ಮಾವುತರಿಗೆ ಸ್ಪೆಷಲ್ ಊಟ ಬಡಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಮೈಸೂರು, ಸೆಪ್ಟೆಂಬರ್. 23: ಚಾಲೆಂಜಿಂಗ್ ಸ್ಟಾರ್ ದರ್ಶನ್ ದಸರಾ ಗಜಪಡೆಗೆ ಹಾಗೂ ಮಾವುತ, ಕಾವಾಡಿಗಳಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಿ ಸ್ವತಃ ಉಣಬಡಿಸಿದರು.
ದರ್ಶನ್ ಜೊತೆ ಸೃಜನ್ ಲೋಕೇಶ್, ಪ್ರಜ್ವಲ್ ದೇವರಾಜ್, ಹಾಸ್ಯ ನಟರಾದ ವಿಶ್ವ, ಮಂಡ್ಯ ರಮೇಶ್ ಸೇರಿದಂತೆ ಹಲವು ನಟರು ಇಂದು ಅರಮನೆ ಆವರಣಕ್ಕೆ ಆಗಮಿಸಿದ್ದರು. ಈ ವೇಳೆ ಗಜಪಡೆ ಕಂಡು ಖುಷಿ ಪಟ್ಟರು. ಅಂಬಾರಿ ಆನೆ ಅರ್ಜುನನ್ನು ಕಂಡ ದರ್ಶನ್, ಅದರ ಮೈ ಸವರಿ ಖುಷಿಪಟ್ಟರು.
ಬಳಿಕ ಗಜಪಡೆಯೊಂದಿಗೆ ಆಗಮಿಸಿರುವ ಕಾವಾಡಿ ಮತ್ತು ಮಾವುತರ ಕುಟುಂಬಸ್ಥರನ್ನ ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.

ತುಪ್ಪದ ಹೋಳಿಗೆ, ಗೋದಿಕಡಿ ಪಾಯಸ, ಚಿರೋಟಿ ಬಾದಾಮಿ ಹಾಲು, ಗ್ಲಾಸ್ ಸ್ಯಾನ್ವಿಚ್, ಮೊಳಕೆ ಕಾಳು ಕೋಸಂಬರಿ, ಸುವರ್ಣಗೆಡ್ಡೆ ಚಾಪ್ಸ್, ಬೆಂಡೆಕಾಯಿ ಪೆಪ್ಪರ್ ಡ್ರೈ, ಮಿಕ್ಸಡ್ ಪಲ್ಯ ಜೋಳದ ರೊಟ್ಟಿ ಸೇರಿದಂತೆ ನಾನಾ ಬಗೆಯ ಖಾದ್ಯಗಳನ್ನು ಮಾವುತ, ಕಾವಾಡಿಗಳು ಹಾಗೂ ಅವರ ಕುಟುಂಬದವರು ಸವಿದರು.
ಅಷ್ಟೇ ಅಲ್ಲ, ದರ್ಶನ್ ಕಡೆಯಿಂದ ದಸರಾ ಗಜಪಡೆ, ಮಾವುತ, ಕಾವಾಡಿಗಳಿಗೆ ವಿಶೇಷ ಗಿಫ್ಟ್ ನೀಡಲಾಯಿತು. ಮಕ್ಕಳಿಗೆ ಬ್ಯಾಗ್ ಮತ್ತು ಪುಸ್ತಕಗಳು, ಮಾವುತರು ಹಾಗೂ ಕಾವಾಡಿಗಳ ಕುಟುಂಬಗಳಿಗೆ ಹೊಸ ಬಟ್ಟೆಗಳನ್ನು ನೀಡಲಾಯಿತು.
ಈ ಆತಿಥ್ಯ ಕಾರ್ಯಕ್ರಮದಲ್ಲಿ ಸಿನಿ ತಾರೆಯಾರರೊಂದಿಗೆ ರಾಜವಂಶಸ್ಥ ಯದುವೀರ್ ಕೂಡ ಭಾಗವಹಿಸಿದ್ದು ವಿಶೇಷವಾಗಿತ್ತು. ಎಲ್ಲರೊಂದಿಗೆ ಊಟ ಮಾಡುವ ಮೂಲಕ ನಟರು ತಮ್ಮ ಸರಳತೆ ಮೆರೆದರು. ಈ ವೇಳೆ ಮಾತನಾಡಿದ ಯದುವೀರ್, ನಟ ದರ್ಶನ್ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು. ಎಲ್ಲರು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದು ಸಂತಸ ತಂದಿದೆ ಎಂದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications