ಮೈಸೂರು: ಮೂಡಾ ಸೈಟ್ ಮಾರಾಟಕ್ಕಿಟ್ಟವನ ಮೇಲೆ ಕ್ರಿಮಿನಲ್ ಕೇಸ್
ಮೈಸೂರು, ಸೆಪ್ಟೆಂಬರ್ 17: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರವು ಕಳೆದ ಮೂರು ತಿಂಗಳಿನ ಕಾರ್ಯಾಚರಣೆಯಲ್ಲಿ ಕೋಟ್ಯಂತರ ರುಪಾಯಿ ಮೌಲ್ಯದ ಆಸ್ತಿಯನ್ನು ಭೂಗಳ್ಳರಿಂದ ಸ್ವಾಧೀನ ಪಡಿಸಿಕೊಂಡಿದೆ.
ಆದರೂ ಕೂಡಾ ಭೂಗಳ್ಳರು ಹೊಸ ವಿಧಾನಗಳ ಮೂಲಕ ಜನರನ್ನು ವಂಚಿಸಲು ಮುಂದಾಗಿದ್ದಾರೆ. ಈ ಬಾರಿ ಮೂಡಾ ಆಸ್ತಿಯನ್ನು ಒತ್ತುವರಿ ಮಾಡದೇ ನಕಲಿ ದಾಖಲೆ ಸೃಷ್ಟಿಸಿದ ಭೂಪನೊಬ್ಬ ಮಾರಾಟಕ್ಕಿಟ್ಟಿದ್ದಾನೆ.
ಮೈಸೂರು ನಗರದ ಟಿ.ಕೆ ಬಡಾವಣೆಯ ನಿ.ಸಂ 719/ಎ ನಲ್ಲಿ 40 x 50 ಅಡಿ ಒಟ್ಟು 2,200 ಚದರ ಅಡಿ ಅಳತೆಯ ನಿವೇಶನವು ಮಾರಾಟಕ್ಕಿರುವುದಾಗಿ ಸೆ.13 ರಂದು ಸ್ಥಳೀಯ ದಿನಪತ್ರಿಕೆಯಲ್ಲಿ ಜಾಹೀರಾತು ಪ್ರಕಟವಾಗಿರುವುದನ್ನು ನಗರಾಭಿವೃದ್ಧಿ ಪ್ರಾಧಿಕಾರವು ಗಮನಿಸಿದೆ.

ಈ ಆಸ್ತಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಸ್ವಾಮ್ಯಕ್ಕೆ ಸೇರಿದ ಸ್ವತ್ತಾಗಿದ್ದು, ಸಂಪೂರ್ಣ ಮಾಲೀಕತ್ವ ಮತ್ತು ಸ್ವಾಧೀನವು ಪ್ರಾಧಿಕಾರದ್ದಾಗಿರುತ್ತದೆ. ಈ ಸ್ವತ್ತಿಗೆ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲು ಪ್ರಯತ್ನಿಸಿರುವುದನ್ನು ಗಮನಿಸಲಾಗಿದ್ದು, ಸಾರ್ವಜನಿಕರು ಮೋಸ ಹೋಗಬಾರದೆಂದು ಮುಡಾ ಎಚ್ಚರಿಸಿದೆ.
ದಿನಪತ್ರಿಕೆ ಜಾಹೀರಾತುಗಳಲ್ಲಿ ಕಾಣಿಸಿರುವ ಮೊಬೈಲ್ ಸಂಖ್ಯೆ 998674219 ಹೊಂದಿರುವ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಕ್ರಮ ವಹಿಸಲಾಗುತ್ತಿದೆ.
ಆದಾಗ್ಯೂ ಸಾರ್ವಜನಿಕರು ಈ ಸ್ವತ್ತನ್ನು ಖರೀದಿ ಪಡೆದಲ್ಲಿ ಉಂಟಾಗುವ ಯಾವುದೇ ನಷ್ಟಕ್ಕೆ ಪ್ರಾಧಿಕಾರವು ಜವಾವ್ದಾರವಾಗುವುದಿಲ್ಲ ಎಂದು ಪ್ರಾಧಿಕಾರದ ಆಯುಕ್ತರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇತ್ತೀಚಿಗೆ ಆಶಾಮಂದಿರ ಯೋಜನೆಯಡಿ ನಗರದ ದೇವನೂರು 1ನೇ ಹಂತ ಬಡಾವಣೆಯ ಮೂಲೆ ನಿವೇಶನಗಳಲ್ಲಿ ಮುಡಾ ಜಮೀನಿನಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಹತ್ತಾರು ಶೆಡ್ಡುಗಳನ್ನು ಇಂದು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದವರು ತೆರವುಗೊಳಿಸಿದ್ದರು.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications