ನಾಡ ಹಬ್ಬ ದಸರಾ ನಾಂದಿ ಜತೆ ಸಿಂಹಾಸನ ವೀಕ್ಷಿಸಿ
ಮೈಸೂರು, ಸೆ.30: ನಾಡ ಹಬ್ಬ ದಸರಾ ಮಹೋತ್ಸವಕ್ಕೆ ನಾಂದಿ ಹಾಡುತ್ತಿದ್ದಂತೆ ಒಡೆಯರ್ ಮನೆತನದ ರತ್ನ ಖಚಿತ ಸಿಂಹಾಸನ ಸಾರ್ವಜನಿಕರ ವೀಕ್ಷಣೆಗೆ ಲಭ್ಯವಾಗಲಿದೆ. ಅಕ್ಟೋಬರ್ 5 ರಿಂದ ಪ್ರವಾಸಿಗರು ಸಿಂಹಾಸನವನ್ನು ವೀಕ್ಷಿಸುವ ಅವಕಾಶ ಕಲ್ಪಿಸಲಾಗಿದೆ. ರತ್ನ ಖಚಿತ ಸಿಂಹಾಸನವನ್ನು ಕನ್ಯಾ ಲಗ್ನದಲ್ಲಿ ಶಾಸ್ತ್ರೋಕ್ತವಾಗಿ ಭಾನುವಾರ ಜೋಡಿಸಲಾಯಿತು.
ಅ.5 ರಿಂದ 15ರವರೆಗೆ ಸಾರ್ವಜನಿಕರಿಗೆ ಸಿಂಹಾಸನ ನೋಡುವ ಭಾಗ್ಯ ಲಭಿಸಲಿದೆ. ಅರಮನೆಯ ಭದ್ರತಾ ಕೊಠಡಿ ಬಾಗಿಲನ್ನು ಜಿಲ್ಲಾಧಿಕಾರಿ ಸಿ.ಶಿಖಾ, ನಗರ ಪೊಲೀಸ್ ಆಯುಕ್ತ ಎಂ.ಎ.ಸಲೀಮ್ ಸಮ್ಮುಖದಲ್ಲಿ ಮುಜರಾಯಿ ಇಲಾಖೆ ಅಧಿಕಾರಿಗಳು ತೆರೆದರು. ಈ ಸಂದರ್ಭದಲ್ಲಿ ಮೈಸೂರು ಮಹರಾಜ ಶ್ರೀಕಂಠದತ್ತ ಒಡೆಯರ್ ಹಾಗೂ ಅವರ ಪತ್ನಿ ಮಹಾರಾಣಿ ಪ್ರಮೋದಾ ದೇವಿ ಒಡೆಯರ್ ಅವರು ಉಪಸ್ಥಿತರಿದ್ದರು.
ತಲೆ ತಲಾಂತರಗಳಿಂದ ಜೋಡಣೆ ಕೆಲಸ ಮಾಡಿಕೊಂಡು ಬಂದಿರುವ ಗೆಜ್ಜಗಳ್ಳಿ ಗ್ರಾಮದ ಆಯ್ದ ಕುಟುಂಬದ ಸದಸ್ಯರಿಂದ ಒಂಬತ್ತು ಭಾಗಗಳ ಜೋಡಣೆ ಸಾಂಪ್ರದಾಯಿಕವಾಗಿ ನೆರವೇರಿತು. ನವರಾತ್ರಿ ವೇಳೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ನಡೆಸುವ ಖಾಸಗಿ ದರ್ಬಾರ್ ಸಲುವಾಗಿ ಸಿಂಹಾಸನವನ್ನು ಜೋಡಿಸಲಾಗುತ್ತದೆ.
ಅ. 5ರ ಬೆಳಗ್ಗೆ 6.12ಕ್ಕೆ ಬೆಳ್ಳಿಯ ಎರಡು ಸಿಂಹಗಳಿರುವ ಸಿಂಹವನ್ನು ಜೋಡಿಸುವ ಕೆಲಸ ಶಾಸ್ತ್ರೋಕ್ತವಾಗಿ ನಡೆದು, ವಿಶೇಷ ಪೂಜೆ ಬಳಿಕ ಶುಭಲಗ್ನದಲ್ಲಿ ಮಹಾರಾಜರು ಸಿಂಹಾಸನದ ಮೇಲೆ ಆರೋಹಣ ಮಾಡಿ ಖಾಸಗಿ ದರ್ಬಾರು ನಡೆಸುತ್ತಾರೆ.

ರತ್ನಖಚಿತ ಸಿಂಹಾಸನ: ಅರಮನೆಯ ದರ್ಬಾರ್ ಹಾಲ್ ನಲ್ಲಿರುವ ರತ್ನ ಖಚಿತ ಸಿಂಹಾಸನವನ್ನು ದಸರಾ ಸಂದರ್ಭದಲ್ಲಿ ಮಾತ್ರ ಜೋಡಿಸಲಾಗುತ್ತದೆ. ಮೈಸೂರಿಗೆ ಸಮೀಪದ ಗೆಜ್ಜಗಳ್ಳಿ ಗ್ರಾಮದಿಂದ ಆಯ್ದ ಕೆಲವರನ್ನು ಮಾತ್ರ ಕರೆತರಲಾಗುತ್ತದೆ. ಸಿಂಹಾಸನ ಪಾಂಡವರ ಕಾಲದೆನ್ನಲಾಗಿದ್ದು, ಆ ಕಾಲದಲ್ಲಿ ಕಂಪುಲ ರಾಜನು ಇದನ್ನು ತಂದು ಪೆನಗೊಂಡದಲ್ಲಿ ಹೂತಿಟ್ಟಿದ್ದನು ಎನ್ನಲಾಗಿದೆ.
1338ರಲ್ಲಿ ಮಹರ್ಷಿ ವಿದ್ಯಾರಣ್ಯರು ಧ್ಯಾನದೃಷ್ಟಿಯಿಂದ ಇದನ್ನು ಅರಿತು ವಿಜಯನಗರದ ಚಕ್ರಾಧಿಪತ್ಯದ ಸ್ಥಾಪಕ ಹರಿಹರನಿಗೆ ತಿಳಿಸಿದರೆಂದು ಅದರಂತೆ ಹೊರತೆಗೆದು 150 ವರ್ಷಗಳ ಕಾಲ ಆನೆಗೊಂದಿಯಲ್ಲಿ ಅಲಂಕರಿಸಿದರೆಂದೂ ಬಳಿಕ ವಿಜಯನಗರದ ಅವನತಿಯ ವೇಳೆಗೆ ಶ್ರೀರಂಗಪಟ್ಟಣದಲ್ಲಿದ್ದ ವಿಜಯನಗರದ ರಾಯಭಾರಿಯ ಅರಮನೆಗೆ ಸಾಗಿಸಲಾಯಿತೆಂದು ಹೇಳಲಾಗಿದೆ.
ಆ ಬಳಿಕ 1609ರಲ್ಲಿ ಆಗಿನ ಮೈಸೂರು ಅರಸರಾದ ರಾಜಒಡೆಯರ್ ಶ್ರೀರಂಗರಾಜುಲುರನ್ನು ತಲಕಾಡಿಗೆ ಓಡಿಸಿ ಶ್ರೀರಂಗಪಟ್ಟಣವನ್ನು ವಶಪಡಿಸಿಕೊಂಡರು. 1610ರಲ್ಲಿ ತಮ್ಮ ರಾಜಧಾನಿಯನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ಬದಲಾಯಿಸಿದಾಗ ಸಿಂಹಾಸನವನ್ನು ಮೈಸೂರಿನ ಅರಮನೆಗೆ ಸಾಗಿಸಲಾಯಿತು.
ಸಿಂಹಾಸನವು ಚಿನ್ನದ ಬಾಳೆಯ ಕಂಬ ಮತ್ತು ಚಿನ್ನದ ಮಾವಿನ ಎಲೆಗಳಿಂದ ಅಲಂಕರಿಸಲ್ಪಟ್ಟಿದೆ. ಛತ್ರಿಯ ತುದಿಯಲ್ಲಿ ಒಡವೆಗಳಿಂದ ಅಲಂಕರಿಸಿದ ಪಕ್ಷಿಯನ್ನು ಕೂರಿಸಲಾಗಿದೆ. ಸಿಂಹಾಸನವನ್ನು ಹತ್ತುವ ಎರಡು ಕಡೆಗಳಲ್ಲೂ ಸ್ತ್ರೀಪುತ್ಥಳಿಯನ್ನು ನಿರ್ಮಿಸಲಾಗಿದೆ.
ಜೊತೆಗೆ ಛತ್ರಿಯ ಸುತ್ತಲೂ ಮುತ್ತಿನ ಕುಚ್ಚುಗಳನ್ನು ಕಟ್ಟಲಾಗಿದೆ. ಅಲ್ಲದೆ ಸಿಂಹಾಸನಕ್ಕೆ ಕೂರ್ಮರೂಪದ ಆಸನವನ್ನು ಒದಗಿಸಲಾಗಿದೆ. ಉಭಯ ಪಾಶ್ವಗಳಲ್ಲಿ ಯಾಳಿಗಳನ್ನು ಮತ್ತು ನಾಲ್ಕು ಕಡೆಗಳಲ್ಲಿ ಬಳ್ಳಿ ಲತೆಗಳನ್ನು ಕೆತ್ತಲಾಗಿದೆ.
ಸಿಂಹಾಸನದ ದಕ್ಷಿಣದಲ್ಲಿ ಬ್ರಹ್ಮ, ಉತ್ತರದಲ್ಲಿ ಶಿವ, ಮಧ್ಯದಲ್ಲಿ ವಿಷ್ಣುವನ್ನು ನಿಲ್ಲಿಸಲಾಗಿದೆ. ವಿಜಯ ಸೂಚಕ ನಾಲ್ಕು ಸಿಂಹಗಳನ್ನು ಇಡಲಾಗಿದೆ. ಮೂರು ಕೋನಗಳಲ್ಲೂ ರಾಕ್ಷಸ ಶರೀರ, ಎರಡು ಕುದುರೆಗಳು ಮತ್ತು ನಾಲ್ಕು ಹಂಸಪಕ್ಷಿಗಳನ್ನಿಡಲಾಗಿದೆ.
ನಾಗದೇವತೆಗಳ ಚಿತ್ರಗಳು, ಸ್ವಾಸ್ತಿಕ ಆಕೃತಿ ಮತ್ತು ಮುತ್ತಿನ ಹಡಗು ಮೇಲಿನ ಗುಡಾರಗಳ ಚಿತ್ರಣಗಳಿವೆ. ಸಿಂಹಾಸನವನ್ನು ನಾಲ್ಕು ದಿಕ್ಕುಗಳಲ್ಲಿ ತೆರೆಯಲಾಗಿದೆ. ಸಿಂಹಾಸನದ ಛತ್ರಿಯ ಮೇಲೆ ಸಂಸ್ಕೃತದ 96 ಸಾಲುಗಳ ಶ್ಲೋಕಗಳಿವೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications