"ಕೊರೊನಾ ಪ್ರಕರಣ ಹೆಚ್ಚಾದರೆ ಕೋವಿಡ್ ಸೆಂಟರ್ ಪುನರಾರಂಭ''

ಮೈಸೂರು, ಮಾರ್ಚ್ 24: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾದ ಬೆನ್ನಲ್ಲೇ,‌ ಸೋಂಕಿಗೆ ಕಡಿವಾಣ ಹಾಕಲು ಜಿಲ್ಲಾಡಳಿತ ಮುಂದಾಗಿದೆ.

ಮೈಸೂರು ನಗರದಲ್ಲಿ ಸೋಂಕಿನ ಪ್ರಕರಣ ಹೆಚ್ಚಾದಲ್ಲಿ ಕೋವಿಡ್ ಸೆಂಟರ್ ಪುನರಾರಂಭ ಮಾಡುತ್ತೇವೆ ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಬುಧವಾರ ಈ ಬಗ್ಗೆ ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ, "ಮೈಸೂರಿನಲ್ಲಿ ಕೊರೊನಾ ಸೊಂಕು ಹೆಚ್ಚಾದ ಹಿನ್ನೆಲೆ, ಸರ್ಕಾರಿ ಜಾಥಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಲು ಜಿಲ್ಲಾಡಳಿತ ಚಿಂತನೆ ನಡೆಸಿದೆ. ದಿನೇ ದಿನೇ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸರ್ಕಾರದಿಂದ ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ಕೂಡ ನಿಲ್ಲಿಸಲಾಗುವುದು. ಸರ್ಕಾರದ ಮಾರ್ಗಸೂಚಿಯಂತೆ ಕ್ರಮ ಕೈಗೊಳ್ಳಲಾಗುತ್ತಿದೆ. ಸೋಂಕಿನ ಪ್ರಕರಣ ಹೆಚ್ಚಾದಲ್ಲಿ ಕೋವಿಡ್ ಸೆಂಟರ್ ಪುನರಾರಂಭ ಮಾಡುತ್ತೇವೆ'' ಎಂದರು.

Mysuru: Covid Center Reopen If Corona Cases Increases: DC Rohini Sindhuri

ಬನ್ನೂರಿನಲ್ಲಿ ಶಾಲಾ ಮಕ್ಕಳಿಗೆ ಸಾಮೂಹಿಕ ಸೋಂಕು ವಿಚಾರ ಕುರಿತು ಮಾತನಾಡಿದ ಡಿಸಿ ರೋಹಿಣಿ ಸಿಂಧೂರಿ, ಶಾಲಾ ಆಡಳಿತ ಮಂಡಳಿಯವರು ಸಂಪರ್ಕಿತರೆಲ್ಲರಿಗೂ ಟೆಸ್ಟ್ ಮಾಡಿಸುತ್ತಿದ್ದಾರೆ. ಈಗಾಗಲೇ 1500ಕ್ಕೂ ಹೆಚ್ಚು ಪರೀಕ್ಷೆ ಮಾಡಲಾಗಿದೆ. ಶಾಲಾ- ಕಾಲೇಜುಗಳಲ್ಲಿ ಕೊರೊನಾ ಪರೀಕ್ಷೆಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

ಕಳೆದ 1 ವಾರದಿಂದ ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಹೀಗಾಗಿ ಜಿಲ್ಲಾಡಳಿತ ಅಲರ್ಟ್ ಆಗಿದ್ದು, ಸಕಲ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+