ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ದೇಶದ ಮೊದಲ ‘ಡಿಜಿಟಲ್ ಡಿಸ್ಪ್ಲೆ ತಾರಾಲಯ’
ಮೈಸೂರು, ಮಾ.5: ಡಿಜಿಟಲ್ ಡಿಸ್ಪ್ಲೆಗಳ ಮೂಲಕ ಖಗೋಳದ ಆ ಕ್ಷಣದ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಬಹುದಾದ (ರಿಯಲ್ಟೈಂ ಡೇಟಾ) ದೇಶದ ಮೊದಲ ಅತ್ಯಾಧುನಿಕ ಖಗೋಳ ತಾರಾಲಯ ಮೈಸೂರಿನಲ್ಲಿ ನಿರ್ಮಾಣವಾಗುತ್ತಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದ್ದಾರೆ.
ನಗರದ ಕ್ರಾರ್ಡ್ ಹಾಲ್ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಶಿಷ್ಟ ಹಿನ್ನೆಲೆಯುಳ್ಳ ಇಂಜಿನ್ ಒಳಗೊಂಡಿರುವ ಈ ಕೇಂದ್ರ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಪರಿಣಾಮಕಾರಿ ತರಬೇತಿ ನೀಡಲು ಅನುಕೂಲವಾಗಲಿದೆ. ಡಿಜಿಸ್ಟಾರ್ ವ್ಯವಸ್ಥೆಯು 7 ಸಿಸ್ಟಮ್ ಮತ್ತು ಡೊಮೆಕ್ಸ್ ಸ್ಕ್ರೀನ್ ಅನ್ನು ಒಳಗೊಂಡಿದೆ. ಈ ವೀಕ್ಷಣಾಲಯದಿಂದ ದೊರೆಯುವ ರಿಯಲ್ ಟೈಂ ಡೇಟಾ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳು ಸಂಶೋಧನೆ ಕೈಗೊಳ್ಳಬಹುದು. ಮಾತ್ರವಲ್ಲದೇ ಈ ಕೇಂದ್ರದಲ್ಲಿ ಭಾರತ ಹಾಗೂ ಕರ್ನಾಟಕದ ಖಗೋಳಶಾಸದ ಪರಂಪರೆ ಬಗ್ಗೆ ತಿಳಿದುಕೊಳ್ಳಬಹುದಾಗಿದೆ. 2023 ರ ಮಾರ್ಚ್ ವೇಳೆಗೆ ಕಾಮಗಾರಿ ಪೂರ್ಣಗೊಂಡು ಸಂಸ್ಥೆಯು ಕಾರ್ಯಾರಂಭವಾಗಲಿದೆ ಎಂದರು.
ಮೈಸೂರು ವಿಶ್ವವಿದ್ಯಾನಿಲಯ ಮತ್ತು ಭಾರತೀಯ ಖಗೋಳ ಭೌತಶಾಸ ಸಂಸ್ಥೆ ಸಹಯೋಗದಲ್ಲಿ 80 ಕೋಟಿ ರೂ. ವೆಚ್ಚದಲ್ಲಿ ಮೈಸೂರಿನಲ್ಲಿ ನಿರ್ಮಿಸಲಾಗುತ್ತಿರುವ ಕಾಸ್ಮೊಲಜಿ ಶಿಕ್ಷಣ ಮತ್ತು ಸಂಶೋಧನ ತರಬೇತಿ ಕೇಂದ್ರ (ಕಾಸ್ಮಾಸ್)ದ ಶಂಕುಸ್ಥಾಪನೆಯನ್ನು ಮಾ. 6 ರಂದು ಬೆ. 10.30ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ನೆರವೇರಿಸಲಿದ್ದಾರೆ.

ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ವಿಶ್ವವಿದ್ಯಾನಿಲಯಕ್ಕೆ ಸೇರಿದ ಜಯಚಾಮರಾಜ ಡೆಯರ್ ಉನ್ನತ ಕಲಿಕಾ ಕೇಂದ್ರಕ್ಕೆ ಸೇರಿದ 3 ಎಕರೆ ಜಾಗದಲ್ಲಿ ತಲೆ ಎತ್ತುತ್ತಿರುವ ಈ ವಿಜ್ಞಾನ ಕೇಂದ್ರದ ಶಂಕು ಸ್ಥಾಪನೆ ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್. ಅಶ್ವತ್ಥ ನಾರಾಯಣ, ಸಚಿವ ಎಸ್.ಟಿ. ಸೋಮಶೇಖರ್, ಸಂಸದ ಪ್ರತಾಪ್ಸಿಂಹ ಶಾಸಕರಾರ ಎಸ್ಎ. ರಾಮದಾಸ್, ಎಲ್. ನಾಗೇಂದ್ರ, ಕೇಂದ್ರ ಸರಕಾರದ ಪ್ರಧಾನ ವೈಜ್ಞಾನಿಕ ಸಲಹೆಗಾರ ಪ್ರೊ.ಕೆ. ವಿಜಯ ರಾಘವನ್, ಅಟಾಮಿಕ್ ಎನರ್ಜಿ ವಿಭಾಗದ ಕಾರ್ಯದರ್ಶಿ ಕೆ.ಎನ್. ವ್ಯಾಸ, ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕಾರ್ಯದರ್ಶಿ ಡಾ.ಎಸ್. ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸುವರು ಎಂದು ತಿಳಿಸಿದರು.
ಮೈಸೂರು ವಿಶ್ವವಿದ್ಯಾಲಯ ಕುಲಸಚಿವ ಪ್ರೊಘಿ.ಆರ್.ಶಿವಪ್ಪ, ವಿಶೇಷಾಧಿಕಾರಿ ಡಾ.ಚೇತನ್ ಸೇರಿದಂತೆ ಇತರರು ಇದ್ದರು.
Recommended Video
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications