ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಮೊದಲ ‘ಡಿಜಿಟಲ್ ಡಿಸ್ಪ್ಲೆ ತಾರಾಲಯ’
ಮೈಸೂರು, ಮಾ.5: ಡಿಜಿಟಲ್ ಡಿಸ್ಪ್ಲೆಗಳ ಮೂಲಕ ಖಗೋಳದ ಆ ಕ್ಷಣದ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಬಹುದಾದ (ರಿಯಲ್ಟೈಂ ಡೇಟಾ) ದೇಶದ ಮೊದಲ ಅತ್ಯಾಧುನಿಕ ಖಗೋಳ ತಾರಾಲಯ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ನಗರದ ಕ್ರಾರ್ಡ್ ಹಾಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶಿಷ್ಟ ಹಿನ್ನೆಲೆಯುಳ್ಳ ಇಂಜಿನ್ ಒಳಗೊಂಡಿರುವ ಈ ಕೇಂದ್ರ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪರಿಣಾಮಕಾರಿ ತರಬೇತಿ ನೀಡಲು ಅನುಕೂಲವಾಗಲಿದೆ. ಡಿಜಿಸ್ಟಾರ್ ವ್ಯವಸ್ಥೆಯು 7 ಸಿಸ್ಟಮ್ ಮತ್ತು ಡೊಮೆಕ್ಸ್ ಸ್ಕ್ರೀನ್ ಅನ್ನು ಒಳಗೊಂಡಿದೆ. ಈ ವೀಕ್ಷಣಾಲಯದಿಂದ ದೊರೆಯುವ ರಿಯಲ್ ಟೈಂ ಡೇಟಾ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಬಹುದು. ಮಾತ್ರವಲ್ಲದೇ ಈ ಕೇಂದ್ರದಲ್ಲಿ ಭಾರತ ಹಾಗೂ ಕರ್ನಾಟಕದ ಖಗೋಳಶಾಸದ ಪರಂಪರೆ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. 2023 ರ ಮಾರ್ಚ್ ವೇಳೆಗೆ ಕಾಮಗಾರಿ ಪೂರ್ಣಗೊಂಡು ಸಂಸ್ಥೆಯು ಕಾರ್ಯಾರಂಭವಾಗಲಿದೆ ಎಂದರು.
ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ ಸಂಸ್ಥೆ ಸಹಯೋಗದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ನಿರ್ಮಿಸಲಾಗುತ್ತಿರುವ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನ ತರಬೇತಿ ಕೇಂದ್ರ (ಕಾಸ್ಮಾಸ್)ದ ಶಂಕುಸ್ಥಾಪನೆಯನ್ನು ಮಾ. 6 ರಂದು ಬೆ. 10.30ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೆರವೇರಿಸಲಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ವಿಶ್ವವಿದ್ಯಾನಿಲಯಕ್ಕೆ ಸೇರಿದ ಜಯಚಾಮರಾಜ ಡೆಯರ್ ಉನ್ನತ ಕಲಿಕಾ ಕೇಂದ್ರಕ್ಕೆ ಸೇರಿದ 3 ಎಕರೆ ಜಾಗದಲ್ಲಿ ತಲೆ ಎತ್ತುತ್ತಿರುವ ಈ ವಿಜ್ಞಾನ ಕೇಂದ್ರದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್. ಅಶ್ವತ್ಥ ನಾರಾಯಣ, ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ್ಸಿಂಹ ಶಾಸಕರಾರ ಎಸ್ಎ. ರಾಮದಾಸ್, ಎಲ್. ನಾಗೇಂದ್ರ, ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ.ಕೆ. ವಿಜಯ ರಾಘವನ್, ಅಟಾಮಿಕ್ ಎನರ್ಜಿ ವಿಭಾಗದ ಕಾರ್ಯದರ್ಶಿ ಕೆ.ಎನ್. ವ್ಯಾಸ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ.ಎಸ್. ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯ ಕುಲಸಚಿವ ಪ್ರೊಘಿ.ಆರ್.ಶಿವಪ್ಪ, ವಿಶೇಷಾಧಿಕಾರಿ ಡಾ.ಚೇತನ್ ಸೇರಿದಂತೆ ಇತರರು ಇದ್ದರು.
Recommended Video
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications