ಶಿವಕುಮಾರ್ ನೀವು ಏಸುಕುಮಾರ್ ಆಗಬೇಡಿ: ಪ್ರತಾಪ್ ಸಿಂಹ ವ್ಯಂಗ್ಯ
Recommended Video
ಮೈಸೂರು, ಜನವರಿ 03: ಕಪಾಲ ಬೆಟ್ಟ ಅದು ಶಿವನ ಬೆಟ್ಟ, ಆ ಬೆಟ್ಟವನ್ನು ಏಸು ಬೆಟ್ಟ ಮಾಡಿ ನೀವು ಏಸುಕುಮಾರ ಎನಿಸಿಕೊಳ್ಳಬೇಡಿ ಎಂದು ಡಿ.ಕೆ.ಶಿವಕುಮಾರ್ ಅವರಿಗೆ ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತಾನಾಡಿದ ಪ್ರತಾಪ್ ಸಿಂಹ ಅವರು, ಶಿವ ಮತ್ತು ಭಕ್ತರ ನಡುವಿನ ಸಂಬಂಧವನ್ನು ನೀವು ಮುರಿಯಬೇಡಿ. ಆ ಪಾಪವನ್ನು ನೀವು ಹೊತ್ತುಕೊಳ್ಳಬೇಡಿ ಎಂದು ತಿಳಿಸಿದರು.
ಕಾಂಗ್ರೆಸ್ ನವರು ಪ್ರಧಾನಿ ನರೇಂದ್ರ ಮೋದಿ ಶ್ರೀ ಸಿದ್ದಗಂಗಾ ಮಠಕ್ಕೆ ಹೋಗಿದ್ದನ್ನು ಟೀಕಿಸುತ್ತಾರೆ, ಪ್ರಧಾನಿಯವರು ಹಣೆಗೆ ವಿಭೂತಿ ಹಚ್ಚಿಕೊಂಡಿದ್ದನ್ನು ನೋಡಿ ಕಾಂಗ್ರೆಸ್ಸಿಗರು ಹೊಟ್ಟೆ ಉರಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ದೇವಸ್ಥಾನಕ್ಕೆ ಮೀನು ತಿಂದು ಹೋಗಿದ್ದವರಿಂದ ಪ್ರಧಾನಿಯವರು ಪಾಠ ಕಲಿಯಬೇಕಿಲ್ಲ ಎಂದು ಪರೋಕ್ಷವಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ತೆಗಳಿದರು.
ಪ್ರಧಾನಿ ಭಾಷಣವನ್ನು ಮತ್ತು ವಿಭೂತಿಯನ್ನು ಟೀಕಿಸುವ ಮನಸ್ಥಿತಿ ಕಾಂಗ್ರೆಸ್ ಯಾಕೆ ಬರುತ್ತದೆ ಎಂದು ಗೊತ್ತಿಲ್ಲ. ಹಾಗಾದರೆ ಕಾಲಬೈರವೇಶ್ವರನ ಜಾಗದಲ್ಲಿ ಡಿ.ಕೆ.ಶಿವಕುಮಾರ್ ಅವರು ಏಸು ಪ್ರತಿಮೆ ಮಾಡಲು ಹೊರಟಿರುವುದನ್ನು ನೋಡಿದರೆ ಶಿವನ ಭಕ್ತರ ಬಗ್ಗೆ ಕಾಂಗ್ರೆಸ್ ಗೆ ಮತ್ಸರ ಉಂಟಾಗಿರಬೇಕು ಎಂದು ಪ್ರತಾಪ್ ಸಿಂಹ ವ್ಯಂಗ್ಯವಾಡಿದ್ದಾರೆ.
ಪ್ರಧಾನಿ ಮೋದಿಯವರು ಪ್ರಸ್ತುತ ದೇಶದ ಜ್ವಲಂತ ಸಮಸ್ಯೆಗಳ ಬಗ್ಗೆ ಭವಿಷ್ಯದ ಪ್ರಜೆಗಳಿಗೆ ತಿಳುವಳಿಕೆ ಕೊಟ್ಟಿದ್ದರಲ್ಲಿ ತಪ್ಪೇನಿಲ್ಲ. ಯಾಕೆ ಇಷ್ಟು ಉರಿದುಕೊಂಡು ಟ್ವಿಟ್ ಮಾಡುತ್ತಿದ್ದೀರಿ ಎಂದು ಮೈಸೂರಿನಲ್ಲಿ ಕಾಂಗ್ರೆಸ್ ನಾಯಕರಿಗೆ ಪ್ರತಾಪ್ ಸಿಂಹ ಪ್ರಶ್ನೆ ಹಾಕಿದರು.
ಕಾಂಗ್ರೆಸ್ಸಿಗರಂತೆ ಸೋನಿಯಾ ಗಾಂಧಿ ಮುಂದೆ ಮಂಡಿಯೂರಿ ಮಾತನಾಡುವ ದಯನೀಯ ಸ್ಥಿತಿ ಬಿಜೆಪಿಗೆ ಬಂದಿಲ್ಲ, ಕಾಂಗ್ರೆಸ್ ನಿಂದ ಹೇಳಿಸಿಕೊಂಡು ಪ್ರಧಾನಿಯವರ ಜೊತೆ ಮಾತನಾಡಬೇಕಿಲ್ಲ. ಮೋದಿಯವರು ಯಾವಾಗಲೂ ರಾಜ್ಯದ ಪರವಾಗಿದ್ದಾರೆ ಎಂದು ತಿಳಿಸಿದರು.
ನೆರೆ ಪರಿಹಾರದ ಬಗ್ಗೆ ಮಾತನಾಡದ ಮೋದಿಯನ್ನು ಟೀಕಿಸಿದ ಕಾಂಗ್ರೆಸ್ ಗೆ ತಿರುಗೇಟು ನೀಡಿದ ಸಂಸದ ಪ್ರತಾಪ್ ಸಿಂಹ, ಕರ್ನಾಟಕದ ಜನ ನಮಗೆ 1998 ರಿಂದಲೂ ಸಂಸದರ ಸಂಖ್ಯೆ ಏರಿಸುತ್ತಲೇ ಬಂದಿದ್ದಾರೆ. ರಾಜ್ಯದ ಜನರೊಂದಿಗೆ ನಾವಿದ್ದೇವೆ ಎಂದು ಹೇಳಿದರು.
-
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು












Click it and Unblock the Notifications