ಮೈಸೂರು ದಸರಾ: ಇಲ್ಲಿದೆ ಕಾರ್ಯಕ್ರಮದ ಪಟ್ಟಿ
ಮೈಸೂರು, ಸೆಪ್ಟೆಂಬರ್ 13 : ಸಾಂಸ್ಕೃತಿಕ ನಗರಿ ಮೈಸೂರು ದಸರಾ ಸಂಭ್ರಮಕ್ಕೆ ಮಧುವಣಗಿತ್ತಿಯಂತೆ ಶೃಂಗಾರಗೊಳ್ಲುತ್ತಿದ್ದರೆ, ವಿಶ್ವವಿಖ್ಯಾತಿಯ ಅರಮನೆಯಲ್ಲಿ ಶರನ್ನವರಾತ್ರಿಯ ಪೂಜಾ ಮಹೋತ್ಸವಕ್ಕೆ ಭರದ ಸಿದ್ಧತೆ ಕೈಗೊಳ್ಳಗುತ್ತಿದೆ,
ಸೆ. 15ರಂದು ಬೆಳಿಗ್ಗೆ 7.45 ರಿಂದ 8.45ರವರೆಗೆ ನವಗ್ರಹ ಹೋಮ, ಇತರ ಶಾಂತಿ ಪೂಜೆಯೊಂದಿಗೆ ನವರಾತ್ರಿಯಪೂಜಾ ಕೈಂಕರ್ಯಗಳು ಆರಂಭಗೊಳ್ಳಲಿದ್ದು, 9.45 ರಿಂದ 10.15ರವರೆಗೆ ಅಂಬಾವಿಲಾಸದಲ್ಲಿ ಸಿಂಹಾಸನ ಜೋಡಣೆಗೆ ಚಾಲನೆ ದೊರೆಯಲಿದೆ. ಈ ವೇಳೆ ಪಟ್ಟದ ಆನೆ, ಹಸು, ಕುದುರೆ ಪಾಲ್ಗೊಳ್ಳಲಿವೆ.

ಸೆ. 21ರಂದು ಬೆಳಿಗ್ಗೆ 7.55ರಿಂದ 8.15ರವರೆಗೆ ಸಿಂಹಾಸನಕ್ಕೆ ಸಿಂಹ ಜೋಡಣೆ ಕಾರ್ಯ ನಡೆಯಲಿದ್ದು, 8.20 ರಿಂದ 9.10 ಗಂಟೆಯವರೆಗೆ ಚಾಮುಂಡಿ ತೊಟ್ಟಿಯಲ್ಲಿ ಕಂಕಣಧಾರಣ ಮಹೋತ್ಸವ ನಡೆಯಲಿದೆ. 11.15ಕ್ಕೆ ಪಟ್ಟದ ಆನೆ, ಪಟ್ಟದ ಕುದುರೆ, ಪಟ್ಟದ ಹಸು ಸವಾರ ತೊಟ್ಟಿ ಬಳಿ ಆಗಮಿಸಲಿದ್ದು, ಮಧ್ಯಾಹ್ನ 12 ಗಂಟೆಗೆ ಕಳಸ ಪೂಜಾ ಹಾಗೂ ಇತರ ಧಾರ್ಮಿಕ ವಿಧಿ -ವಿಧಾನಗಳು ನೇರವೇರಲಿದ್ದು, ನಂತರ ಸಿಂಹಾಸನಾರೋಹಣ ಕಾರ್ಯಕ್ರಮ ನಡೆಯಲಿದೆ.
ಮಧ್ಯಾಹ್ನ 12.45ರಿಂದ 12.55ರವರೆಗೆ ಯುವರಾಜ ಯದುವೀರ್ ಕೃಷ್ಣದತ್ತ ಚಾಮರಾಜ ಡೆಯರ್ ಸಿಂಹಾಸನಾರೂಢರಾಗಿಲಿದ್ದಾರೆ. ನಂತರ 1.35ರಿಂದ 1.45ರವರೆಗೆ ಚಾಮುಂಡಿ ತೊಟ್ಟಿಯಿಂದ ಕನ್ನಡಿ ತೊಟ್ಟಿಗೆ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿಯ ಬಿಜಯಂಗೈಯಲಾಗುವುದು. ಸೆ.27ರಂದು ಬೆಳಿಗ್ಗೆ 9.15 ರಿಂದ 9.45 ರವರೆಗೆ ಸರಸ್ವತಿ ಪೂಜೆ ಆರಂಭಗೊಳ್ಳಲಿದೆ. ನಂತರ ಕನ್ನಡಿ ತೊಟ್ಟಿಯಲ್ಲಿ ಕಾಳರಾತ್ರಿ ಪೂಜೆ ನೆರವೇರಲಿದೆ.
