Pratap Simha: ಪ್ರತಾಪ್ ಸಿಂಹ ಕುರಿತಾದ 'ಕತ್ತಲೆ ಜಗತ್ತು' ಪುಸ್ತಕ ಬಿಡುಗಡೆಗೆ ತಡೆಯಾಜ್ಞೆ
ಮಾಜಿ ಸಂಸದ ಪ್ರತಾಪ್ ಸಿಂಹ ಪತ್ರಕರ್ತರಾಗಿದ್ದ ಸಂದರ್ಭದಲ್ಲಿ ಬರೆಯುತ್ತಿದ್ದ ಬೆತ್ತಲೆ ಜಗತ್ತು ಅಂಕಣ ಭಾರಿ ಜನಪ್ರಿಯವಾಗಿತ್ತು. ಇದೀಗ ಪ್ರತಾಪ್ ಸಿಂಹ ಅವರ ಕುರಿತಂತೆಯೇ ಪ್ರವೀಣ್ ಕುಮಾರ್ ಮಾವಿನಕಾಡು 'ಕತ್ತಲೆ ಜಗತ್ತು' ಎನ್ನುವ ಪುಸ್ತಕ ಬರೆದಿದ್ದು, ಈ ಪುಸ್ತಕ ಬಿಡುಗಡೆ ಮಾಡದಂತೆ ಮಾಜಿ ಸಂಸದ ಪ್ರತಾಪಸಿಂಹ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ನ್ಯಾಯಾಲಯ ತಡೆಯಾಜ್ಞೆ ನೀಡಿದ ಬಳಿಕ ಮೈಸೂರಿನಲ್ಲಿ ಏರ್ಪಡಿಸಲಾಗಿದ್ದ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಪ್ರವೀಣ್ ಕುಮಾರ್ ಮಾವಿನಕಾಡು ಬರೆದಿರುವ ಪುಸ್ತಕದಲ್ಲಿ ತಮ್ಮ ಬಗ್ಗೆ ಅಸಭ್ಯ ಮತ್ತು ಮಾನಹಾನಿಕರ ವಿಷಯಗಳನ್ನು ಬರೆದಿದ್ದು, ಪುಸ್ತಕ ಬಿಡುಗಡೆ, ಮಾರಾಟ ಮತ್ತು ಪ್ರಸಾರ ಮಾಡದಂತೆ ತಡೆಯಾಜ್ಞೆ ನೀಡಬೇಕು ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ನ್ಯಾಯಾಲಯದ ಮೊರೆ ಹೋಗಿದ್ದರು. ಪ್ರತಾಪ್ ಸಿಂಹ ಮನವಿಯನ್ನು ಪುರಸ್ಕರಿಸಿರುವ ಬೆಂಗಳೂರು ಗ್ರಾಮಾಂತರ ಸಿವಿಲ್ ನ್ಯಾಯಾಲಯ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರತಾಪ್ ಸಿಂಹ ಅವರಿಗೆ ಲೋಕಸಭಾ ಚುನಾವಣೆ ಟಿಕೆಟ್ ತಪ್ಪಲು ಕಾರಣವಾದ ಘಾತಕ ಕಥೆಗಳು ಶೀರ್ಷಿಕೆ ಹೊಂದಿದ್ದ ಕಾರಣ ಸಂಸದ ಪ್ರತಾಪ್ ಸಿಂಹ ಅವರು ಕೃತಿ ಬಿಡುಗಡೆಗೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಹೀಗಾಗಿ ಪುಸ್ತಕ ಬಿಡುಗಡೆ ಸಮಾರಂಭ ರದ್ದಾಗಿತ್ತು. ಆದರೆ, ಇದರ ಬದಲಾಗಿ ಶನಿವಾರ ಚಿಂತನ ಮಂಥನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಪ್ರತಾಪ್ ಸಿಂಹ ವಿರುದ್ಧ ಅಸಮಾಧಾನ
ಮೈಸೂರು ನಗರದ ಇನ್ಸ್ಟಿಟ್ಯೂಟ್ ಎಂಜಿನಿಯರ್ಸ್ ಸಭಾಂಗಣದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮೈಸೂರು ರಕ್ಷಣಾ ವೇದಿಕೆ ಅಧ್ಯಕ್ಷ ಮೈ.ಕಾ.ಪ್ರೇಮ್ ಕುಮಾರ್, ಇದೇ ಪ್ರತಾಪ್ ಸಿಂಹ 'ಬೆತ್ತಲೆ ಜಗತ್ತು' ಎನ್ನುವ ಅಂಕಣ ಬರೆದು ರಾಜಕಾರಣಿಗಳೆಲ್ಲರ ಜನ್ಮವನ್ನೂ ಜಾಲಾಡಿದಾಗ ನಾವೇ ಅವರನ್ನು ಹೊತ್ತು ಮೆರೆಸಿದ್ದೆವು. ಆಗ ಅವರ ಮೇಲೆ ಯಾರೂ ತಡೆಯಾಜ್ಞೆ ತಂದಿರಲಿಲ್ಲ. ಆದರೆ, ಅವರ ಕುರಿತ ಹಲವಾರು ವಿಷಯಗಳಿರುವ 'ಕತ್ತಲೆ ಜಗತ್ತು' ಪುಸ್ತಕ ಹೊರಬಂದಾಗ ತಡೆಯಾಜ್ಞೆ ತರುತ್ತಾರೆ. ಬರಹಗಾರರಿಗೆ ಅಭಿವ್ಯಕ್ತಿ ಸ್ವಾತಂತ್ರ ಎಲ್ಲಿದೆ ಎಂದರು.
ಸಂಸತ್ನ ಒಳಗೆ ಸ್ಮೋಕ್ ಬಾಂಬ್ ಸಿಡಿಸಿದವರಿಗೆ ಒಳಗೆ ಪ್ರವೇಶಿಸಲು ಪಾಸ್ ನೀಡುವ ಮೂಲಕ ನರೇಂದ್ರ ಮೋದಿ ಸರ್ಕಾರಕ್ಕೆ ಮಸಿ ಬಳಿಯುವ ಕೆಲಸವನ್ನು ಪ್ರತಾಪ್ ಸಿಂಹ ಮಾಡಿದ್ದಾರೆ. ಸ್ಮೋಕ್ ಬಾಂಬ್ ಪ್ರಕರಣದಲ್ಲಿ ಪಾಸ್ ತೆಗೆದುಕೊಂಡವರಿಗೂ ಮತ್ತು ಪ್ರತಾಪ್ ಸಿಂಹ ಅವರಿಗೆ ಯಾವ ಸಂಬಂಧ ಇತ್ತು ಎನ್ನುವು ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಆಗ್ರಹಿಸಿದರು.
ಜೆಎಲ್ಬಿ ರಸ್ತೆಯಲ್ಲಿರುವ ದಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರ್ಸ್ ಸಭಾಂಗಣದಲ್ಲಿ ಮೈಸೂರು ರಕ್ಷಣಾ ವೇದಿಕೆ ವತಿಯಿಂದ ಶನಿವಾರ ಆಯೋಜಿಸಿದ್ದ "ಮಾಧ್ಯಮ ಸ್ವಾತಂತ್ರ್ಯ ಮತ್ತು ಬರಹಗಾರರ ಹಕ್ಕುಗಳು" ಕುರಿತ ಚಿಂತನ ಮಂಥನ ಕಾರ್ಯಕ್ರಮಕ್ಕೆ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್ ಗೈರಾಗಿದ್ದರು. ಅವರ ಅನುಪಸ್ಥಿತಿಯಲ್ಲಿ ಸಂವಾದ ಕಾರ್ಯಕ್ರಮವನ್ನು ನಡೆಸಲಾಯಿತು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications