ಮೈಸೂರಿನ ಬೈಲುಕುಪ್ಪೆಯಲ್ಲಿ ದಲೈಲಾಮಾರಿಗೆ ಭವ್ಯ ಸ್ವಾಗತ
ಮೈಸೂರು, ಡಿಸೆಂಬರ್ 19: ಟಿಬೆಟಿಯನ್ ನಿರಾಶ್ರಿತರ ಶಿಬಿರ ಬೈಲುಕುಪ್ಪೆಗೆ ಆಗಮಿಸಿದ ಧರ್ಮಗುರು ದಲೈಲಾಮಾ ಅವರಿಗೆ ಟಿಬೇಟಿಯನ್ನರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಭವ್ಯ ಸ್ವಾಗತ ಕೋರಿದರು.
ಎರಡು ವರ್ಷಗಳ ನಂತರ ಬೈಲುಕುಪ್ಪೆಗೆ ಆಗಮಿಸಿದ್ದರಿಂದ ದಲೈಲಾಮಾ ಅವರನ್ನು ನೋಡಲು ಟಿಬೆಟಿಯನ್ನರು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದರು. ಶಿವಮೊಗ್ಗದಿಂದ ಕಾರಿನಲ್ಲಿ ಆಗಮಿಸಿದ ಅವರು ಬೈಲುಕುಪ್ಪೆಗೆ ಆಗಮಿಸುತ್ತಿದ್ದಂತೆಯೇ ದಾರಿ ನಡುವೆ ಕೊಡಗು ಮತ್ತು ಮೈಸೂರು ಜಿಲ್ಲೆಯನ್ನು ಬೇರ್ಪಡಿಸುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಕುಶಾಲನಗರ ಮತ್ತು ಕೊಪ್ಪ ಸೇತುವೆಯುದ್ದಕ್ಕೂ ನೂರಾರು ಮಂದಿ ಟಿಬೇಟಿಯನ್ನರು ಹರ್ಷೋದ್ಘಾರದೊಂದಿಗೆ ಅದ್ಧೂರಿ ಸ್ವಾಗತ ಕೋರಿದರು. ಧರ್ಮಗುರು ಆಗಮಿಸುತ್ತಿರುವ ಹಿನ್ನಲೆಯಲ್ಲಿ ಇಡೀ ಬೈಲುಕುಪ್ಪೆ ಮದುಮಗಳಂತೆ ಸಿಂಗಾರಗೊಂಡಿತ್ತು.

ನಂತರ ಸೆರಲಾಚಿ ದೇವಾಲಯ ಪ್ರವೇಶ ಮಾಡಿದ ದಲೈಲಾಮಾ ಅವರು ಹಯಗ್ರೀವ ದೇವರಿಗೆ ಆರಂಭಿಕ ಪೂಜೆ ಸಲ್ಲಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ನಾವು ಏನೇ ಮಾಡಿದರೂ ಅದನ್ನು ತಪ್ಪು ಎಂಬಂತೆ ಬಿಂಬಿಸುತ್ತಿದ್ದು, ನನ್ನ ಆ್ಯಪ್ನ್ನು ಚೀನಿಯರು ನಿಷೇಧಿಸಿದ್ದಾರೆ," ಎಂದು ಬೇಸರ ವ್ಯಕ್ತಪಡಿಸಿದರು.
ದೇಶದಲ್ಲಿ ಜಾರಿಯಾಗಿರುವ ಜಿಎಸ್ಟಿಯಿಂದ ಟಿಬೇಟಿಯನ್ರ ಪ್ರಮುಖ ವ್ಯಾಪಾರವಾದ ಸ್ಪೆಟರ್ ವ್ಯಾಪಾರಕ್ಕೆ ತೊಂದರೆಯಾಗಿರುವ ಬಗ್ಗೆ ನಿಮ್ಮ ಅಭಿಪ್ರಾಯವೇನು ಎಂಬ ಸುದ್ದಿಗಾರರ ಪ್ರಶ್ನೆಗೆ ಜಿಎಸ್ಟಿ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.
ದಲೈಲಾಮಾ ಅವರು ಮೂರುದಿನಗಳ ಕಾಲ ವಾಸ್ತವ್ಯ ಹೂಡಲಿರುವುದರಿಂದ ಸೂಕ್ತ ಪೊಲೀಸ್ ಬಂದೊಬಸ್ತ್ ಏರ್ಪಡಿಸಲಾಗಿದೆ.
-
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು -
Amala Paul: ಡೇಟಿಂಗ್ನಲ್ಲೇ ಗರ್ಭಿಣಿಯಾದೆ, ಆತುರದಲ್ಲಿ ಎರಡನೇ ಮದುವೆ ಆಯ್ತು: ಹೆಬ್ಬುಲಿ ನಟಿ ಅಮಲಾ ಪೌಲ್ -
Oscars 2026: ಮೈಕಲ್ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ: ಪ್ರಶಸ್ತಿ ವಿಜೇತರ ಪಟ್ಟಿ ಇಲ್ಲಿದೆ -
SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಹಾಲ್ ಟಿಕೆಟ್ ತೋರಿಸಿದ್ರೆ KSRTC ಬಸ್ಸುಗಳಲ್ಲಿ ಉಚಿತ ಪ್ರಯಾಣ












Click it and Unblock the Notifications