ರೈತರಿಗೆ ನೀಡದ ಪರಿಹಾರ; ಡಿಸಿ, ಎಸಿ ಕಾರು ಜಪ್ತಿಗೆ ಕೋರ್ಟ್ ಆದೇಶ
ಮೈಸೂರು, ನವೆಂಬರ್ 21: ರೈತರ ಜಮೀನಿಗೆ ಪರಿಹಾರ ನೀಡದ ಹಿನ್ನೆಲೆಯಲ್ಲಿ ಡಿಸಿ, ಎಸಿ ಕಾರುಗಳ ಜಪ್ತಿಗೆ ಕೋರ್ಟ್ ಅಧಿಕಾರಿಗಳು ಮುಂದಾಗಿದ್ದು, ಡಿಸಿ ಮತ್ತು ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಮೈಸೂರು ಸಿಜೆಎಂ ನ್ಯಾಯಾಲಯ ಆದೇಶ ನೀಡಿದೆ.
ಇಬ್ಬರ ನಡುವಿನ ತಿಕ್ಕಾಟದಲ್ಲಿ ಮಣ್ಣು ಪಾಲಾಯ್ತು 1500 ಲೀಟರ್ ಹಾಲು
ಸಾತಗಳ್ಳಿ ಭಾಗದ ಪ್ರದೇಶದ ನಿವಾಸಿಗಳಿಗೆ ಸರ್ಕಾರದಿಂದ ಪರಿಹಾರ ನೀಡಬೇಕಿತ್ತು. ಸುಮಾರು 72 ಎಕರೆ ಜಮೀನು ಹಸ್ತಾಂತರವಾಗಿದ್ದು, 20 ವರ್ಷಗಳ ಹಿಂದೆಯೇ ಜಾಗ ಹಸ್ತಾಂತರಿಸಲಾಗಿತ್ತು. ಜಮೀನಿನ ಮಾಲೀಕರು 12 ವರ್ಷಗಳ ಹಿಂದೆಯೇ ಕೋರ್ಟ್ ಮೆಟ್ಟಿಲೇರಿದ್ದರು. 10 ವರ್ಷದ ಹಿಂದೆಯೇ ಇವರಿಗೆ ಪರಿಹಾರ ನೀಡುವಂತೆ ಹೈಕೋರ್ಟ್ ಆದೇಶ ನೀಡಿತ್ತು. 10 ವರ್ಷ ಕಳೆದರೂ ಪರಿಹಾರ ನೀಡದ ಹಿನ್ನಲೆಯಲ್ಲಿ ಇದೀಗ ಮೈಸೂರು ಸಿಜೆಎಂ ನ್ಯಾಯಾಲಯ ಜಪ್ತಿಗೆ ಆದೇಶ ನೀಡಿದೆ.
ಕೋರ್ಟ್ ಅಧಿಕಾರಿ ಅಮಿನ್ ಜೊತೆ ಜಮೀನು ಮಾಲೀಕರು, ರೈತರು ಜಿಲ್ಲಾಧಿಕಾರಿಗಳ ಕಚೇರಿಗೆ ಬಂದಿದ್ದಾರೆ. ಡಿಸಿ ಮತ್ತು ಎಸಿ ಕಚೇರಿಯ ಪೀಠೋಪಕರಣ ಜಪ್ತಿಗೆ ಅಧಿಕಾರಿಗಳು ಮುಂದಾಗಿದ್ದು, ಎಸಿ ಡಾ.ವೆಂಕಟರಾಜು ಒಂದು ವಾರದ ಕಾಲ ಗಡುವು ಕೇಳಿದ್ದಾರೆ. ಕೋರ್ಟ್ ಆದೇಶ ಪಾಲಿಸುವಂತೆ ಎಸಿಗೆ ಕೋರ್ಟ್ ಅಧಿಕಾರಿಗಳು ಮನವಿ ಮಾಡಿದ್ದಾರೆ.