ಕೊರೊನಾ ಎಫೆಕ್ಟ್: ಪರೀಕ್ಷೆ ಇಲ್ಲದೆ ಮಕ್ಕಳನ್ನು ಪಾಸ್ ಮಾಡಲು ನಿರ್ಧಾರ
ಮೈಸೂರು, ಮಾರ್ಚ್ 11: ಹಳೇ ಮೈಸೂರು ಭಾಗದ ಜಿಲ್ಲೆಗಳ ಸಿಬಿಎಸ್ಇ ಶಾಲೆಗಳಲ್ಲಿ, ಈ ಬಾರಿ ಪರೀಕ್ಷೆ ನಡೆಸದೇ ಮಕ್ಕಳನ್ನು ಪಾಸ್ ಮಾಡಲು ನಿರ್ಧಾರ ಮಾಡಲಾಗಿದೆ. ಕೊರೊನಾ ವೈರಸ್ ಭೀತಿಯ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಸಿಬಿಎಸ್ಇ ಖಾಸಗಿ ಶಾಲೆಗಳ ಒಕ್ಕೂಟ ಈ ನಿರ್ಧಾರಕ್ಕೆ ಬಂದಿದೆ. ಮೈಸೂರು, ಮಂಡ್ಯ, ಕೊಡಗು, ಚಾಮರಾಜನಗರ, ಹಾಸನ ಶಾಲೆಗಳ ಭಾಗದ 240 ಶಾಲೆಗಳು ಈ ನಿಯಮ ಒಪ್ಪಿಕೊಂಡಿವೆ. ಈ ಬಗ್ಗೆ ಒಕ್ಕೂಟದ ಅಧ್ಯಕ್ಷ ಸುಧಾಕರ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.
SSLC ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದರೆ ಜೈಲು ಶಿಕ್ಷೆ
ಎಲ್ಕೆಜಿ, ಯುಕೆಜಿ, 1, 2, 3 ಹಾಗೂ 4ನೇ ತರಗತಿ ಮಕ್ಕಳು ಪರೀಕ್ಷೆ ನಡೆಸದೆ ಮುಂದಿನ ತರಗತಿಗೆ ಉತ್ತೀರ್ಣರಾಗಲಿದ್ದಾರೆ. 5 ರಿಂದ 9ನೇ ತರಗತಿಯ ವಿಧ್ಯಾರ್ಥಿಗಳಿಗೆ ಈಗಾಗಲೇ ಪೂರ್ವ ಸಿದ್ಧತಾ ಪರೀಕ್ಷೆ ನಡೆದಿದೆ. ಹೀಗಾಗಿ, ವಾರ್ಷಿಕ ಪರೀಕ್ಷೆ ಇಲ್ಲದೆ, ಪೂರ್ವ ಸಿದ್ಧತಾ ಪರೀಕ್ಷೆಯ ಫಲಿತಾಂಶವನ್ನೇ ಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಉಳಿದಂತೆ, ಪ್ರತಿ ವರ್ಷದಂತೆ ಎಸ್ಎಸ್ಎಲ್ಸಿ ಮಕ್ಕಳಿಗೆ ಪ್ರೌಢ ಶಿಕ್ಷಣ ಇಲಾಖೆಯ ವತಿಯಿಂದ ಪರೀಕ್ಷೆ ನಡೆಯುತ್ತದೆ. ಮಾರ್ಚ್ 27 ರಿಂದ ಎಸ್ಎಸ್ಎಲ್ಸಿ ಪರೀಕ್ಷೆಗಳು ಶುರು ಆಗಬೇಕಿದೆ.
ಬೆಂಗಳೂರು ಕರಗಕ್ಕೆ ಕೊರೊನಾ ಭೀತಿ ಇಲ್ಲ: ಮೇಯರ್
ಶಾಲಾ ಮಕ್ಕಳಿಗೆ ಈಗಾಗಲೇ ರಜೆ ನೀಡಲು ಆದೇಶ ಹೊರಡಿಸಿದ್ದಾರೆ. ಕೊರೊನಾ ಭೀತಿಯಿಂದ ಬೇಸಿಗೆ ರಜೆಯಲ್ಲಿ ಸಮ್ಮರ್ ಕ್ಯಾಂಪ್ ಮಾಡಲು ಕೂಡ ಅವಕಾಶವನ್ನು ನೀಡುತ್ತಿಲ್ಲ.