ಬಸವ ಜಯಂತಿಯಂದೇ ಬೆಟ್ಟದಪುರದಲ್ಲಿ ಗೋಹತ್ಯೆ!
ಮೈಸೂರು, ಮೇ 10 : ಬಸವೇಶ್ವರ ಜಯಂತಿಯಂದು ಸಾಮಾನ್ಯವಾಗಿ ಎಲ್ಲ ಮಾಂಸದಂಗಡಿಗಳನ್ನು ಬಂದ್ ಮಾಡಲಾಗುತ್ತದೆ. ವಿಶ್ವಕ್ಕೆ ಶಾಂತಿ ಸಾರಿದ ಬಸವಣ್ಣನ ಜಯಂತಿಯಂದು ಪ್ರಾಣಿಹಿಂಸೆ ನಡೆಸದಂತೆ ನೋಡಿಕೊಳ್ಳಲಾಗುತ್ತಿದೆ.
ಜಿಲ್ಲಾಡಳಿತ ಬಸವ ಜಯಂತಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿತ್ತು. ಇದರ ಪಾಲನೆ ಕೆಲವೆಡೆ ನಡೆದಿತ್ತಾದರೂ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಹಲಗನಹಳ್ಳಿಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಕೋಳಿ, ಕುರಿಯಲ್ಲದೆ ಗೋವುಗಳನ್ನೇ ಕತ್ತರಿಸಿ ಮಾರಾಟ ಮಾಡಲಾಗಿದೆ. [ಪತ್ರ : ಗಟ್ಟಿಮುಟ್ಟಾದ ತರ್ಕವಿಲ್ಲದ ಬಾಲಿಶ ವಿಚಾರಧಾರೆ]

ಗೋವು ಹತ್ಯೆಗೆ ಎಲ್ಲೆಡೆ ವಿರೋಧವೂ ಇದೆ. ಅಲ್ಲದೆ ಗೋಹತ್ಯೆ ನಿಷೇಧಿಸಿ ಕಾನೂನು ಹೊರಡಿಸಬೇಕೆಂಬ ಕೂಗು ಇದ್ದರೂ ಅದು ಇನ್ನೂ ಜಿಜ್ಞಾಸೆಯಲ್ಲಿದೆ. ಅಲ್ಲಲ್ಲಿ ಗೋಹತ್ಯೆ ಸದ್ದಿಲ್ಲದೆ ನಡೆಯುತ್ತಲೇ ಇದೆ. ಅದು ಆಚೆಗಿರಲಿ. ಆದರೆ ಬಸವ ಜಯಂತಿಯಂದು ಜಿಲ್ಲಾಡಳಿತವೇ ಪ್ರಾಣಿ ಹಿಂಸೆ ಮಾಡದಂತೆ ಆದೇಶ ನೀಡಿದ್ದರೂ ಅದನ್ನು ಧಿಕ್ಕರಿಸಿ ಹಸುಗಳನ್ನು ಕತ್ತರಿಸಿ ಮಾರಾಟ ಮಾಡಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.
ಸಂಬಂಧ ಪಟ್ಟ ಪೊಲೀಸ್ ಇಲಾಖೆಯಾಗಲಿ, ಗ್ರಾಮಪಂಚಾಯಿತಿಯಾಗಲಿ ಇದನ್ನು ತಡೆಯದೆ ಇರುವುದು ಸಂಶಯಕ್ಕೆಡೆ ಮಾಡಿಕೊಟ್ಟಿದೆ. ಬಸವಜಯಂತಿಯಂದು ಗೋಮಾಂಸವನ್ನು ಮಾರಾಟ ಮಾಡಿದ ಸುದ್ದಿ ತಿಳಿದ ವೀರಶೈವ ಸಂಘಟನೆಗಳು ಬಸವಣ್ಣನವರ ಹೆಸರಿಗೆ ಕಳಂಕ ತಂದಿರುವ ಮತ್ತು ಅವರ ಅಹಿಂಸಾ ತತ್ತ್ವಕ್ಕೆ ಧಕ್ಕೆ ತಂದವರ ವಿರುದ್ಧ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತ ಮತ್ತು ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. [ಮತ್ತೂರಲ್ಲಿ ಸೋಮಯಾಗ : ದುರುದ್ದೇಶಪೂರಿತ ಅಪಪ್ರಚಾರ]
-
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Viral Video: ಮಗನ ಸಾಧನೆ ಕಂಡು ಭಾವುಕರಾದ ಪೋಷಕರು; ಕ್ಯೂಟ್ ವಿಡಿಯೋ ವೈರಲ್ -
ಸರ್ಕಾರಿ ಜಮೀನು ಒತ್ತುವರಿ ತಡೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳಕ್ಕೆ ಭೇಟಿ ನೀಡುತ್ತಿರಿ: ಸಚಿವ ಕೃಷ್ಣ ಬೈರೇಗೌಡ ಸೂಚನೆ -
Karnataka Weather: ರಾಜ್ಯವನ್ನು ಸುಡುತ್ತಿದೆ ರಣಬಿಸಿಲು; ಕರಾವಳಿ, ಮಲೆನಾಡಿಗೆ ಇಂದು ಮಳೆ ಮುನ್ಸೂಚನೆ -
Trisha Krishnan: ದಳಪತಿ ವಿಜಯ್ ಜೊತೆಗಿನ ಸಂಬಂಧ, ಡಿವೋರ್ಸ್ ಬಗ್ಗೆ ಮಾಧ್ಯಮಗಳ ಪ್ರಶ್ನೆ: ನಟಿ ತ್ರಿಶಾ ಕೊಟ್ಟ ಉತ್ತರವೇನು? -
92,00,00,000 ರೂಪಾಯಿ ಬಹುಮಾನ, ಈತನ ಬಗ್ಗೆ ಸುಳಿವು ನೀಡಿದರೆ ನಿಮಗೂ ಸಿಗಲಿದೆ ಹಣ... Mojtaba Khamenei -
Shri Gandhada Gudi Serial: "ಶ್ರೀಗಂಧದಗುಡಿ" ಸೀರಿಯಲ್ಗೆ ಗುಡ್ಬೈ ಹೇಳಿದ ಸಂಜನಾ ಬುರ್ಲಿ, ಕಾರಣ ಇಲ್ಲಿದೆ












Click it and Unblock the Notifications