ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ನಡೆದಿದ್ದು ಐಟಿ ದಾಳಿಯಲ್ಲ!
Recommended Video
ಮೈಸೂರು, ಏಪ್ರಿಲ್ 15:ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಪರ ಪ್ರಚಾರಕ್ಕಿಳಿದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಫಾರ್ಮ್ ಹೌಸ್ ಮೇಲೆ ನಡೆದಿದ್ದು ಐಟಿ ದಾಳಿಯಲ್ಲ, ಅದು ಚುನಾವಣಾ ಅಧಿಕಾರಿಗಳ ಪರಿಶೀಲನೆ ಎಂಬ ಸ್ಪಷ್ಟ ಮಾಹಿತಿ ಇದೀಗ ಲಭ್ಯವಾಗಿದೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ಮೈಸೂರಿನ ಟಿ. ನರಸೀಪುರ ರಸ್ತೆಯಲ್ಲಿರುವ ದರ್ಶನ್ ತೂಗುದೀಪ ಫಾರ್ಮ್ ಹೌಸ್ ಮೇಲೆ ಚುನಾವಣೆ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ಬಗ್ಗೆ ನಟ ದರ್ಶನ್ ಪ್ರತಿಕ್ರಿಯೆ ನೀಡಿದ್ದು, ಪ್ರಾಣಿ-ಪಕ್ಷಿಗಳನ್ನು ನೋಡಿಕೊಂಡು ಹೋಗ್ಲಿ ಬಿಡಿ ಎಂದು ಕೂಲ್ ಆಗಿಯೇ ಉತ್ತರ ನೀಡಿದ್ದಾರೆ.
ನಟ ದರ್ಶನ್ ಫಾರ್ಮ್ ಹೌಸ್ ಮೇಲೆ ಐಟಿ ದಾಳಿ
ನಟ ದರ್ಶನ್ ಫಾರಂ ನಲ್ಲಿ ಚುನಾವಣೆಗೆ ಹಣ ಹಂಚಲು ಹಣ ಇಟ್ಟಿದ್ದಾರೆ ಎನ್ನುವ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಟಿ.ನರಸೀಪುರ ತಹಶೀಲ್ದಾರ್ ಗೆ ಸಾರ್ವಜನಿಕರು ಕರೆ ಮಾಡಿದ್ದರು. ಸಾರ್ವಜನಿಕರ ದೂರಿನ ಮಲೆ ದರ್ಶನ್ ಫಾರಂ ಹೌಸ್ ನಲ್ಲಿ ತಪಾಸಣೆ ನಡೆಸಲಾಗಿದೆ.
ತಪಾಸಣೆ ಮಾಡಿದ ವೇಳೆ ಯಾವುದೇ ಹಣ ಪತ್ತೆಯಾಗಿಲ್ಲ ಎಂಬ ಮಾಹಿತಿಯನ್ನು ತಿ.ನರಸೀಪುರ ತಹಶೀಲ್ದಾರ್ ನೀಡಿದ್ದಾರೆ.