ದತ್ತು ಸ್ವೀಕಾರ ಸಮಾರಂಭಕ್ಕೆ ಸಜ್ಜಾಗಿದೆ ಮೈಸೂರು ಅರಮನೆ
ಮೈಸೂರು, ಫೆ. 21 : ಯದುವೀರ್ ಗೋಪಾಲ್ ರಾಜೇ ಅರಸ್ ದತ್ತು ಸ್ವೀಕಾರ ಸಮಾರಂಭಕ್ಕೆ ಮೈಸೂರು ಸಿದ್ಧವಾಗುತ್ತಿದೆ. ಸೋಮವಾರ ಮಧ್ಯಾಹ್ನ 1.20ರಿಂದ 1.50ರ ಮಿಥುನ ಲಗ್ನದಲ್ಲಿ ದತ್ತು ಸ್ವೀಕಾರ ಸಮಾರಂಭ ನಡೆಯಲಿದ್ದು, ಸಂಜೆ ಮಹಾರಾಜರ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಅರಮನೆಯ ಕಲ್ಯಾಣ ಮಂಟಪದಲ್ಲಿ ದತ್ತು ಸ್ವೀಕಾರ ಸಮಾರಂಭ ನಡೆಯಲಿದೆ. ಸೋಮವಾರ ಮುಂಜಾನೆ 5.30ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ದತ್ತು ಸ್ವೀಕಾರ ಸಮಾರಂಭ ಮಧ್ಯಾಹ್ನ 1.20ರಿಂದ 1.52ರ ವರೆಗೆ ನಡೆಯಲಿದ್ದು, ಆಹ್ವಾನಿತರು ಮಧ್ಯಾಹ್ನ 12.45ಕ್ಕೆ ಸ್ಥಳದಲ್ಲಿ ಹಾಜರಿರುವಂತೆ ಆಹ್ವಾನ ಪತ್ರಿಕೆಯಲ್ಲಿ ಮನವಿ ಮಾಡಲಾಗಿದೆ.[ಯದುವೀರ ಅರಸ್ ಪರಿಚಯ ಓದಿ]

ಶೃಂಗೇರಿ, ನಂಜನಗೂಡು, ಚಾಮುಂಡಿ ಬೆಟ್ಟ, ಮೇಲುಕೋಟೆ, ಉತ್ತನಹಳ್ಳಿ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿನ ಪ್ರಸಾದ ಅರಮನೆ ತಲುಪಿದ ನಂತರ ದತ್ತು ಸ್ವೀಕಾರ ಸಮಾರಂಭ ನಡೆಯಲಿದೆ. 300 ಜನರಿಗೆ ಮಾತ್ರ ದತ್ತು ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.[ಮೈಸೂರಿಗರಿಗೆ ಯದುವೀರ ಅರಸ್ ಕೃತಜ್ಞತೆ]
ದತ್ತು ಸ್ವೀಕಾರ ಸಮಾರಂಭದ ನಂತರ ಅತಿಥಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ 5 ಗಂಟೆಯ ನಂತರ ಅತಿಥಿಗಳಿಗೆ ದತ್ತು ಪುತ್ರನ ಪರಿಚಯ ಹಾಗೂ 6 ಗಂಟೆಗೆ ಅರಮನೆ ಭಾಗದಲ್ಲಿ ದತ್ತು ಪುತ್ರನ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿವೆ. [ಯದು ವಂಶದ ಉತ್ತರಾಧಿಕಾರಿ ವಿವಾದದ ನೆನೆಪುಗಳು]
ಮರು ನಾಮಕರಣ : ದತ್ತು ಸ್ವೀಕಾರ ಸಮಾರಂಭದ ಬಳಿಕ ಯದುವೀರ್ ಗೋಪಾಲ್ ರಾಜೇ ಅರಸ್ ಅವರ ಹೆಸರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರುನಾಮಕರಣ ಮಾಡಲಾಗುತ್ತದೆ.
ವಸ್ತ್ರ ಸಂಹಿತೆ : ದತ್ತು ಸ್ವೀಕಾರ ಸಮಾರಂಭಕ್ಕೆ ಆಗಮಿಸುವ ಅತಿಥಿಗಳಿಗೆ ವಸ್ತ್ರ ಸಂಹಿತೆ ಇದೆ. ಆಹ್ವಾನ ಪತ್ರಿಕೆಯಲ್ಲಿ ಈ ಕುರಿತ ವಿವರಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಅರಮನೆಯ ಹಿತೈಷಿಗಳಿಗೆ ಆಹ್ವಾನ ಪತ್ರಿಕೆ ರವಾನಿಸಲಾಗಿದೆ ಎಂದು ಅರಮನೆ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣ ಅವರು ಹೇಳಿದ್ದಾರೆ.
ಅರಮನೆ ಪ್ರವೇಶ ನಿಷಿದ್ಧ : ದತ್ತು ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಫೆ. 22ರ ಮಧ್ಯಾಹ್ನ 1.30ರಿಂದಲೇ ಸಾರ್ವಜನಿಕರು ಅರಮನೆ ಪ್ರವೇಶಿಸುವಂತಿಲ್ಲ. ಎರಡೂ ದಿನ ಸಂಜೆ ವಿದ್ಯುತ್ ದೀಪಾಲಂಕಾರ ಇರಲಿದ್ದು, ಅದರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications