ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರಿನಲ್ಲಿ ನಟ ದರ್ಶನ್ ತೂಗುದೀಪ ಕಾರು ಅಪಘಾತ

|
Google Oneindia Kannada News

Recommended Video

ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಕಾರು -ನಟ ದರ್ಶನ್ ಗೆ ಗಂಭೀರ ಗಾಯ | Oneindia Kannada

ಮೈಸೂರು, ಸೆಪ್ಟೆಂಬರ್ 24: ಚಿತ್ರ ನಟ ದರ್ಶನ್ ಪ್ರಯಾಣಿಸುತ್ತಿದ್ದ ಕಾರು ಮೈಸೂರಿನಲ್ಲಿ ಅಪಘಾತಕ್ಕೊಳಗಾಗಿದ್ದು, ಅವರ ಬಲ ಮುಂಗೈ ಮುರಿದಿದೆ ಎಂದು ವರದಿಗಳು ತಿಳಿಸಿವೆ.

ಬೆಳಿಗ್ಗೆ ಸುಮಾರು ಮೂರು ಗಂಟೆಯ ಸಮಯದಲ್ಲಿ ಘಟನೆ ನಡೆದಿದ್ದು, ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಅಪಘಾತವಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ದರ್ಶನ್ ಅವರೊಂದಿಗೆ ನಟರಾದ ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಸಹ ಪ್ರಯಾಣಿಸುತ್ತಿದ್ದರು. ಅವರಿಗೂ ಗಾಯವಾಗಿದ್ದು, ಮೂವರಿಗೂ ಮೈಸೂರಿನ ಖಾಸಗೀ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಾವುತರಿಗೆ ಸ್ಪೆಷಲ್ ಊಟ ಬಡಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾವುತರಿಗೆ ಸ್ಪೆಷಲ್ ಊಟ ಬಡಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್

ಮೈಸೂರಿನ ಕೋಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ದರ್ಶನ್ ಚಿಕಿತ್ಸೆ ಪಡೆಯುತ್ತಿದ್ದು, ಪತ್ನಿ ವಿಜಯಲಕ್ಷ್ಮಿ ಮತ್ತು ಪುತ್ರ, ಬಂಧುಗಳು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.ಲೇಟಸ್ಟ್ ಮಾಹಿತಿಯ ಪ್ರಕಾರ ಅಪಘಾತವಾಗುತ್ತಿದ್ದ ಸಮಯದಲ್ಲು ದರ್ಶನ್ ಕಾರು ಓಡಿಸುತ್ತಿರಲಿಲ್ಲ ಎಂದೂ ಹೇಳಲಾಗುತ್ತಿದೆ.

ಪೊಲಿಸ್ ಪ್ರಕರಣವಾಗಬಾರದು ಎಂಬ ಕಾರಣಕ್ಕೆ ದರ್ಶನ್ ಕಾರು ಚಲಾಯಿಸುತ್ತಿರಲಿಲ್ಲ ಎನ್ನಲಾಗುತ್ತಿದೆಯೇ ಎಂಬ ಅನುಮಾನವೂ ವ್ಯಕ್ತವಾಗಿದೆ.

ಅಪಘಾತದ ನಂತರ ನಾಪತ್ತೆಯಾಗಿದ್ದ ಅವರ ಆಡಿ ಕ್ಯೂ7 ಕಾರು ನಾಪತ್ತೆಯಾಗಿ ಅಚ್ಚರಿ ಮೂಡಿಸಿತ್ತು. ಆದರೆ ಆ ಕಾರು ಬೆಂಗಳೂರಿಗೆ ಶಿಫ್ಟ್ ಆಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬೆಳಗ್ಗೆ ಮೂರು ಗಂಟೆಗೆ ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆ ಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾದ ಪರಿಣಾಮ ಈ ಘಟನೆ ನಡೆದಿದೆ.

ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ

ಖಾಸಗೀ ಹೊಟೇಲ್ ನಿಂದ ಹೊರಟಾಗ ಅಪಘಾತ

ತಡರಾತ್ರಿ ಖಾಸಗೀ ಹೊಟೇಲ್ ನಿಂದ ಕಾರ್ಯಕ್ರಮವೊಂದನ್ನು ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ. ಹಿರಿಯ ನಟ ದೇವರಾಜ್ ,ಪುತ್ರ ಪ್ರಜ್ವಲ್ ದೇವರಾಜ್ ಹಾಗೂ ಮತ್ತೋರ್ವ ಸ್ನೇಹಿತನಿಗೂ ಗಾಯವಾಗಿ ಎಂದು ವರದಿಗಳು ತಿಳಿಸಿವೆ.

ಆಟೋ ಕ್ರಾಸ್ ರೇಸ್ ನಲ್ಲಿ ಧೂಳೆಬ್ಬಿಸಲು ರೆಡಿಯಾಗುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್ ಆಟೋ ಕ್ರಾಸ್ ರೇಸ್ ನಲ್ಲಿ ಧೂಳೆಬ್ಬಿಸಲು ರೆಡಿಯಾಗುತ್ತಿದ್ದಾರೆ ಚಾಲೆಂಜಿಂಗ್ ಸ್ಟಾರ್

ದರ್ಶನ್ ಗೆ ಶಸ್ತ್ರ ಚಿಕಿತ್ಸೆ

ದರ್ಶನ್ ಗೆ ಶಸ್ತ್ರ ಚಿಕಿತ್ಸೆ

ದರ್ಶನ್ ಅವರ ಕೈ ಮುರಿದ ಪರಿಣಾಮ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ. ದೇವರಾಜ್ ಅವರ ಎದೆಯ ಭಾಗಕ್ಕೆ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಅವರಿಗೆ ಕುತ್ತಿಗೆ ಭಾಗಕ್ಕೆ ಪೆಟ್ಟಾಗಿದೆ.

ರಾಮನಗರದಲ್ಲಿ ದರ್ಶನ್ ನೋಡಲು ಜನವೋ ಜನ, ಲಾಠಿ ರುಚಿ ಕಂಡ ಅಭಿಮಾನಿಗಳು ರಾಮನಗರದಲ್ಲಿ ದರ್ಶನ್ ನೋಡಲು ಜನವೋ ಜನ, ಲಾಠಿ ರುಚಿ ಕಂಡ ಅಭಿಮಾನಿಗಳು

ಅಪಘಾತ ಆಗಿದ್ದೇಕೆ?

ಅಪಘಾತ ಆಗಿದ್ದೇಕೆ?

ಚಾಲಕನ ನಿಯಂತ್ರಣ ತಪ್ಪಿ, ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದ್ದು, ಕಾರು ಪಂಚರ್ ಆದ ಕಾರಣ ಅಪಘಾತ ಸಂಭವಿಸಿದೆ ಎಂದು ಹೇಳಿ ನಟರು ಸುಮಾರು 3:30 ರ ಸುಮಾರಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ನಟ ದರ್ಶನ್ ಕಾರು ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣನಟ ದರ್ಶನ್ ಕಾರು ಅಪಘಾತಕ್ಕೆ ಚಾಲಕನ ನಿರ್ಲಕ್ಷ್ಯವೇ ಕಾರಣ

ಒಡೆಯ ಚಿತ್ರದ ಶೂಟಿಂಗ್

ಒಡೆಯ ಚಿತ್ರದ ಶೂಟಿಂಗ್

'ಒಡೆಯ' ಚಿತ್ರದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದ ದರ್ಶನ್, ಅದಕ್ಕೆಂದೇ ಮೈಸೂರಿಗೆ ತೆರಳಿದ್ದರು ಎನ್ನಲಾಗಿದೆ. ಕಾರ್ಯಕ್ರಮ ಮುಗಿಸಿ ತಡರಾತ್ರಿ ಮೈಸೂರಿನಿಂದ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ ವೇಳೆಯಲ್ಲಿ ಈ ಘಟನೆ ನಡೆದಿದೆ.ಅಪಘಾತವಾಗುತ್ತಿದ್ದ ಸಮಯದಲ್ಲಿ ದರ್ಶನ್ ಅವರೇ ಕಾರು ಚಲಾಯಿಸುತ್ತಿದ್ದರು ಎನ್ನಲಾಗಿದೆ.

ಅಪಘಾತದಲ್ಲಿ ನಟ ದರ್ಶನ್ ಬಲಗೈ ಮೂಳೆ ಮುರಿತ: ಯಶಸ್ವಿ ಚಿಕಿತ್ಸೆ ಬಳಿಕ ಚೇತರಿಕೆಅಪಘಾತದಲ್ಲಿ ನಟ ದರ್ಶನ್ ಬಲಗೈ ಮೂಳೆ ಮುರಿತ: ಯಶಸ್ವಿ ಚಿಕಿತ್ಸೆ ಬಳಿಕ ಚೇತರಿಕೆ

English summary
Kannada actor Darshan along with actors Devaraj and Prajwal Devraj met with an accident near Mysuru
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X