂದ ಪಾಲಿಕೆ ಅಧಿಕಾರಿ, ಸಿಬ್ಬಂದಿಯನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ಸೋಂಕಿನ ಆತಂಕ ಮತ್ತಷ್ಟು ಉಲ್ಬಣಗೊಂಡಿದೆ. ಎರಡು ವಾರಗಳಲ್ಲಿ ಪಾಲಿಕೆಯ 25ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications