ಮೈಸೂರಿನಲ್ಲಿ ಕೊರೊನಾ ಸೋಂಕು ಭೀತಿ: ಸಾರ್ವಜನಿಕರಿಗೆ ಮುಡಾ ಕಚೇರಿ ಪ್ರವೇಶ ನಿರ್ಬಂಧ
ಮೈಸೂರು, ಏಪ್ರಿಲ್ 21: ಸರ್ಕಾರಿ ಕಚೇರಿಗಳಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ನಗರದ ಮುಡಾ ಕಚೇರಿಗೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಕಳೆದ ಕೆಲವು ದಿನಗಳ ಹಿಂದೆ ಮೈಸೂರು ಮಹಾನಗರ ಪಾಲಿಕೆ ಸೇರಿದಂತೆ ಕೆಲವು ಸರ್ಕಾರಿ ಕಚೇರಿಯ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಮುಡಾ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರು ಕಚೇರಿಗೆ ಭೇಟಿ ನೀಡುವುದಕ್ಕೆ ತಾತ್ಕಾಲಿಕವಾಗಿ ಬ್ರೇಕ್ ಹಾಕಿದ್ದಾರೆ. ಹೀಗಾಗಿ ಜನರು ಕಚೇರಿಗೆ ಆಗಮಿಸದಂತೆ ಮುಡಾ ಆಯುಕ್ತ ನಟೇಶ್ ಮನವಿ ಮಾಡಿದ್ದಾರೆ.
ಇನ್ನು ಕೊರೊನಾ ಸೋಂಕು ಹರಡುವಿಕೆ ಹೆಚ್ಚುತ್ತಿರುವ ಪರಿಣಾಮ, ಸಾರ್ವಜನಿಕರು ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಮಹಾನಗರ ಪಾಲಿಕೆಯಲ್ಲಿ ಜನರ ಓಡಾಟ, ಸಾರ್ವಜನಿಕ ಪ್ರವೇಶಕ್ಕೆ ನಿಷೇಧ ಹೇರಲಾಗಿದೆ. ಇದರ ಪರಿಣಾಮ ಮೈಸೂರಿನ ಸರ್ಕಾರಿ ಕಚೇರಿಗಳಲ್ಲಿ ಮಧ್ಯಾಹ್ನ 2.30ರಿಂದ 4.30ರವರೆಗೆ ಇದ್ದ ಸಾರ್ವಜನಿಕ ಭೇಟಿ ವ್ಯವಸ್ಥೆ ತಾತ್ಕಾಲಿಕ ರದ್ದುಪಡಿಸಲಾಗಿದೆ.

ಪಾಲಿಕೆಗೆ ಮತ್ತೆ ಶಾಕ್
ಮೈಸೂರಿನಲ್ಲಿ ದೊಡ್ಡಮಟ್ಟದ ಕೊರೊನಾ ಸೋಂಕಿನ ಆಘಾತ ನೀಡಿದ್ದ ಮೈಸೂರು ಮಹಾನಗರ ಪಾಲಿಕೆಯಲ್ಲಿ ಮಹಾಮಾರಿ ಅಬ್ಬರ ಮುಂದುವರಿದಿದೆ. ಮಂಗಳವಾರ ನಗರ ಪಾಲಿಕೆಯ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಪಾಲಿಕೆಯ ತೆರಿಗೆ ವಿಭಾಗದ ಕಟ್ಟಡದ ಸಿಬ್ಬಂದಿಗೆ ಸೋಂಕು ದೃಢಪಟ್ಟಿದೆ.

ಈ ಹಿನ್ನೆಲೆ ತೆರಿಗೆ ವಿಭಾಗದ ಕಟ್ಟಡವನ್ನು ಸಂಪೂರ್ಣ ಸ್ಯಾನಿಟೈಜ್ ಮಾಡಲಾಗಿದೆ. ಪಾಲಿಕೆಯ ಅಭಯ ಟೀಮ್ ನ ಸಿಬ್ಬಂದಿ ಕಟ್ಟಡ ಸಂಪೂರ್ಣ ಸ್ಯಾನಿಟೈಜ್ ಮಾಡಿದ್ದಾರೆ. ಕಳೆದ ಎರಡು ವಾರಗಳಿಂದ ಪಾಲಿಕೆ ಅಧಿಕಾರಿ, ಸಿಬ್ಬಂದಿಯನ್ನು ಬೆಂಬಿಡದೆ ಕಾಡುತ್ತಿರುವ ಕೊರೊನಾ ಸೋಂಕಿನ ಆತಂಕ ಮತ್ತಷ್ಟು ಉಲ್ಬಣಗೊಂಡಿದೆ. ಎರಡು ವಾರಗಳಲ್ಲಿ ಪಾಲಿಕೆಯ 25ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications