ಜಗದ್ವಿಖ್ಯಾತ ಮೈಸೂರು ಮೃಗಾಲಯ ಪುನಾರಾರಂಭಕ್ಕೆ ಕ್ಷಣಗಣನೆ

ಮೈಸೂರು, ಮೇ 21: ಪ್ರವಾಸಿ ನಗರಿ ಮೈಸೂರಿನ ನೆಚ್ಚಿನ ಆಕರ್ಷಣೆಯಾದ ಜಯಚಾಮರಾಜೆಂದ್ರ ಮೃಗಾಲಯವನ್ನು ಲಾಕ್‌ ಡೌನ್‌ ಘೋಷಣೆಯಾದ ದಿನದಿಂದ ಇಂದಿನವರೆಗೂ ಮುಚ್ಚಲಾಗಿದೆ. ಈ ರೀತಿ ಮುಚ್ಚಿರುವುದರಿಂದ ಮೃಗಾಲಯದ ನಿರ್ವಹಣೆಗೂ ಆರ್ಥಿಕ ಸಂಕಷ್ಟ ಎದುರಾಗಿದೆ.

ನೂರೈವತ್ತು ಎಕರೆಗಳಷ್ಟು ವಿಶಾಲವಾಗಿರುವ ಈ ಮೃಗಾಲಯ 1300 ವಿವಿಧ ದೇಶ-ವಿದೇಶಗಳ ಪ್ರಾಣಿ, ಪಕ್ಷಿಗಳ ಆಶ್ರಯ ತಾಣವಾಗಿದೆ. ಈ ಮೃಗಾಲಯದ ಸಿಬ್ಬಂದಿ ಮತ್ತು ಪ್ರಾಣಿಗಳ ನಿರ್ವಹಣೆಗೆಂದೇ ತಿಂಗಳಿಗೆ 2 ಕೋಟಿ ರುಪಾಯಿಗಳಷ್ಟು ವೆಚ್ಚವಾಗುತ್ತಿದೆ. ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಪ್ರಾಣಿಗಳನ್ನು ದತ್ತು ಪಡೆಯಲೂ ಆಸಕ್ತರು ಬರುತ್ತಿಲ್ಲ.

ಮೃಗಾಲಯ ನಿರ್ವಹಣಾ ವೆಚ್ಚಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಟಿ ಸೋಮಶೇಖರ್‌ ಅವರು ಮಾಡಿಕೊಂಡ ಮನವಿಯ ಮೇರೆಗೆ ಅವರ ಸ್ನೇಹಿತರು ಮತ್ತು ದಾನಿಗಳಿಂದ 2.32 ಕೋಟಿ ರುಪಾಯಿಗಳಷ್ಟು ಹಣ ಬಂದಿದೆ. ಜೊತೆಗೆ ಇನ್ಫೋಸಿಸ್‌ ಸುಧಾ ಮೂರ್ತಿ ಅವರೂ 20 ಲಕ್ಷ ರುಪಾಯಿಗಳನ್ನು ದೇಣಿಗೆಯಾಗಿ ನೀಡಿದ್ದಾರೆ. ಮುಂದೆ ಓದಿ..

ಪ್ರವೇಶ ಶುಲ್ಕವೇ ನಿತ್ಯ 7-8 ಲಕ್ಷ ರುಪಾಯಿ ಬರುತ್ತಿತ್ತು

ಪ್ರವೇಶ ಶುಲ್ಕವೇ ನಿತ್ಯ 7-8 ಲಕ್ಷ ರುಪಾಯಿ ಬರುತ್ತಿತ್ತು

ಮೃಗಾಲಯದ ಪ್ರವೇಶ ಶುಲ್ಕದ ಆದಾಯವೇ ಇಲ್ಲದಿರುವ ಹಿನ್ನೆಲೆಯಲ್ಲಿ ಮೃಗಾಲಯವನ್ನು ಹೆಚ್ಚು ದಿನ ಮುಚ್ಚುವುದೂ ಸಾಧ್ಯವಿಲ್ಲ. ಮೃಗಾಲಯಕ್ಕೆ ಪ್ರತಿನಿತ್ಯ 8 ರಿಂದ 10 ಸಾವಿರ ಪ್ರವಾಸಿಗರು ಭೇಟಿ ನೀಡುತ್ತಾರೆ. ಇವರಿಂದ ಬರುವ ಪ್ರವೇಶ ಶುಲ್ಕವೇ ನಿತ್ಯ 7-8 ಲಕ್ಷ ರುಪಾಯಿ ಬರುತ್ತಿತ್ತು. 2002 ರಿಂದಲೂ ಮೃಗಾಲಯವು ಸರ್ಕಾರದಿಂದ ಯಾವುದೇ ಅನುದಾನ ಪಡೆಯದೆ ಈವರೆಗೆ ತಾನೇ ನಿರ್ವಹಣೆ ಮಾಡಿಕೊಂಡು ಬಂದಿದೆ.

ಕರ್ನಾಟಕ ರಾಜ್ಯ ಮೃಗಾಲಯ ನಿರ್ವಹಣಾ ಪ್ರಾಧಿಕಾರ ಮೃಗಾಲಯಗಳಿಗೆ ಸಾರ್ವಜನಿಕರಿಗೆ ಪ್ರವೇಶ ನೀಡುವ ಕುರಿತು ಚಿಂತನೆ ನಡೆಸಿದ್ದು, ಮಾರ್ಗಸೂಚಿಯನ್ನೂ ಬಿಡುಗಡೆ ಮಾಡಿದೆ.

65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೃಗಾಲಯ ಪ್ರವೇಶ ನಿರಾಕರಣೆ

65 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮೃಗಾಲಯ ಪ್ರವೇಶ ನಿರಾಕರಣೆ

ಮೃಗಾಲಯದಲ್ಲಿ ಟಿಕೆಟ್ ಪಡೆಯುವ ವೇಳೆ, ಒಳಗೆ ಹೋಗುವ ವೇಳೆ ಯಾವ ರೀತಿ ಇರಬೇಕೆಂದು ತಿಳಿಸಿದೆ. ಮೃಗಾಲಯದೊಳಗೆ ಪ್ರವೇಶಿಸುವವರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗತ್ತದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೆಮ್ಮು, ಜ್ವರ, ಶೀತದ ಲಕ್ಷಣ ಇರುವವರಿಗೆ ಮೃಗಾಲಯದೊಳಕ್ಕೆ ಪ್ರವೇಶವಿಲ್ಲ. 65 ವರ್ಷಕ್ಕಿಂತ ಮೇಲ್ಪಟ್ಟ ವೃದ್ಧರಿಗೆ ಮೃಗಾಲಯದೊಳಗೆ ಪ್ರವೇಶ ನಿರಾಕರಣೆ, ಫೇಸ್ ಮಾಸ್ಕ್ ಕಡ್ಡಾಯ, ಮೆಡಿಕೇಟೆಡ್ ಫೂಟ್ ಮ್ಯಾಟ್ ಮೂಲಕವೇ ಹಾದು ಹೋಗಬೇಕು. ದೇಹದ ತಾಪಮಾನ ಕೂಡ ಪರೀಕ್ಷಿಸಲಾಗುತ್ತದೆ. 10 ಅಡಿ ಅಂತರ ಕಾಯ್ದುಕೊಳ್ಳಲೇ ಬೇಕು. ಬ್ಯಾರಿಕೇಡ್ ಕೂಡ ಅಳವಡಿಸಲಾಗುತ್ತಿದೆ.

ನಿಯಮ ಉಲ್ಲಂಘಿಸುವವರಿಗೆ ತಲಾ 1000 ರೂ. ದಂಡ

ನಿಯಮ ಉಲ್ಲಂಘಿಸುವವರಿಗೆ ತಲಾ 1000 ರೂ. ದಂಡ

ಯಾವುದೇ ವಸ್ತುಗಳನ್ನು ತಮ್ಮ ಜೊತೆ ತೆಗೆದುಕೊಂಡು ಹೋಗುವಂತಿಲ್ಲ, ಲಾಕರ್ ರೂಮ್ ನಲ್ಲಿಯೇ ಇಟ್ಟು ಒಳಗೆ ಹೋಗಬೇಕು. ಮೃಗಾಲಯದ ಆವರಣದಲ್ಲಿ ಎಲ್ಲಿಯೂ ಉಗುಳಬಾರದು. ಪಾನ್ ಮಸಾಲಾ, ಗುಟ್ಕಾಗಳನ್ನು ಆವರಣದೊಳಗೆ ಸೇವಿಸಬಾರದು. ಪ್ರವಾಸಿಗರ ಮೇಲೆ ಸಿಸಿ ಕ್ಯಾಮೆರಾ ಕಣ್ಗಾವಲಿರಲಿದ್ದು, ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸುತ್ತಿದ್ದಾರಾ, ಇಲ್ಲವಾ ಎಂದು ವೀಕ್ಷಿಸಲಾಗುವುದು. ಉಲ್ಲಂಘಿಸುವವರಿಗೆ ತಲಾ 1000 ರೂ. ದಂಡ ವಿಧಿಸಲಾಗುವುದು ಎಂದು ತಿಳಿಸಿದೆ. ಮೃಗಾಲಯದ ಸಿಬ್ಬಂದಿಗಳು ಕೂಡ ನೈರ್ಮಲ್ಯವನ್ನು ಕಾಪಾಡಬೇಕು. ನೀಡಿದ ಸಮಯೋಚಿತ ನಿರ್ದೇಶಗಳನ್ನು ಪಾಲಿಸಬೇಕು ಎಂದಿದೆ.

ಪ್ರಾಧಿಕಾರವು ಸೂಚನೆ ನೀಡಿದ ದಿನದಿಂದಲೇ ತೆರೆಯಲಾಗುವುದು

ಪ್ರಾಧಿಕಾರವು ಸೂಚನೆ ನೀಡಿದ ದಿನದಿಂದಲೇ ತೆರೆಯಲಾಗುವುದು

ಜ್ವರ, ಶೀತ, ಕೆಮ್ಮು ಇದರಿಂದ ಬಳಲುತ್ತಿರುವ ಸಿಬ್ಬಂದಿ ಕರ್ತವ್ಯಕ್ಕೆ ಹಾಜರಾಗುವಂತಿಲ್ಲ, ಮೇಲಧಿಕಾರಿಗಳಿಗೆ ತಿಳಿಸಬೇಕು. ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ ಫೇಸ್ ಮಾಸ್ಕ್ ಕಡ್ಡಾಯ. ಕೈಗಳನ್ನು ಸ್ಯಾನಿಟೈಸರ್ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ಈ ಕುರಿತು ಒನ್ಇಂಡಿಯಾ ಕನ್ನಡ ಪ್ರತಿನಿಧಿ ಜತೆ ಮಾತನಾಡಿದ ಮೃಗಾಲಯದ ನಿರ್ದೇಶಕ ಅಜಿತ್ ಕುಲಕರ್ಣಿ ಅವರು, ""ಮೃಗಾಲಯ ಪ್ರಾಧಿಕಾರವು ಮೃಗಾಲಯವನ್ನು ಸಾರ್ವಜನಿಕರಿಗೆ ತೆರೆಯುವುದಕ್ಕೆ ಎಲ್ಲ ಸಿದ್ದತೆ ಮಾಡಿಕೊಂಡಿದೆಯೇ, ಸಿಬ್ಬಂದಿಗಳು ತಯಾರಿದ್ದಾರೆಯೇ ಎಂದು ಕೇಳಿತ್ತು. ನಾವು ರೆಡಿ ಇದ್ದೇವೆ ಅಂತ ಉತ್ತರಿಸಿದ್ದೇವೆ. ಪ್ರಾಧಿಕಾರವು ಸೂಚನೆ ನೀಡಿದ ದಿನದಿಂದಲೇ ತೆರೆಯಲಾಗುವುದು'' ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+