ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಪಘಾತಗಳಿಗೆ ದಾರಿ ಮಾಡಿಕೊಡುತ್ತಿದೆ ರೈತರ ಈ ಕೆಲಸ

|
Google Oneindia Kannada News

ಮೈಸೂರು, ಜನವರಿ 04: ಇದೀಗ ಒಕ್ಕಣೆ ಸಮಯ. ಹೀಗಾಗಿ ಜಿಲ್ಲೆಯ ಹಲವು ರಸ್ತೆಗಳಲ್ಲಿ ರೈತರು ಒಕ್ಕಣೆ ಕಾರ್ಯ ನಡೆಸುತ್ತಿದ್ದಾರೆ. ಅದರೆ ರಸ್ತೆ ಮೇಲೆ ಹೀಗೆ ಒಕ್ಕಣೆ ಕೆಲಸ ಮಾಡುತ್ತಿರುವುದು ದ್ವಿಚಕ್ರವಾಹನ ಸವಾರರು ಮತ್ತು ಇತರೆ ವಾಹನ ಚಾಲಕರಿಗೆ ಕಿರಿಕಿರಿಯಾಗುತ್ತಿರುವುದು ಮಾತ್ರವಲ್ಲದೆ ಅನಾಹುತಕ್ಕೂ ದಾರಿ ಮಾಡಿಕೊಡುತ್ತಿದೆ.

ವಾಹನಗಳು ಓಡಾಡುವ ರಸ್ತೆಗಳಲ್ಲಿ ಒಕ್ಕಣೆ ಮಾಡಬಾರದು ಎಂಬ ಸೂಚನೆಯನ್ನು ರೈತರಿಗೆ ನೀಡಿದ್ದರೂ ಬಹುತೇಕ ಕಡೆ ರೈತರು ತಮ್ಮ ಪಾಡಿಗೆ ತಾವು ರಸ್ತೆಗಳಲ್ಲಿಯೇ ಒಕ್ಕಣೆ ನಡೆಸುವುದು ಮಾಮೂಲಿಯಾಗಿದೆ. ಇದರಿಂದ ವಾಹನ ಸವಾರರಿಗೆ ತೊಂದರೆಯಾದರೂ ಅದೇ ಮಾರ್ಗದಲ್ಲಿ ಸಾಗುವುದು ಅನಿವಾರ್ಯವಾಗುತ್ತಿದೆ.

ಬೈಕ್ ಸವಾರರ ಮೇಲೆ ಬಿದ್ದ ಕಾಡುಕೋಣ; ಸವಾರರಿಗೆ ಗಂಭೀರ ಗಾಯಬೈಕ್ ಸವಾರರ ಮೇಲೆ ಬಿದ್ದ ಕಾಡುಕೋಣ; ಸವಾರರಿಗೆ ಗಂಭೀರ ಗಾಯ

ಇತ್ತೀಚೆಗೆ ಗುಂಡ್ಲುಪೇಟೆ ಬಳಿ ಒಕ್ಕಣೆ ನಡೆಸುತ್ತಿದ್ದ ರಸ್ತೆಯಲ್ಲಿ ಸಾಗಿದ ಓಮ್ನಿ ವ್ಯಾನ್ ಆಕಸ್ಮಿಕ ಬೆಂಕಿಗೆ ಆಹುತಿಯಾಗಿತ್ತು. ಈ ದುರ್ಘಟನೆ ನಡೆದ ಮೇಲೂ ಎಚ್ಚೆತ್ತುಕೊಳ್ಳದೆ ಮತ್ತೆ ಮತ್ತೆ ರಸ್ತೆಗಳಿಗೆ ಭತ್ತ, ರಾಗಿ, ಹುರಳಿ, ಹುಚ್ಚೆಳ್ಳು ಮೊದಲಾದವುಗಳನ್ನು ತಂದು ಹಾಕುತ್ತಿರುವುದು ಕಂಡು ಬರುತ್ತಿದೆ. ಪಿರಿಯಾಪಟ್ಟಣ ತಾಲೂಕಿನ ಹಲವೆಡೆ ಗ್ರಾಮಾಂತರ ಪ್ರದೇಶಗಳಲ್ಲಿ ಹಾದು ಹೋಗಿರುವ ಪ್ರಮುಖ ರಸ್ತೆಗಳಲ್ಲಿ ಒಕ್ಕಣೆ ಮಾಡಲಾಗುತ್ತಿದೆ.

Crops Spreading On Roads Leading To Accidents In Mysuru

ಈ ನಡುವೆ ಇಲ್ಲಿನ ಲೋಕೋಪಯೋಗಿ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ನಾಗರಾಜು ಅವರು ಮುನ್ನೆಚ್ಚರಿಕೆ ಕ್ರಮವಾಗಿ ರಸ್ತೆಯಲ್ಲಿ ಯಾವುದೇ ರೀತಿಯ ಒಕ್ಕಣೆ ಮಾಡಬಾರದು ಎಂದು ಎಚ್ಚರಿಕೆಯನ್ನು ನೀಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಪೊಲೀಸ್ ಇಲಾಖೆ ಮತ್ತು ಸಂಬಂಧಪಟ್ಟ ಇಲಾಖೆಗಳು ಒಗ್ಗೂಡಿ ಸೂಕ್ತ ಕ್ರಮ ಕೈಗೊಳ್ಳಬೇಕು.

English summary
For cleaning the crops, farmers are spreading it on many roads. It is not only irritating motorcyclists also leading to accidents,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X