ಮೈಸೂರು ವಿವಿ ಕುಲಸಚಿವರ ಕಚೇರಿಗೆ ಬೀಗ!
ದಾಖಲೆಗಳನ್ನು ರಕ್ಷಿಸುವ ದೃಷ್ಟಿಯಿಂದ ಉಪಕುಲಪತಿಗಳು ಕಡತಗಳು ಇರುವ ಉಪಕುಲ ಸಚಿವರ ಕಚೇರಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಉಪಕುಲಪತಿ ಹಾಗೂ ಕುಲಸಚಿವರ ನಡುವಿನ ಶೀತಲ ಸಮರ ತಾರಕಕ್ಕೇರಿದೆ.
ಮೈಸೂರು, ಮೇ 30: ಮೈಸೂರು ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ.ಕೆ.ರಾಜಣ್ಣ ಹಾಗೂ ಉಪ ಕುಲಸಚಿವ ವಿಷಕಂಠ ಅವರ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ ಅವರಿಬ್ಬರನ್ನು ಕರ್ತವ್ಯ ದಿಂದ ಬಿಡುಗಡೆ ಮಾಡಲು ಅನುಮತಿ ನೀಡುವಂತೆ ಸರ್ಕಾರಕ್ಕೆ ಹಂಗಾಮಿ ಉಪಕುಲಪತಿ ಪ್ರೊ. ದಯಾನಂದ ಮಾನೆ ಪತ್ರ ಬರೆದಿದ್ದಾರೆ.
ಈ ಮಧ್ಯೆ ದಾಖಲೆಗಳನ್ನು ರಕ್ಷಿಸುವ ದೃಷ್ಟಿಯಿಂದ ಉಪಕುಲಪತಿಗಳು ಕಡತಗಳು ಇರುವ ಉಪಕುಲ ಸಚಿವರ ಕಚೇರಿಗೆ ಬೀಗ ಜಡಿದಿದ್ದಾರೆ. ಈ ಮೂಲಕ ಕುಲಪತಿ ಹಾಗೂ ಕುಲಸಚಿವರ ನಡುವಿನ ಶೀತಲ ಸಮರ ತಾರಕಕ್ಕೇರಿದೆ.[ಒನ್ ಇಂಡಿಯಾ ಫಲಶೃತಿ: ಸರಿಹೋಯ್ತು ಮೈಸೂರು ವಿವಿ ಕ್ಲಾಕ್ ಟವರ್]

ಇತ್ತೀಚೆಗೆ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿ 96 ಹುದ್ದೆಗಳಿಗೆ ನೇಮಕಾತಿ ಮಾಡಿರುವ ಸಂಬಂಧ ಅವರ ಮೇಲೆ ಆರೋಪ ಕೇಳಿ ಬಂದಿತ್ತು. ಇದೆಲ್ಲದೆ ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಇತರೆ ಅವ್ಯವಹಾರಗಳ ಬಗ್ಗೆಯೂ ತನಿಖೆ ನಡೆಸುವಂತೆ ಪತ್ರ ಬರೆದಿದ್ದರು.
ಈ ಸಂಬಂಧ 'ಒನ್ ಇಂಡಿಯಾ'ದೊಂದಿಗೆ ಮಾತನಾಡಿದ ಉಪಕುಲಪತಿ ಪ್ರೊ.ದಯಾನಂದ ಮಾನೆ ಅವರು, ಮೈಸೂರು ವಿಶ್ವವಿದ್ಯಾನಿಲಯದಲ್ಲಿ ನಡೆದಿರುವ ಬಹುಕೋಟಿ ಹಗರಣ ಇದು ಎಂದರಲ್ಲದೆ, ಇವರ ಅಕ್ರಮದಿಂದ ಹಲವರು ಬಡ ಅಭ್ಯರ್ಥಿಗಳ ಭವಿಷ್ಯವೂ ಹಾಳಾಗಿದೆ ಎಂದರು.
ಹುದ್ದೆಗಳ ನೇಮಕಾತಿಗೆ ಮುನ್ನ ಯಾವುದೇ ಪತ್ರಿಕೆಯಲ್ಲಿ ಅಧಿಸೂಚನೆ ಹೊರಡಿಸಿಲ್ಲ. ಸಾರ್ವಜನಿಕವಾಗಿ ಪ್ರಕಟಿಸಿಲ್ಲ. ಇದನ್ನು ಹಿಂದಿನ ಉಪಕುಲಪತಿ ಇದ್ದ ಸಂದರ್ಭದಲ್ಲೇ ಆರಂಭಿಸಲಾಗಿತ್ತು.
ನಂತರ ಉಪಕುಲಪತಿಗಳ ಒಪ್ಪಿಗೆ ಮೇರೆಗೆ ಎಂದು ದಾಖಲೆಯಲ್ಲಿತ್ತು. ಇದನ್ನು ನೋಡಿ ನನಗೆ ಅನುಮಾನ ಬಂದು ನೋಡಿದಾಗ ಇದಕ್ಕೆ ಯಾವ ಒಪ್ಪಿಗೆಯನ್ನೂ ಪಡೆಯದಿರುವುದು ಬೆಳಕಿಗೆ ಬಂದಿತು ಎಂದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications