ಶಿವಕುಮಾರ್ ನೀವು ಏಸುಕುಮಾರ್ ಆಗಬೇಡಿ: ಪ್ರತಾಪ್ ಸಿಂಹ ವ್ಯಂಗ್ಯ
Recommended Video
ಮೈಸೂರು, ಜನವರಿ 03: ಕಪಾಲ ಬೆಟ್ಟ ಅದು ಶಿವನ ಬೆಟ್ಟ, ಆ ಬೆಟ್ಟವನ್ನು ಏಸು ಬೆಟ್ಟ ಮಾಡಿ ನೀವು ಏಸುಕುಮಾರ ಎನಿಸಿಕೊಳ್ಳಬೇಡಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತಾನಾಡಿದ ಪ್ರತಾಪ್ ಸಿಂಹ ಅವರು, ಶಿವ ಮತ್ತು ಭಕ್ತರ ನಡುವಿನ ಸಂಬಂಧವನ್ನು ನೀವು ಮುರಿಯಬೇಡಿ. ಆ ಪಾಪವನ್ನು ನೀವು ಹೊತ್ತುಕೊಳ್ಳಬೇಡಿ ಎಂದು ತಿಳಿಸಿದರು.
ಕಾಂಗ್ರೆಸ್ ನವರು ಪ್ರಧಾನಿ ನರೇಂದ್ರ ಮೋದಿ ಶ್ರೀ ಸಿದ್ದಗಂಗಾ ಮಠಕ್ಕೆ ಹೋಗಿದ್ದನ್ನು ಟೀಕಿಸುತ್ತಾರೆ, ಪ್ರಧಾನಿಯವರು ಹಣೆಗೆ ವಿಭೂತಿ ಹಚ್ಚಿಕೊಂಡಿದ್ದನ್ನು ನೋಡಿ ಕಾಂಗ್ರೆಸ್ಸಿಗರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿದ್ದವರಿಂದ ಪ್ರಧಾನಿಯವರು ಪಾಠ ಕಲಿಯಬೇಕಿಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೆಗಳಿದರು.
ಪ್ರಧಾನಿ ಭಾಷಣವನ್ನು ಮತ್ತು ವಿಭೂತಿಯನ್ನು ಟೀಕಿಸುವ ಮನಸ್ಥಿತಿ ಕಾಂಗ್ರೆಸ್ ಯಾಕೆ ಬರುತ್ತದೆ ಎಂದು ಗೊತ್ತಿಲ್ಲ. ಹಾಗಾದರೆ ಕಾಲಬೈರವೇಶ್ವರನ ಜಾಗದಲ್ಲಿ ಡಿ.ಕೆ.ಶಿವಕುಮಾರ್ ಅವರು ಏಸು ಪ್ರತಿಮೆ ಮಾಡಲು ಹೊರಟಿರುವುದನ್ನು ನೋಡಿದರೆ ಶಿವನ ಭಕ್ತರ ಬಗ್ಗೆ ಕಾಂಗ್ರೆಸ್ ಗೆ ಮತ್ಸರ ಉಂಟಾಗಿರಬೇಕು ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ಮೋದಿಯವರು ಪ್ರಸ್ತುತ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಭವಿಷ್ಯದ ಪ್ರಜೆಗಳಿಗೆ ತಿಳುವಳಿಕೆ ಕೊಟ್ಟಿದ್ದರಲ್ಲಿ ತಪ್ಪೇನಿಲ್ಲ. ಯಾಕೆ ಇಷ್ಟು ಉರಿದುಕೊಂಡು ಟ್ವಿಟ್ ಮಾಡುತ್ತಿದ್ದೀರಿ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರಿಗೆ ಪ್ರತಾಪ್ ಸಿಂಹ ಪ್ರಶ್ನೆ ಹಾಕಿದರು.
ಕಾಂಗ್ರೆಸ್ಸಿಗರಂತೆ ಸೋನಿಯಾ ಗಾಂಧಿ ಮುಂದೆ ಮಂಡಿಯೂರಿ ಮಾತನಾಡುವ ದಯನೀಯ ಸ್ಥಿತಿ ಬಿಜೆಪಿಗೆ ಬಂದಿಲ್ಲ, ಕಾಂಗ್ರೆಸ್ ನಿಂದ ಹೇಳಿಸಿಕೊಂಡು ಪ್ರಧಾನಿಯವರ ಜೊತೆ ಮಾತನಾಡಬೇಕಿಲ್ಲ. ಮೋದಿಯವರು ಯಾವಾಗಲೂ ರಾಜ್ಯದ ಪರವಾಗಿದ್ದಾರೆ ಎಂದು ತಿಳಿಸಿದರು.
ನೆರೆ ಪರಿಹಾರದ ಬಗ್ಗೆ ಮಾತನಾಡದ ಮೋದಿಯನ್ನು ಟೀಕಿಸಿದ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಕರ್ನಾಟಕದ ಜನ ನಮಗೆ 1998 ರಿಂದಲೂ ಸಂಸದರ ಸಂಖ್ಯೆ ಏರಿಸುತ್ತಲೇ ಬಂದಿದ್ದಾರೆ. ರಾಜ್ಯದ ಜನರೊಂದಿಗೆ ನಾವಿದ್ದೇವೆ ಎಂದು ಹೇಳಿದರು.
-
ಬಾಗಲಕೋಟೆ, ದಾವಣಗೆರೆ ಉಪಚುನಾವಣೆ: ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ-ಬಿ.ಎಸ್.ಯಡಿಯೂರಪ್ಪ -
ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿಯುತ್ತವೆ: ಸಿದ್ದರಾಮಯ್ಯ ಹೇಳಿಕೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Vijay Thalapathi: ಟಿವಿಕೆ ಸಂಸ್ಥಾಪಕ, ನಟ ವಿಜಯ್ ದಳಪತಿ ವಿರುದ್ಧ ಪ್ರಕರಣ ದಾಖಲು -
IPL 2026 Free Ticket: ರಾಜ್ಯದ ಶಾಸಕರಿಗೆ ಪ್ರತಿ ಪಂದ್ಯಕ್ಕೂ 3 ಟಿಕೆಟ್ ಉಚಿತ; ಡಿ.ಕೆ.ಶಿವಕುಮಾರ್ -
ತಮಿಳುನಾಡಿನಲ್ಲಿ ರಂಗೇರಿದ ಅಖಾಡ: ಹೊಸ ಶಕ್ತಿಯಾಗಿ ವಿಜಯ್ ಪ್ರವೇಶ, ಪ್ರಮುಖ ಪಕ್ಷಗಳು, ಚರ್ಚೆಯ ವಿಷಯಗಳು -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್











Click it and Unblock the Notifications