ನಾಗರಹೊಳೆ ಅರಣ್ಯದಂಚಿನಲ್ಲಿ ಹಸುವನ್ನು ಕೊಂದ ಹುಲಿ, ಗ್ರಾಮಸ್ಥರ ಆತಂಕ
ನಾಗರಹೊಳೆ ಕಾಡಂಚಿನ ಬಿಲ್ಲೇನಹೊಸಹಳ್ಳಿಯಲ್ಲಿ ಹುಲಿಯೊಂದು ಹಸುವನ್ನು ಕೊಂದಿದ್ದು, ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಾಡಾನೆ ಹಾಗೂ ಹುಲಿ ದಾಳಿಯಿಂದ ಗ್ರಾಮದಲ್ಲಿ ಭಯದ ವಾತಾವರಣ ಮೂಡಿದೆ
ಹುಣಸೂರು, ಮೇ 17: ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಕಾಡಂಚಿನ ಪ್ರದೇಶದ ಗ್ರಾಮಗಳಲ್ಲಿ ಮತ್ತೆ ಹುಲಿಯ ಭಯ ಆರಂಭವಾಗಿದೆ. ಈ ವ್ಯಾಪ್ತಿಯಲ್ಲಿ ಹುಲಿಯೊಂದು ಅಡ್ಡಾಡುತ್ತಿದೆ ಎಂಬ ಮಾತುಗಳು ಕೇಳಿ ಬಂದಿತ್ತು. ಅಲ್ಲದೆ, ಜನರು ಓಡಾಡಲು ಭಯಪಡುವಂತಾಗಿದೆ. ಇದೀಗ ಕಾಡಂಚಿನ ಬಿಲ್ಲೇನಹೊಸಹಳ್ಳಿ ಗ್ರಾಮದಲ್ಲಿ ಹುಲಿ ದಾಳಿ ಮಾಡಿ, ಹಸುವನ್ನು ಬಲಿ ಪಡೆದುಕೊಂಡಿದೆ. ಇದರಿಂದ ಗ್ರಾಮದಲ್ಲಿ ಇನ್ನಷ್ಟು ಆತಂಕ ಎದುರಾಗಿದೆ.
ನೇರಳಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಲ್ಲೇನಹೊಸಹಳ್ಳಿ ಗ್ರಾಮದ ಜಾನ್ಸನ್ ಎಂಬುವರಿಗೆ ಸೇರಿದ ಹಸುವನ್ನು ಮೇಯಲು ಬಿಟ್ಟಿದ್ದ ಸಂದರ್ಭದಲ್ಲಿ ಹುಲಿ ದಾಳಿ ಮಾಡಿ ಸಾಯಿಸಿದೆ. ಮೇಯಲು ಹೋಗಿದ್ದ ಹಸು ಸಂಜೆಯಾದರೂ ಬಾರದಿದ್ದಾಗ ಮಾಲೀಕರು ಅದನ್ನು ಹುಡುಕಿಕೊಂಡು ತೆರಳಿದ ಸಂದರ್ಭದಲ್ಲಿ ಎಲ್ಲೂ ಸಿಕ್ಕಿರಲಿಲ್ಲ.['ರಾಜಕುಮಾರ'ನಿಲ್ಲದ ಬಂಡೀಪುರಕ್ಕೀಗ ಮಾದೇಶನೇ ದೊರೆ!]

ಒಂದು ದಿನ ಪೂರ್ತಿ ಹುಡುಕಿದರೂ ಹಸು ಸಿಕ್ಕಿರಲಿಲ್ಲ. ಕೊನೆಗೆ ಲಕ್ಷ್ಮಣ ತೀರ್ಥ ನದಿಯಂಚಿನ ಅರಣ್ಯ ಪ್ರದೇಶದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದ್ದು, ಹುಲಿ ದಾಳಿ ನಡೆಸಿ ಅದನ್ನು ಸಾಯಿಸಿರುವುದು ಪತ್ತೆಯಾಗಿದೆ. ಘÀಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.[ಗುಂಡ್ಲುಪೇಟೆಯ ಪ್ರಿನ್ಸ್ ಹುಲಿ ಹತ್ಯೆ ಪ್ರಕರಣ: ಮೂವರ ಬಂಧನ]
ಹುಲಿ ದಾಳಿಯಿಂದ ಹಸು ಕಳೆದುಕೊಂಡಿರುವ ರೈತರಿಗೆ ಅರಣ್ಯ ಇಲಾಖೆ ವತಿಯಿಂದ ಸೂಕ್ತ ಪರಿಹಾರ ನೀಡಬೇಕು ಹಾಗೂ ಈ ಭಾಗದಲ್ಲಿ ಕಾಡಾನೆ ಮತ್ತು ಹುಲಿ ಹಾವಳಿ ಹೆಚ್ಚಾಗಿದ್ದು, ಇದರ ತಡೆಗೆ ಮುಂದಾಗಬೇಕು ಎಂದು ಜಿಲ್ಲಾ ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಸದಸ್ಯ ನೇರಳಕುಪ್ಪೆ ಮಹದೇವ್ ಆಗ್ರಹಿಸಿದ್ದಾರೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications