ದತ್ತು ಸ್ವೀಕಾರ ಸಮಾರಂಭಕ್ಕೆ ಸಜ್ಜಾಗಿದೆ ಮೈಸೂರು ಅರಮನೆ
ಮೈಸೂರು, ಫೆ. 21 : ಯದುವೀರ್ ಗೋಪಾಲ್ ರಾಜೇ ಅರಸ್ ದತ್ತು ಸ್ವೀಕಾರ ಸಮಾರಂಭಕ್ಕೆ ಮೈಸೂರು ಸಿದ್ಧವಾಗುತ್ತಿದೆ. ಸೋಮವಾರ ಮಧ್ಯಾಹ್ನ 1.20ರಿಂದ 1.50ರ ಮಿಥುನ ಲಗ್ನದಲ್ಲಿ ದತ್ತು ಸ್ವೀಕಾರ ಸಮಾರಂಭ ನಡೆಯಲಿದ್ದು, ಸಂಜೆ ಮಹಾರಾಜರ ಮೆರವಣಿಗೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಅರಮನೆಯ ಕಲ್ಯಾಣ ಮಂಟಪದಲ್ಲಿ ದತ್ತು ಸ್ವೀಕಾರ ಸಮಾರಂಭ ನಡೆಯಲಿದೆ. ಸೋಮವಾರ ಮುಂಜಾನೆ 5.30ರಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ದತ್ತು ಸ್ವೀಕಾರ ಸಮಾರಂಭ ಮಧ್ಯಾಹ್ನ 1.20ರಿಂದ 1.52ರ ವರೆಗೆ ನಡೆಯಲಿದ್ದು, ಆಹ್ವಾನಿತರು ಮಧ್ಯಾಹ್ನ 12.45ಕ್ಕೆ ಸ್ಥಳದಲ್ಲಿ ಹಾಜರಿರುವಂತೆ ಆಹ್ವಾನ ಪತ್ರಿಕೆಯಲ್ಲಿ ಮನವಿ ಮಾಡಲಾಗಿದೆ.[ಯದುವೀರ ಅರಸ್ ಪರಿಚಯ ಓದಿ]

ಶೃಂಗೇರಿ, ನಂಜನಗೂಡು, ಚಾಮುಂಡಿ ಬೆಟ್ಟ, ಮೇಲುಕೋಟೆ, ಉತ್ತನಹಳ್ಳಿ ಸೇರಿದಂತೆ ಪ್ರಮುಖ ದೇವಸ್ಥಾನಗಳಲ್ಲಿನ ಪ್ರಸಾದ ಅರಮನೆ ತಲುಪಿದ ನಂತರ ದತ್ತು ಸ್ವೀಕಾರ ಸಮಾರಂಭ ನಡೆಯಲಿದೆ. 300 ಜನರಿಗೆ ಮಾತ್ರ ದತ್ತು ಸ್ವೀಕಾರ ಸಮಾರಂಭಕ್ಕೆ ಆಹ್ವಾನ ನೀಡಲಾಗಿದೆ.[ಮೈಸೂರಿಗರಿಗೆ ಯದುವೀರ ಅರಸ್ ಕೃತಜ್ಞತೆ]
ದತ್ತು ಸ್ವೀಕಾರ ಸಮಾರಂಭದ ನಂತರ ಅತಿಥಿಗಳಿಗೆ ಭೋಜನದ ವ್ಯವಸ್ಥೆ ಮಾಡಲಾಗಿದೆ. ಸೋಮವಾರ ಸಂಜೆ 5 ಗಂಟೆಯ ನಂತರ ಅತಿಥಿಗಳಿಗೆ ದತ್ತು ಪುತ್ರನ ಪರಿಚಯ ಹಾಗೂ 6 ಗಂಟೆಗೆ ಅರಮನೆ ಭಾಗದಲ್ಲಿ ದತ್ತು ಪುತ್ರನ ಮೆರವಣಿಗೆ ಕಾರ್ಯಕ್ರಮಗಳು ನಡೆಯಲಿವೆ. [ಯದು ವಂಶದ ಉತ್ತರಾಧಿಕಾರಿ ವಿವಾದದ ನೆನೆಪುಗಳು]
ಮರು ನಾಮಕರಣ : ದತ್ತು ಸ್ವೀಕಾರ ಸಮಾರಂಭದ ಬಳಿಕ ಯದುವೀರ್ ಗೋಪಾಲ್ ರಾಜೇ ಅರಸ್ ಅವರ ಹೆಸರನ್ನು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಎಂದು ಮರುನಾಮಕರಣ ಮಾಡಲಾಗುತ್ತದೆ.
ವಸ್ತ್ರ ಸಂಹಿತೆ : ದತ್ತು ಸ್ವೀಕಾರ ಸಮಾರಂಭಕ್ಕೆ ಆಗಮಿಸುವ ಅತಿಥಿಗಳಿಗೆ ವಸ್ತ್ರ ಸಂಹಿತೆ ಇದೆ. ಆಹ್ವಾನ ಪತ್ರಿಕೆಯಲ್ಲಿ ಈ ಕುರಿತ ವಿವರಗಳನ್ನು ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರು, ಅರಮನೆಯ ಹಿತೈಷಿಗಳಿಗೆ ಆಹ್ವಾನ ಪತ್ರಿಕೆ ರವಾನಿಸಲಾಗಿದೆ ಎಂದು ಅರಮನೆ ಕಾರ್ಯದರ್ಶಿ ಎಂ.ಲಕ್ಷ್ಮಿನಾರಾಯಣ ಅವರು ಹೇಳಿದ್ದಾರೆ.
ಅರಮನೆ ಪ್ರವೇಶ ನಿಷಿದ್ಧ : ದತ್ತು ಸ್ವೀಕಾರ ಸಮಾರಂಭ ನಡೆಯುವ ಹಿನ್ನೆಲೆಯಲ್ಲಿ ಎರಡು ದಿನಗಳ ಕಾಲ ಅರಮನೆಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ. ಫೆ. 22ರ ಮಧ್ಯಾಹ್ನ 1.30ರಿಂದಲೇ ಸಾರ್ವಜನಿಕರು ಅರಮನೆ ಪ್ರವೇಶಿಸುವಂತಿಲ್ಲ. ಎರಡೂ ದಿನ ಸಂಜೆ ವಿದ್ಯುತ್ ದೀಪಾಲಂಕಾರ ಇರಲಿದ್ದು, ಅದರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications