ಮೈಸೂರು ದಸರಾ 2022; ದಸರಾ ಚಲನಚಿತ್ರೋತ್ಸವಕ್ಕೆ ಚಾಲನೆ ನೀಡಿದ ನಟಿ
ಮೈಸೂರು, ಸೆಪ್ಟೆಂಬರ್, 26: ಮೈಸೂರು ನಗರದ ಕಲಾಮಂದಿರದಲ್ಲಿ ದಸರಾ ಚಲನಚಿತ್ರೋತ್ಸವಕ್ಕೆ ಚಿತ್ರ ನಟಿ ಅನುಪ್ರಭಾಕರ್, ಅಮೃತ ಅಯ್ಯಂಗಾರ್ ಚಾಲನೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾತನಾಡಿ, ಚಲನಚಿತ್ರೋತ್ಸವದಲ್ಲಿ ಹಲವು ಚಲನಚಿತ್ರಗಳನ್ನು ವೀಕ್ಷಿಸುವ ಸುವರ್ಣ ಅವಕಾಶ ಸಿಕ್ಕಿದೆ. ಚಲನಚಿತ್ರೋತ್ಸವದಲ್ಲಿ ಒಂದು ದಿನ ಪುನೀತ್ ರಾಜ್ಕುಮಾರ್ ಅಭಿನಯದ ಚಿತ್ರಗಳನ್ನೇ ಪ್ರದರ್ಶಿಸುವಂತೆ ಸೂಚಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಎರಡು ವರ್ಷಗಳಿಂದ ಸರಳ ದಸರಾ ಆಚರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಅದ್ಧೂರಿ ಕಾರ್ಯಕ್ರಮವನ್ನು ಮಾಡಲಾಗುತ್ತಿದೆ. ಸುಮಾರು 124 ಕಿಲೋ ಮೀಟರ್ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಯುವ ದಸರಾದಲ್ಲಿ ಅಪ್ಪು ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಅವರು ಆಗಮಿಸಲಿದ್ದಾರೆ ಎಂದು ಹೇಳಿದರು.
ಚಲನಚಿತ್ರೋತ್ಸವಕ್ಕೆ ಚಾಲನೆ
ನಂತರ ಚಿತ್ರ ನಟಿ ಅನುಪ್ರಭಾಕರ್ ಅವರು ಮಾತನಾಡಿ, 2007ರಲ್ಲಿ ಪಾರ್ವತಮ್ಮ ರಾಜ್ಕುಮಾರ್ ಹಾಗೂ ಎಂ.ಪಿ.ಶಂಕರ್ ಅವರ ಜೊತೆ ಇದೇ ಚಲನಚಿತ್ರೋತ್ಸವವನ್ನು ಉದ್ಘಾಟಿಸುವ ಮೂಲಕ ವೇದಿಕೆ ಹಂಚಿಕೊಂಡಿದ್ದೆ. ಮತ್ತೆ ಇದೇ ಕಾರ್ಯಕ್ರಮದಲ್ಲಿ ಭಾಗಿ ಆಗಿರುವುದಕ್ಕೆ ಸಂತೋಷ ಆಗುತ್ತಿದೆ.
ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಅಪ್ಪುದಿನ ಮಾಡಿ, ಅಪ್ಪು ಚಿತ್ರಗಳನ್ನು ಪ್ರದರ್ಶನ ಮಾಡಲಾಗುತ್ತಿದೆ. ಕರ್ನಾಟಕ, ಕನ್ನಡಿಗರು ಇರುವವರೆಗೂ ಅಪ್ಪು ಅಮರರಾಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮೇಯರ್ ಶಿವಕುಮಾರ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಅಪರ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ, ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ.ಹರೀಶ್, ನಟಿಯರಾದ ಕಾವ್ಯ ಶೆಟ್ಟಿ, ಅಮೃತ ಅಯ್ಯಂಗಾರ್ ಸೇರಿದಂತೆ ಹಲವರು ಗಣ್ಯರು ಉಪಸ್ಥಿತರಿದ್ದರು.

ದಿಢೀರ್ ಯುವ ದಸರಾ ಮುಂದೂಡಿಕೆ
ಯುವ ದಸರಾ ಕಾರ್ಯಕ್ರಮ ಒಂದು ದಿನ ಮುಂದೂಡಿಕೆ ಮಾಡಲಾಗಿದ್ದು, ಸೆಪ್ಟೆಂಬರ್ 26ರ ಬದಲಿಗೆ ಸೆಪ್ಟೆಂಬರ್ 27ರಂದು ನಡೆಸಲು ನಿರ್ಧರಿಸಲಾಗಿದೆ. ಇಂದು ಮೈಸೂರಿನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಯುವ ದಸರಾ ಕಾರ್ಯಕ್ರಮವನ್ನು ಒಂದು ದಿನ ಮುಂದೂಡಲಾಗಿದ್ದು, ಸೆಪ್ಟೆಂಬರ್ 26ರ ಬದಲು ಸೆಪ್ಟೆಂಬರ್ 27ಕ್ಕೆ ಯುವದಸರಾ ಕಾರ್ಯಕ್ರಮ ನಡೆಸಲು ತೀರ್ಮಾನಿಸಲಾಗಿದೆ. ಡಾ. ಪುನೀತ್ ರಾಜ್ಕುಮಾರ್ ಅವರಿಗೆ ಈ ಬಾರಿಯ ಯುವ ದಸರಾ ಅರ್ಪಣೆ ಮಾಡಲಾಗಿದ್ದು, ಯುವದಸರಾವನ್ನು ಪುನೀತ್ ರಾಜ್ಕುಮಾರ್ ಪತ್ನಿ ಅಶ್ವನಿ ಅವರು ಉದ್ಘಾಟಿಸಲಿದ್ದಾರೆ.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಕರ್ನಾಟಕದಲ್ಲಿ ಜೀವ ಬಲಿ ಪಡೆಯುತ್ತಿರುವ ಖಾಸಗಿ ಬಸ್ಗಳು: 6 ವರ್ಷಗಳಲ್ಲಿ 3,823 ಅಪಘಾತ ಪ್ರಕರಣಗಳು ವರದಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ












Click it and Unblock the Notifications