ಸೆ. 29ರಂದು ಬೆಳಿಗ್ಗೆ 6.15 ಕ್ಕೆ ಚಂಡೀ ಹೋಮ ರಂಭಗೊಳ್ಳಲಿದ್ದು, 6.45ರ ವೇಳೆಗೆ ಆನೆ ಬಾಗಿಲು ಒಳಗೆ ಪಟ್ಟದ ಆನೆ, ಕುದುರೆ, ಹಸು ಆಗಮಿಸಲಿವೆ. ಬೆಳಿಗ್ಗೆ 7.25ರ ವೇಳೆಗೆ ಆನೆ ಬಾಗಿಲು ಮೂಲಕ ಯುಧಗಳನ್ನು ಶ್ರೀ ಕೋಡಿ ಸೋಮೇಶ್ವರಸ್ವಾಮಿ ದೇಗುಲಕ್ಕೆ ಕೊಂಡೊಯ್ಯಲಾಗುವುದು. ಅಲ್ಲಿ ಪೂಜಾ ಕಾರ್ಯಗಳನ್ನು ಮುಗಿಸಿದ ಬಳಿಕ 8.20 ರಿಂದ 8.40ರ ವೇಳೆಗೆ ಆಯುಧಗಳನ್ನು ದೇವಸ್ಥಾನದಿಂದ ಕ್ಲಯಾಣ ಮಂಟಪಕ್ಕೆ ತರಲಾಗುವುದು. ನಂತರ 8.45 ರಿಂದ 9 ಗಂಟೆಯ ವೇಳೆಗೆ ಚಂಡೀ ಹೋಮದ ಪೂರ್ಣಾಹುತಿ ನೆರವೇರಲಿದೆ.
ಮಧ್ಯಾಹ್ನ 12.15 ಕ್ಕೆ ಆಯುಧ ಪೂಜಾ ವಿಧಾನಗಳು ಆರಂಭಗೊಳ್ಳಿದೆ. ರಾತ್ರಿ 7 ಗಂಟೆಗೆ ಅಂಬಾ ವಿಲಾಸ ದರ್ಬಾರ್ ಹಾಲ್ ನಲ್ಲಿ ಯುವರಾಜರ ದರ್ಬಾರ್ ನಡೆಯಲಿದ್ದು. ನಂತರ ಸಿಂಹಾಸನದ ಸಿಂಹ ವಿಸರ್ಜನೆ ನಡೆಯಲಿದೆ. ತದ ನಂತರ ದೇವರ ಮನೆಯಲ್ಲಿ ಕಂಕಣವನ್ನು ವಿಸರ್ಜಿಸಲಾಗುವುದು.
ಸೆ. 30ರಂದು ಬೆಳಿಗ್ಗೆ 11ಕ್ಕೆ ಆನೆ ಬಾಗಿಲು ಬಳಿ ಪಟ್ಟದಾನೆ, ಹಸು, ಕುದುರೆ ಆಗಮಿಸಲಿದ್ದು, 12.10ಕ್ಕೆ ಆಯುಧಗಳನ್ನು ಉತ್ತರ ಪೂಜೆ ನಂತರ ಶ್ರೀ ಭುವನೇಶ್ವರಿ ದೇವಸ್ಥಾನಕ್ಕೆ ಕೊಂಡೊಯ್ಯಲಾಗುವುದು. ಈ ವೇಳೆ ವಿಜಯಯಾತ್ರೆ ಶಮೀ ವೃಕ್ಷದ ಶಮೀ ಪೂಜೆ ನಡೆಯಲಿದೆ. ವಿಜಯಯಾತ್ರೆ ನಂತರ ಶ್ರೀ ಚಾಮುಂಡೇಶ್ವರಿ ಅಮ್ಮನವರನ್ನು ಕನ್ನಡಿ ತೊಟ್ಟಿಯಿಂದ ಚಾಮುಂಡಿ ಯೊಟ್ಟಿಯಲ್ಲಿ ಬಿಜಯಂಗೈಸಲಾಗುವುದು. ಅಕ್ಟೋಬರ್ 14 ರಂದು ಬೆಳಿಗ್ಗೆ 10.45ರಿಂದ 11.45ರವರೆಗೆ ಸಿಂಹಾಸನದ ವಿಸರ್ಜನೆ ನೆರವೇರಿಸಿ ಕೊಠಡಿಯಲ್ಲಿ ಭದ್ರಪಡಿಸಲಾಗುವುದು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications